AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್

ಜೀ ಕನ್ನಡದಲ್ಲಿ ಹೊಸದಾಗಿ 'ಜೋಡಿ ನಂ. 1' ಎಂಬ ಸೆಲೆಬ್ರಿಟಿ ದಂಪತಿಗಳ ರಿಯಾಲಿಟಿ ಶೋ ಏಪ್ರಿಲ್ 4 ರಿಂದ ಪ್ರಸಾರವಾಗಲಿದೆ. ರಾಜೇಶ್ ನಟರಂಗ, ಛಾಯಾ ಸಿಂಗ್, ಮಾಳವಿಕಾ ಅವಿನಾಶ್, ನೆನಪಿರಲಿ ಪ್ರೇಮ್ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ. ಕುರಿ ಪ್ರತಾಪ್ ಹಾಗೂ ಶ್ವೇತಾ ಚೆಂಗಪ್ಪ ನಿರೂಪಿಸುವ ಈ ಶೋನಲ್ಲಿ ವಿವಿಧ ಸೆಲೆಬ್ರಿಟಿ ಜೋಡಿಗಳು ತಮ್ಮ ಕಥೆ, ದಾಂಪತ್ಯ ಜೀವನದ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1' ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್
ಜೋಡಿ ನಂಬರ್ 1
ರಾಜೇಶ್ ದುಗ್ಗುಮನೆ
|

Updated on:Apr 01, 2026 | 1:46 PM

Share

ಜೀ ಕನ್ನಡದಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಾ ಇರುತ್ತವೆ. ಎಲ್ಲಾ ರಿಯಾಲಿಟಿ ಶೋಗಳು ಸಾಕಷ್ಟು ಮನರಂಜನೆ ನೀಡುವ ರೀತಿಯಲ್ಲಿ ಇದೆ. ಈಗ ಹೊಸ ರಿಯಾಲಿಟಿ ಶೋ ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ‘ಜೋಡಿ ನಂಬರ್ 1’. ಏಪ್ರಿಲ್ 4ರಂದು ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣಲಿದೆ. ‘ಅಮೃತಧಾರೆ’ ಧಾರಾವಾಹಿ ಜೋಡಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಸೇರಿದಂತೆ ಅನೇಕರು ಜಡ್ಜ್ ಸ್ಥಾನದಲ್ಲಿ ಇದ್ದಾರೆ ಅನ್ನೋದು ವಿಶೇಷ.

ಜೀ ಕನ್ನಡದಲ್ಲಿ ಕಾಮಿಡಿ ಕಿಲಾಡಿಗಳು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಸರಿಗಮಪ ಸೇರಿದಂತೆ ಅನೇಕ ರಿಯಾಲಿಟಿ ಶೋಗಳು ಪ್ರಸಾರ ಕಂಡಿವೆ. ಇದರ ಮೂಲಕ ಅನೇಕ ಪ್ರತಿಭೆಗಳಿಗೆ ವಾಹಿನಿ ವೇದಿಕೆ ಆಗಿದೆ. ಈಗ ಸೆಲೆಬ್ರಿಟಿ ಜೋಡಿಯನ್ನು ಪ್ರೇಕ್ಷಕರ ಎದುರು ತರುವ ಪ್ರಯತ್ನ ನಡೆದಿದೆ. ಈ ಶೋಗೆ ‘ಜೋಡಿ ನಂಬರ್ 1’ ಎಂದು ಹೆಸರು ಇಡಲಾಗಿದೆ.

ಹಿರಿಯ ಹಾಗೂ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೆಲೆಬ್ರಿಟಿ ಜೋಡಿಯನ್ನು ಈ ಶೋನಲ್ಲಿ ಕರೆತರಲಾಗುತ್ತಿದೆ. ಮನರಂಜನೆ ಜೊತೆಗೆ ಜೋಡಿಯ ಹಿನ್ನೆಲೆ, ಪರಸ್ಪರ ಭೇಟಿ ಆದ ಕಥೆ ಹಾಗೂ ಮದುವೆ ಆದ ಬಳಿಕ ಜೀವನದಲ್ಲಿ ಆದ ಬದಲಾವಣೆಯನ್ನು ರಿಯಾಲಿಟಿ ಶೋನಲ್ಲಿ ಹೇಳಲಾಗುತ್ತಿದೆ.

ಈ ಶೋನಲ್ಲಿ ತೀರ್ಪುಗಾರರೇ ಹೈಲೈಟ್. ಏಕೆಂದರೆ ಹಿರಿಯ ನಟಿ ಮಾಳವಿಕಾ ಅವಿನಾಶ್ ಜಡ್ಜ್ ಸ್ಥಾನದಲ್ಲಿದ್ದಾರೆ. ‘ಅಮೃತಧಾರೆ’ ಧಾರಾವಾಹಿ ಮೂಲಕ ಎಲ್ಲರ ಮೆಚ್ಚುಗೆ ಪಡೆದ ಭೂಮಿಕಾ-ಗೌತಮ್ ಅಲಿಯಾಸ್ ಛಾಯಾ ಸಿಂಗ್ ಮತ್ತು ರಾಜೇಶ್ ನಟರಂಗ, ನೆನಪಿರಲಿ ಪ್ರೇಮ್ ಈ ಶೋ ನ ತೀರ್ಪುಗಾರರು. ಇವರು ಸ್ಪರ್ಧಿಗಳಿಗೆ ಮಾರ್ಗದರ್ಶಕರೂ ಆಗಿರಲಿದ್ದಾರೆ. ತೀರ್ಪುಗಾರರು ಶೋನಲ್ಲಿರೋ ಜೋಡಿಗಳಿಗೆ ಮಾತ್ರವಲ್ಲ, ವೀಕ್ಷಕರ ದಾಂಪತ್ಯಕ್ಕೂ ಟಿಪ್ಸ್ ನೀಡುವ ಕೆಲಸ ಮಾಡಲಿದ್ದಾರೆ. ಈ ಶೋನ ಕುರಿ ಪ್ರತಾಪ್ ಮತ್ತು ಚೆಲುವೆ ಶ್ವೇತಾ ಚೆಂಗಪ್ಪ ಅವರು ನಿರೂಪಿಸಲಿದ್ದಾರೆ. ಹೀಗಾಗಿ, ಇಲ್ಲಿ ಹಾಸ್ಯಕ್ಕೆ ಯಾವುದೇ ಕೊರತೆ ಇರೋದಿಲ್ಲ.

ಇದನ್ನೂ ಓದಿ: ‘ಹೂವಿನ ಬಾಣದಂತೆ’ ಹುಡುಗಿಗೆ ಜೀ ಕನ್ನಡ ಅವಕಾಶ; ಟ್ರೋಲ್ ಮಾಡಿದವರಿಗೆ ನಿತ್ಯಶ್ರೀ ತಿರುಗೇಟು

ಶೋನಲ್ಲಿ ಭಾಗವಹಿಸಲಿರೋ ಜೋಡಿಗಳು:

ರುದ್ರ ಮಾಸ್ಟರ್ – ನಿರೀಕ್ಷ, ಧನರಾಜ್ – ಪ್ರಜ್ಞಾ, ರಜನಿ-ಅರುಣ್ ಗೌಡ, ನಯನಾ ನಾಗರಾಜ್ – ಸುಹಾಸ್, ಬಾಳು ಬೆಳಗುಂದಿ – ಮಾಲಾಶ್ರೀ, ಜಗ್ಗಪ್ಪ – ಸುಶ್ಮಿತಾ, ಮಿಮಿಕ್ರಿ ಗೋಪಿ – ಉಷಾರಾಣಿ, ಗೀತಾ ಭಾರತೀ ಭಟ್ – ರಾಜಾರಾಮ್ ಭಟ್, ಕೋಟೆ ಪ್ರಭಾಕರ್ – ಮಾಲತಿ ಹಾಗೂ ಅಭಿಲಾಷ್ – ಅಪೂರ್ವ ಅವರು ಜೋಡಿ.ನಂ.1 ನಲ್ಲಿ ಸ್ಪರ್ಧಿಗಳಾಗಿದ್ದಾರೆ. ಇವರಿಗೆ ವಿವಿಧ ಟಾಸ್ಕ್​​ಗಳು,ರ‍್ಯಾಪಿಡ್ ಫೈಯರ್ ರೀತಿಯ ಟಾಸ್ಕ್ ಇರಲಿದೆ. ಜೀ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಶೋ ಪ್ರಸಾರ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:46 pm, Wed, 1 April 26

Follow Us