AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜನಂದಿನಿಯ ಕೊಂದ ಝೇಂಡೆಗೆ ಪ್ರಾಣಭಿಕ್ಷೆ ನೀಡಿದ ಅನು; ‘ಜೊತೆ ಜೊತೆಯಲಿ’ ಸುಖಾಂತ್ಯ

Jothe Jotheyali Climax Episode: ಕಥೆಗೆ ಟ್ವಿಸ್ಟ್​ ನೀಡಿ ಆರ್ಯನ ಪಾತ್ರಕ್ಕೆ ಹರೀಶ್​ ರಾಜ್ ಅವರನ್ನು ಕರೆತರಲಾಯಿತು. ಇತ್ತೀಚೆಗೆ ಧಾರಾವಾಹಿಯ ಟಿಆರ್​ಪಿ ಕುಸಿದಿತ್ತು. ಹೀಗಾಗಿ ಧಾರಾವಾಹಿ ಕೊನೆಗೊಳಿಸಲಾಗಿದೆ.

ರಾಜನಂದಿನಿಯ ಕೊಂದ ಝೇಂಡೆಗೆ ಪ್ರಾಣಭಿಕ್ಷೆ ನೀಡಿದ ಅನು; ‘ಜೊತೆ ಜೊತೆಯಲಿ’ ಸುಖಾಂತ್ಯ
ಅನು-ಝೇಂಡೆ-ಆರ್ಯ
ರಾಜೇಶ್ ದುಗ್ಗುಮನೆ
|

Updated on: May 19, 2023 | 10:33 AM

Share

‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali Serial) ಪೂರ್ಣಗೊಳ್ಳಲಿದೆ ಎಂದು ಇತ್ತೀಚೆಗೆ ನಿರ್ಮಾಪಕ ಆರೂರು ಜಗದೀಶ್ ಅವರು ಘೋಷಣೆ ಮಾಡಿದ್ದರು. ಅಂತೆಯೇ ಇಂದು (ಮೇ 19) ಈ ಧಾರಾವಾಹಿ ಪೂರ್ಣಗೊಳ್ಳುತ್ತಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಹ್ಯಾಪಿ ಎಂಡಿಂಗ್ ಕಂಡಿದೆ. ವಿಲನ್ ಕೇಶವ್ ಝೇಂಡೆ ಬದಲಾಗಿದ್ದಾನೆ. ಈತನಿಗೆ ಅನು ಸಿರಿಮನೆ (Anu Sirimane) ಪ್ರಾಣಭಿಕ್ಷೆ ನೀಡಿದ್ದಾಳೆ. ಎಲ್ಲಕ್ಕಿಂತ ಮುಖ್ಯವಾಗಿ ರಾಜನಂದಿನಿಯನ್ನು ಕೊಂದಿದ್ದು ಝೇಂಡೆ ಎನ್ನುವ ವಿಚಾರ ರಿವೀಲ್ ಆಗಿದೆ. ಧಾರಾವಾಹಿ ಸುಖಾಂತ್ಯ ಕಂಡಿದೆ.

ಆರ್ಯವರ್ಧನ್ ಪಾತ್ರವನ್ನು ಈ ಮೊದಲು ಅನಿರುದ್ಧ ಜತ್ಕರ್ ನಿರ್ವಹಿಸುತ್ತಿದ್ದರು. ಅವರು ಧಾರಾವಾಹಿಯಿಂದ ಹೊರಹೋಗಬೇಕಾದ ಪರಿಸ್ಥಿತಿ ಬಂತು. ಇದು ಅನೇಕರಿಗೆ ಬೇಸರ ತರಿಸಿತು. ಕಥೆಗೆ ಟ್ವಿಸ್ಟ್​ ನೀಡಿ ಆರ್ಯನ ಪಾತ್ರಕ್ಕೆ ಹರೀಶ್​ ರಾಜ್ ಅವರನ್ನು ಕರೆತರಲಾಯಿತು. ಇತ್ತೀಚೆಗೆ ಧಾರಾವಾಹಿಯ ಟಿಆರ್​ಪಿ ಕುಸಿದಿತ್ತು. ಹೀಗಾಗಿ ಧಾರಾವಾಹಿ ಕೊನೆಗೊಳಿಸಲಾಗಿದೆ.

ಆರ್ಯನ ಮೊದಲ ಪತ್ನಿ ರಾಜನಂದಿನಿಯ ಕೊಂದಿದ್ದು ಝೇಂಡೆ. ಶಾರದಾ ದೇವಿಯ ಪತಿಯನ್ನು ಕೊಂದಿದ್ದೂ ಆತನೇ. ಈ ವಿಚಾರವನ್ನು ಶಾರದಾ ದೇವಿ ರಿವೀಲ್ ಮಾಡಿದಳು. ಪ್ರಪಾತದಲ್ಲಿ ಸಿಕ್ಕಿ ಬಿದ್ದಿದ್ದ ರಾಜನಂದಿನಿ ಸಾವಿಗೆ ಝೇಂಡೆಯೇ ಕಾರಣ ಆಗಿದ್ದ. ಪ್ರಾಣ ಉಳಿಸುವ ಅವಕಾಶ ಇದ್ದರೂ ಅದನ್ನು ಕೈಚೆಲ್ಲಿದ್ದ. ಈಗ ಝೇಂಡೆಗೂ ಅದೇ ಪರಿಸ್ಥಿತಿ ಬಂದಿತ್ತು. ಆತ ಪ್ರಪಾತಕ್ಕೆ ಬೀಳುವವನಿದ್ದ. ಆದರೆ, ಝೇಂಡೆಗೆ ಅನು ಪ್ರಾಣಭಿಕ್ಷೆ ನೀಡಿದ್ದಾಳೆ. ಈ ಘಟನೆಯಿಂದ ಆತ ಬದಲಾಗಿದ್ದ. ಅನುನ ಋಣ ತೀರಿಸಲು ಝೇಂಡೆ ನಿರ್ಧರಿಸಿದ್ದಾನೆ.

ಮತ್ತೊಂದು ಕಡೆ ಆರಾಧನಾ ಮನೆ ಬಿಟ್ಟು ಹೋಗಿದ್ದಾಳೆ. ಆರ್ಯನನ್ನು ನೋಡಿದಾಗಲೆಲ್ಲ ಆಕೆಗೆ ತನ್ನ ಪತಿಯೇ (ವಿಶ್ವಾಸ್) ನೆನಪಾಗುತ್ತಿದ್ದ. ಹೀಗಾಗಿ ಪತಿಯನ್ನು ಬಿಟ್ಟುಕೊಡಲು ಅನು ಮುಂದಾಗಿದ್ದಳು. ಅದಕ್ಕೂ ಮೊದಲೇ ಆರಾಧನಾ ಮನೆ ಬಿಟ್ಟು ಹೋಗಿದ್ದಾಳೆ. ಈ ಮೂಲಕ ಅನು-ಆರ್ಯ ಮತ್ತೆ ಒಂದಾಗಿದ್ದಾರೆ. ಈ ಮೂಲಕ ಧಾರಾವಾಹಿ ಸುಖಾಂತ್ಯ ಕಂಡಿದೆ.

ಇದನ್ನೂ ಓದಿ: ಶೀಘ್ರವೇ ಪೂರ್ಣಗೊಳ್ಳಲಿದೆ ‘ಜೊತೆ ಜೊತೆಯಲಿ’ ಧಾರಾವಾಹಿ’; ಕಾರಣ ಏನು?

ಧಾರಾವಾಹಿ ಆರಂಭ ಮಾಡಿದಾಗ 1000 ಎಪಿಸೋಡ್ ಪೂರ್ಣಗೊಳಿಸಬೇಕು ಅನ್ನೋದು ತಂಡದ ಉದ್ದೇಶ ಆಗಿತ್ತು. ಆದರೆ, ಸಾಕಷ್ಟು ಏರಿಳಿತ ಉಂಟಾದ ಹಿನ್ನೆಲೆಯಲ್ಲಿ 953 ಎಪಿಸೋಡ್​ಗೆ ಧಾರಾವಾಹಿ ಪೂರ್ಣಗೊಳಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!