AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿಗೆ ಬಂತು ಪ್ರ್ಯಾಂಕ್​ ಕಾಲ್​​; ನಟಿಯ ಉತ್ತರ ಹೇಗಿತ್ತು?

ಕಳೆದ ವಾರ ಈ ಶೋಗೆ ನಟ ಅನಿರುದ್ಧ್​, ಮಾಸ್ಟರ್​ ಆನಂದ್​ ಹಾಗೂ ವಿನಾಯಕ್ ಜೋಶಿ ಆಗಮಿಸಿದ್ದರು. ಇವರು ಮೇಘಾ ಶೆಟ್ಟಿಗೆ ಕಾಲ್​ ಮಾಡಿ ಪ್ರ್ಯಾಂಕ್​ ಮಾಡಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿಗೆ ಬಂತು ಪ್ರ್ಯಾಂಕ್​ ಕಾಲ್​​; ನಟಿಯ ಉತ್ತರ ಹೇಗಿತ್ತು?
ಮೇಘಾ ಶೆಟ್ಟಿ
TV9 Web
| Edited By: |

Updated on: Mar 05, 2022 | 7:51 AM

Share

ನಟಿ ಮೇಘಾ ಶೆಟ್ಟಿ(Megha Shetty) ಅವರು ‘ಜೊತೆ ಜೊತೆಯಲಿ’ ಧಾರಾವಾಹಿ (Jothe Jotheyali) ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟೀವ್​ ಆಗಿದ್ದಾರೆ. ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಕಿರುತೆರೆ ಮಾತ್ರವಲ್ಲದೆ, ಹಿರಿತೆರೆಯಲ್ಲೂ ಅವರು ಆ್ಯಕ್ಟೀವ್​ ಆಗಿದ್ದಾರೆ. ಕೆಲ ಸಿನಿಮಾಗಳನ್ನು ಒಪ್ಪಿಕೊಂಡು ಮಾಡುತ್ತಿದ್ದಾರೆ. ಈಗ ಅವರನ್ನು ಪ್ರ್ಯಾಂಕ್​ ಮಾಡಲಾಗಿದೆ. ಈ ವಿಡಿಯೋ ಈಗ ಸಖತ್ ವೈರಲ್​ ಆಗುತ್ತಿದೆ. ಹಾಗಾದರೆ ಅವರಿಗೆ ಯಾವ ವಿಚಾರ ಇಟ್ಟುಕೊಂಡು ಪ್ರ್ಯಾಂಕ್​ ಮಾಡಲಾಗಿದೆ? ಪ್ರ್ಯಾಂಕ್​ ಮಾಡಿದವರು ಯಾರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಜ.8ರಿಂದ ಈ ಹೊಚ್ಚ ಹೊಸ ರಿಯಾಲಿಟಿ ಶೋ ‘ಗೋಲ್ಡನ್​ ಗ್ಯಾಂಗ್​’ ಪ್ರಸಾರ ಆರಂಭ ಆಗಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 9 ಗಂಟೆಗೆ ವೀಕ್ಷಕರು ‘ಗೋಲ್ಡನ್​ ಗ್ಯಾಂಗ್​’ ಪ್ರಸಾರ ಆಗುತ್ತಿದೆ. ಜೀವನದ ಎಲ್ಲ ಪ್ರಮುಖ ಘಟ್ಟಗಳಲ್ಲೂ ಭಾಗವಾಗಿರುವ ಸ್ನೇಹಿತರು ಪ್ರತಿಯೊಬ್ಬರ ಪಾಲಿಗೂ ಮಹತ್ವದ ಪಾತ್ರ ವಹಿಸುತ್ತಾರೆ. ಕುಟುಂಬದಷ್ಟೇ ಸರಿಸಮನಾಗಿ, ನಂತರ ತಾವೂ ಕೂಡ ಕುಟುಂಬದ ಭಾಗವಾಗುವ ಸ್ನೇಹಿತರಿಗೆ ಜೀ ಕನ್ನಡ ವಾಹಿನಿ ಈ ಕಾರ್ಯಕ್ರಮವನ್ನು ಅರ್ಪಿಸಿದೆ. ಇದರ ಜೊತೆಗೆ ಒಂದಷ್ಟು ಮೋಜು-ಮಸ್ತಿ, ಆಟ-ತುಂಟಾಟ ಕೂಡ ಈ ಶೋನಲ್ಲಿ ಇದೆ. ಕಳೆದ ವಾರ ಈ ಶೋಗೆ ನಟ ಅನಿರುದ್ಧ್​, ಮಾಸ್ಟರ್​ ಆನಂದ್​ ಹಾಗೂ ವಿನಾಯಕ್ ಜೋಶಿ ಆಗಮಿಸಿದ್ದರು. ಇವರು ಮೇಘಾ ಶೆಟ್ಟಿಗೆ ಕಾಲ್​ ಮಾಡಿ ಪ್ರ್ಯಾಂಕ್​ ಮಾಡಿದ್ದಾರೆ.

ವಿನಾಯಕ್​ ಜೋಶಿ ಅವರು ಮೇಘಾಗೆ ಕರೆ ಮಾಡಿದ್ದಾರೆ. ‘ನಾನು ವಿಗ್​ ಕುಮಾರ್​. ನೀವು ಸೀರಿಯಲ್​ಗೆ ವಿಗ್​ ಬೇಕು ಎಂದಿದ್ದೀರಲ್ಲ’ ಎಂದರು ವಿನಾಯಕ್​ ಜೋಶಿ. ‘ಕ್ಷಮಿಸಿ, ರಾಂಗ್​ ನಂಬರ್​. ನಾನು ವಿಗ್​ ಹೇಳಿಲ್ಲ. ನೀವು ಕನ್​ಫ್ಯೂಸ್​ ಆಗಿದ್ದೀರಿ ಅನಿಸುತ್ತದೆ. ನನಗೆ ನ್ಯಾಚುರಲ್​ ಆಗಿಯೇ ಕೂದಲು ಇದೆ’ ಎಂದರು ಮೇಘಾ ಶೆಟ್ಟಿ. ಇಬ್ಬರೂ ಚರ್ಚೆ ನಡೆಸುತ್ತಲೇ ಇದ್ದರು. ಆ ಬಳಿಕ ಮಾಸ್ಟರ್​ ಆನಂದ್​ ಮಾತನಾಡಿದರು.

‘ರಾಜ ನಂದಿನಿ ಪಾತ್ರಕ್ಕೆ ಬೇಕು ಅಂತ ನೀವೇ ಹೇಳಿದ್ರಿ. ಅದಕ್ಕಾಗಿ ವಿಗ್​ ಮಾಡಿಸಿದ್ದೀವಿ’ ಎಂದು ಮಾಸ್ಟರ್​ ಆನಂದ್ ಹೇಳಿದರು. ‘ನಾನು ರಾಜನಂದಿನಿ ಪಾತ್ರ ಮಾಡುತ್ತಾ ಇಲ್ಲ. ನೀವು ಕನ್​ಫ್ಯೂಸ್​ ಆಗಿದ್ದೀರಿ’ ಎಂದು ಮೇಘಾ ಶೆಟ್ಟಿ ಮತ್ತೆಮತ್ತೆ ಹೇಳಿದರು. ಕೊನೆಯಲ್ಲಿ ಕರೆ ಎತ್ತಿಕೊಂಡಿದ್ದು ಅನಿರುದ್ಧ್​ ಅವರು. ಅವರು ಮಾತನಾಡುತ್ತಿದ್ದಂತೆ ಮೇಘಾ ಶೆಟ್ಟಿಗೆ ಈ ವಿಚಾರ ಗೊತ್ತಾಗಿದೆ. ಆ ಬಳಿಕ ಅವರು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಇದನ್ನೂ ಓದಿ: ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ