AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ

ಒಂದು ಸಿನಿಮಾದಲ್ಲಿ ನಟಿಸಿದ ನಂತರ ಸಾಲುಸಾಲು ಸಿನಿಮಾ ಆಫರ್​ಗಳು ಬರೋದು ಸಹಜ. ಮೇಘಾ ಶೆಟ್ಟಿಗೂ ಇದೇ ರೀತಿ ಆಗುತ್ತಿದೆಯಾ? ಈ ಪ್ರಶ್ನೆಗೆ ಅವರು ‘ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಎನ್ನುವ ಉತ್ತರ ನೀಡಿದ್ದಾರೆ.

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ
ಮೇಘಾ ಶೆಟ್ಟಿ (ಚಿತ್ರ ಕೃಪೆ: ಇನ್​ಸ್ಟಾಗ್ರಾಮ್)
ರಾಜೇಶ್ ದುಗ್ಗುಮನೆ
|

Updated on: Sep 18, 2021 | 8:25 PM

Share

ಕಿರುತೆರೆಯಲ್ಲಿ ಖ್ಯಾತಿ ಹೆಚ್ಚಿದ ನಂತರ ಅನೇಕರಿಗೆ ಹಿರಿತೆರೆ ಆಫರ್​ ಬರುತ್ತದೆ. ಆಗ ನಟ-ನಟಿಯರು ಕಿರುತೆರೆ ತೊರೆದು ಹಿರಿತೆರೆಯಲ್ಲಿ ಬ್ಯುಸಿಯಾಗಿ ಬಿಡುತ್ತಾರೆ. ಈಗ ಮೇಘಾ ಶೆಟ್ಟಿ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಆಫರ್ ಹೆಚ್ಚೆಚ್ಚು ಬಂದರೂ ಅವರು ಧಾರಾವಾಹಿ ಜಗತ್ತನ್ನು ಬಿಟ್ಟು ಹೋಗುವುದಿಲ್ಲವಂತೆ. ಈ ಬಗ್ಗೆ ಸ್ವತಃ ಮೇಘಾ ಶೆಟ್ಟಿ ಹೇಳಿಕೊಂಡಿದ್ದಾರೆ.

ಮೇಘಾ ಶೆಟ್ಟಿ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಆಗಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕಿ ಅನು ಮಧ್ಯಮವರ್ಗದ ಹುಡುಗಿ ಸಾಕಷ್ಟು ವಯಸ್ಸಿನ ಅಂತರ ಇರುವ ಶ್ರೀಮಂತ ಮನೆಯ ವ್ಯಕ್ತಿಯನ್ನು (ಅನಿರುದ್ಧ್​) ಮದುವೆ ಆಗುತ್ತಾಳೆ. ಈ ಧಾರಾವಾಹಿ ಮೇಘಾಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆ. ಇದೇ ಕಾರಣಕ್ಕೆ ಅವರಿಗೆ ಸಿನಿಮಾ ಆಫರ್​ಗಳು ಬರುತ್ತಿವೆ. ಗಣೇಶ್​ ನಟನೆಯ ‘ತ್ರಿಬಲ್​ ರೈಡಿಂಗ್​’ ಚಿತ್ರದ ಮೂಲಕ ಮೇಘಾ ಶೆಟ್ಟಿ ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಶುಕ್ರವಾರ (ಸೆಪ್ಟೆಂಬರ್​ 17) ಸಿನಿಮಾದ ಶೂಟಿಂಗ್​ ಮುಗಿದಿದೆ. ಇದೇ ಖುಷಿಯಲ್ಲಿ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ಒಂದು ಸಿನಿಮಾದಲ್ಲಿ ನಟಿಸಿದ ನಂತರ ಸಾಲುಸಾಲು ಸಿನಿಮಾ ಆಫರ್​ಗಳು ಬರೋದು ಸಹಜ. ಮೇಘಾ ಶೆಟ್ಟಿಗೂ ಇದೇ ರೀತಿ ಆಗುತ್ತಿದೆಯಾ? ಈ ಪ್ರಶ್ನೆಗೆ ಅವರು ‘ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಎನ್ನುವ ಉತ್ತರ ನೀಡಿದ್ದಾರೆ. ಈ ಮೂಲಕ ಕುತೂಹಲ ಕಾಯ್ದುಕೊಂಡಿದ್ದಾರೆ.

ಒಂದೊಮ್ಮೆ ಸಿನಿಮಾ ಆಫರ್​ ಹೆಚ್ಚಾದರೆ ಕಿರುತೆರೆ ತೊರೆಯುತ್ತೀರಾ ಎನ್ನುವ ಪ್ರಶ್ನೆಗೆ ಅವರು ಕೊಡುವ ಉತ್ತರ ವಿಶೇಷವಾಗಿದೆ. ‘ಸಿನಿಮಾ ಸೀರಿಯಲ್​ ಎರಡನ್ನೂ ನಾನು ನಿಭಾಯಿಸಿಕೊಂಡು ಹೋಗುತ್ತೇನೆ. ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ. ಅದರ ಜತೆಗಿನ ಒಡನಾಟ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಎರಡನ್ನೂ ಬ್ಯಾಲೆನ್ಸ್​ ಮಾಡಿಕೊಂಡು ಹೋಗುತ್ತೇನೆ’ ಎನ್ನುತ್ತಾರೆ ಅವರು.

ತ್ರಿಬಲ್​ ರೈಡಿಂಗ್ ಚಿತ್ರಕ್ಕೆ ಮೂವರು ನಾಯಕಿಯರು. ಮೇಘಾ ಜತೆಗೆ ರಚನಾ ಇಂದರ್, ಅದಿತಿ ಪ್ರಭುದೇವ ಕೂಡ ನಟಿಸುತ್ತಿದ್ದಾರೆ. ಸಾಧು ಕೋಕಿಲ, ಕುರಿ ಪ್ರತಾಪ್​, ರವಿಶಂಕರ್, ರಂಗಾಯಣ ರಘು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀಮಹೇಶ್​ ಗೌಡ ಸಿನಿಮಾ ನಿರ್ದೇಶನ ಮಾಡಿದ್ದಾರೆ. ವೈ.ಎಂ. ರಾಮ್​ಗೋಪಾಲ್​ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ: ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

Megha Shetty: ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ಸಿನಿಮಾಗಾಗಿ ಕಾಯ್ತಾ ಇದೀರಾ?; ಇಲ್ಲಿದೆ ಗುಡ್​ ನ್ಯೂಸ್

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ