AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ

ಒಂದು ಸಿನಿಮಾದಲ್ಲಿ ನಟಿಸಿದ ನಂತರ ಸಾಲುಸಾಲು ಸಿನಿಮಾ ಆಫರ್​ಗಳು ಬರೋದು ಸಹಜ. ಮೇಘಾ ಶೆಟ್ಟಿಗೂ ಇದೇ ರೀತಿ ಆಗುತ್ತಿದೆಯಾ? ಈ ಪ್ರಶ್ನೆಗೆ ಅವರು ‘ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಎನ್ನುವ ಉತ್ತರ ನೀಡಿದ್ದಾರೆ.

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ
ಮೇಘಾ ಶೆಟ್ಟಿ (ಚಿತ್ರ ಕೃಪೆ: ಇನ್​ಸ್ಟಾಗ್ರಾಮ್)
ರಾಜೇಶ್ ದುಗ್ಗುಮನೆ
|

Updated on: Sep 18, 2021 | 8:25 PM

Share

ಕಿರುತೆರೆಯಲ್ಲಿ ಖ್ಯಾತಿ ಹೆಚ್ಚಿದ ನಂತರ ಅನೇಕರಿಗೆ ಹಿರಿತೆರೆ ಆಫರ್​ ಬರುತ್ತದೆ. ಆಗ ನಟ-ನಟಿಯರು ಕಿರುತೆರೆ ತೊರೆದು ಹಿರಿತೆರೆಯಲ್ಲಿ ಬ್ಯುಸಿಯಾಗಿ ಬಿಡುತ್ತಾರೆ. ಈಗ ಮೇಘಾ ಶೆಟ್ಟಿ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಆಫರ್ ಹೆಚ್ಚೆಚ್ಚು ಬಂದರೂ ಅವರು ಧಾರಾವಾಹಿ ಜಗತ್ತನ್ನು ಬಿಟ್ಟು ಹೋಗುವುದಿಲ್ಲವಂತೆ. ಈ ಬಗ್ಗೆ ಸ್ವತಃ ಮೇಘಾ ಶೆಟ್ಟಿ ಹೇಳಿಕೊಂಡಿದ್ದಾರೆ.

ಮೇಘಾ ಶೆಟ್ಟಿ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಆಗಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕಿ ಅನು ಮಧ್ಯಮವರ್ಗದ ಹುಡುಗಿ ಸಾಕಷ್ಟು ವಯಸ್ಸಿನ ಅಂತರ ಇರುವ ಶ್ರೀಮಂತ ಮನೆಯ ವ್ಯಕ್ತಿಯನ್ನು (ಅನಿರುದ್ಧ್​) ಮದುವೆ ಆಗುತ್ತಾಳೆ. ಈ ಧಾರಾವಾಹಿ ಮೇಘಾಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆ. ಇದೇ ಕಾರಣಕ್ಕೆ ಅವರಿಗೆ ಸಿನಿಮಾ ಆಫರ್​ಗಳು ಬರುತ್ತಿವೆ. ಗಣೇಶ್​ ನಟನೆಯ ‘ತ್ರಿಬಲ್​ ರೈಡಿಂಗ್​’ ಚಿತ್ರದ ಮೂಲಕ ಮೇಘಾ ಶೆಟ್ಟಿ ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಶುಕ್ರವಾರ (ಸೆಪ್ಟೆಂಬರ್​ 17) ಸಿನಿಮಾದ ಶೂಟಿಂಗ್​ ಮುಗಿದಿದೆ. ಇದೇ ಖುಷಿಯಲ್ಲಿ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ಒಂದು ಸಿನಿಮಾದಲ್ಲಿ ನಟಿಸಿದ ನಂತರ ಸಾಲುಸಾಲು ಸಿನಿಮಾ ಆಫರ್​ಗಳು ಬರೋದು ಸಹಜ. ಮೇಘಾ ಶೆಟ್ಟಿಗೂ ಇದೇ ರೀತಿ ಆಗುತ್ತಿದೆಯಾ? ಈ ಪ್ರಶ್ನೆಗೆ ಅವರು ‘ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಎನ್ನುವ ಉತ್ತರ ನೀಡಿದ್ದಾರೆ. ಈ ಮೂಲಕ ಕುತೂಹಲ ಕಾಯ್ದುಕೊಂಡಿದ್ದಾರೆ.

ಒಂದೊಮ್ಮೆ ಸಿನಿಮಾ ಆಫರ್​ ಹೆಚ್ಚಾದರೆ ಕಿರುತೆರೆ ತೊರೆಯುತ್ತೀರಾ ಎನ್ನುವ ಪ್ರಶ್ನೆಗೆ ಅವರು ಕೊಡುವ ಉತ್ತರ ವಿಶೇಷವಾಗಿದೆ. ‘ಸಿನಿಮಾ ಸೀರಿಯಲ್​ ಎರಡನ್ನೂ ನಾನು ನಿಭಾಯಿಸಿಕೊಂಡು ಹೋಗುತ್ತೇನೆ. ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ. ಅದರ ಜತೆಗಿನ ಒಡನಾಟ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಎರಡನ್ನೂ ಬ್ಯಾಲೆನ್ಸ್​ ಮಾಡಿಕೊಂಡು ಹೋಗುತ್ತೇನೆ’ ಎನ್ನುತ್ತಾರೆ ಅವರು.

ತ್ರಿಬಲ್​ ರೈಡಿಂಗ್ ಚಿತ್ರಕ್ಕೆ ಮೂವರು ನಾಯಕಿಯರು. ಮೇಘಾ ಜತೆಗೆ ರಚನಾ ಇಂದರ್, ಅದಿತಿ ಪ್ರಭುದೇವ ಕೂಡ ನಟಿಸುತ್ತಿದ್ದಾರೆ. ಸಾಧು ಕೋಕಿಲ, ಕುರಿ ಪ್ರತಾಪ್​, ರವಿಶಂಕರ್, ರಂಗಾಯಣ ರಘು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀಮಹೇಶ್​ ಗೌಡ ಸಿನಿಮಾ ನಿರ್ದೇಶನ ಮಾಡಿದ್ದಾರೆ. ವೈ.ಎಂ. ರಾಮ್​ಗೋಪಾಲ್​ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ: ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

Megha Shetty: ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ಸಿನಿಮಾಗಾಗಿ ಕಾಯ್ತಾ ಇದೀರಾ?; ಇಲ್ಲಿದೆ ಗುಡ್​ ನ್ಯೂಸ್

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು