AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ

ಒಂದು ಸಿನಿಮಾದಲ್ಲಿ ನಟಿಸಿದ ನಂತರ ಸಾಲುಸಾಲು ಸಿನಿಮಾ ಆಫರ್​ಗಳು ಬರೋದು ಸಹಜ. ಮೇಘಾ ಶೆಟ್ಟಿಗೂ ಇದೇ ರೀತಿ ಆಗುತ್ತಿದೆಯಾ? ಈ ಪ್ರಶ್ನೆಗೆ ಅವರು ‘ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಎನ್ನುವ ಉತ್ತರ ನೀಡಿದ್ದಾರೆ.

‘ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ, ಅದರ ಜತೆಗಿನ ಒಡನಾಟ ಎಲ್ಲಕಿಂತ ಹೆಚ್ಚು’; ಮೇಘಾ ಶೆಟ್ಟಿ
ಮೇಘಾ ಶೆಟ್ಟಿ (ಚಿತ್ರ ಕೃಪೆ: ಇನ್​ಸ್ಟಾಗ್ರಾಮ್)
ರಾಜೇಶ್ ದುಗ್ಗುಮನೆ
|

Updated on: Sep 18, 2021 | 8:25 PM

Share

ಕಿರುತೆರೆಯಲ್ಲಿ ಖ್ಯಾತಿ ಹೆಚ್ಚಿದ ನಂತರ ಅನೇಕರಿಗೆ ಹಿರಿತೆರೆ ಆಫರ್​ ಬರುತ್ತದೆ. ಆಗ ನಟ-ನಟಿಯರು ಕಿರುತೆರೆ ತೊರೆದು ಹಿರಿತೆರೆಯಲ್ಲಿ ಬ್ಯುಸಿಯಾಗಿ ಬಿಡುತ್ತಾರೆ. ಈಗ ಮೇಘಾ ಶೆಟ್ಟಿ ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಬ್ಯುಸಿ ಇದ್ದಾರೆ. ಮುಂದಿನ ದಿನಗಳಲ್ಲಿ ಸಿನಿಮಾ ಆಫರ್ ಹೆಚ್ಚೆಚ್ಚು ಬಂದರೂ ಅವರು ಧಾರಾವಾಹಿ ಜಗತ್ತನ್ನು ಬಿಟ್ಟು ಹೋಗುವುದಿಲ್ಲವಂತೆ. ಈ ಬಗ್ಗೆ ಸ್ವತಃ ಮೇಘಾ ಶೆಟ್ಟಿ ಹೇಳಿಕೊಂಡಿದ್ದಾರೆ.

ಮೇಘಾ ಶೆಟ್ಟಿ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಅನು ಸಿರಿಮನೆ ಆಗಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕಿ ಅನು ಮಧ್ಯಮವರ್ಗದ ಹುಡುಗಿ ಸಾಕಷ್ಟು ವಯಸ್ಸಿನ ಅಂತರ ಇರುವ ಶ್ರೀಮಂತ ಮನೆಯ ವ್ಯಕ್ತಿಯನ್ನು (ಅನಿರುದ್ಧ್​) ಮದುವೆ ಆಗುತ್ತಾಳೆ. ಈ ಧಾರಾವಾಹಿ ಮೇಘಾಗೆ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿದೆ. ಇದೇ ಕಾರಣಕ್ಕೆ ಅವರಿಗೆ ಸಿನಿಮಾ ಆಫರ್​ಗಳು ಬರುತ್ತಿವೆ. ಗಣೇಶ್​ ನಟನೆಯ ‘ತ್ರಿಬಲ್​ ರೈಡಿಂಗ್​’ ಚಿತ್ರದ ಮೂಲಕ ಮೇಘಾ ಶೆಟ್ಟಿ ಹಿರಿತೆರೆಗೆ ಕಾಲಿಡುತ್ತಿದ್ದಾರೆ. ಶುಕ್ರವಾರ (ಸೆಪ್ಟೆಂಬರ್​ 17) ಸಿನಿಮಾದ ಶೂಟಿಂಗ್​ ಮುಗಿದಿದೆ. ಇದೇ ಖುಷಿಯಲ್ಲಿ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.

ಒಂದು ಸಿನಿಮಾದಲ್ಲಿ ನಟಿಸಿದ ನಂತರ ಸಾಲುಸಾಲು ಸಿನಿಮಾ ಆಫರ್​ಗಳು ಬರೋದು ಸಹಜ. ಮೇಘಾ ಶೆಟ್ಟಿಗೂ ಇದೇ ರೀತಿ ಆಗುತ್ತಿದೆಯಾ? ಈ ಪ್ರಶ್ನೆಗೆ ಅವರು ‘ಮುಂದಿನ ದಿನಗಳಲ್ಲಿ ಹೇಳುತ್ತೇನೆ’ ಎನ್ನುವ ಉತ್ತರ ನೀಡಿದ್ದಾರೆ. ಈ ಮೂಲಕ ಕುತೂಹಲ ಕಾಯ್ದುಕೊಂಡಿದ್ದಾರೆ.

ಒಂದೊಮ್ಮೆ ಸಿನಿಮಾ ಆಫರ್​ ಹೆಚ್ಚಾದರೆ ಕಿರುತೆರೆ ತೊರೆಯುತ್ತೀರಾ ಎನ್ನುವ ಪ್ರಶ್ನೆಗೆ ಅವರು ಕೊಡುವ ಉತ್ತರ ವಿಶೇಷವಾಗಿದೆ. ‘ಸಿನಿಮಾ ಸೀರಿಯಲ್​ ಎರಡನ್ನೂ ನಾನು ನಿಭಾಯಿಸಿಕೊಂಡು ಹೋಗುತ್ತೇನೆ. ಧಾರಾವಾಹಿ ನನಗೆ ಲೈಫ್​ ಕೊಟ್ಟಿದೆ. ಅದರ ಜತೆಗಿನ ಒಡನಾಟ ಎಲ್ಲಕ್ಕಿಂತ ಹೆಚ್ಚು. ಹಾಗಾಗಿ ಎರಡನ್ನೂ ಬ್ಯಾಲೆನ್ಸ್​ ಮಾಡಿಕೊಂಡು ಹೋಗುತ್ತೇನೆ’ ಎನ್ನುತ್ತಾರೆ ಅವರು.

ತ್ರಿಬಲ್​ ರೈಡಿಂಗ್ ಚಿತ್ರಕ್ಕೆ ಮೂವರು ನಾಯಕಿಯರು. ಮೇಘಾ ಜತೆಗೆ ರಚನಾ ಇಂದರ್, ಅದಿತಿ ಪ್ರಭುದೇವ ಕೂಡ ನಟಿಸುತ್ತಿದ್ದಾರೆ. ಸಾಧು ಕೋಕಿಲ, ಕುರಿ ಪ್ರತಾಪ್​, ರವಿಶಂಕರ್, ರಂಗಾಯಣ ರಘು ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಶ್ರೀಮಹೇಶ್​ ಗೌಡ ಸಿನಿಮಾ ನಿರ್ದೇಶನ ಮಾಡಿದ್ದಾರೆ. ವೈ.ಎಂ. ರಾಮ್​ಗೋಪಾಲ್​ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.

ಇದನ್ನೂ ಓದಿ: ಮೇಘಾ ಶೆಟ್ಟಿ ಮನೆಗೆ ಬಂತು ಎರಡು ಐಷಾರಾಮಿ ಕಾರು; ಖುಷಿ ಹಂಚಿಕೊಂಡ ನಟಿ

Megha Shetty: ‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿ ಸಿನಿಮಾಗಾಗಿ ಕಾಯ್ತಾ ಇದೀರಾ?; ಇಲ್ಲಿದೆ ಗುಡ್​ ನ್ಯೂಸ್

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?