AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿ ಹಿಂದಿಗೆ ರಿಮೇಕ್; ಅದೇ ಹೆಸರಿಟ್ಟ ವಾಹಿನಿ

ಜೊತೆ ಜೊತೆಯಲಿ ಧಾರಾವಾಹಿಯು ಜೀ ಕನ್ನಡದಲ್ಲಿ ಅಪಾರ ಜನಪ್ರಿಯತೆ ಗಳಿಸಿದೆ. ಈ ಧಾರಾವಾಹಿ ಈಗ ಹಿಂದಿಗೆ ರಿಮೇಕ್ ಆಗುತ್ತಿದೆ. ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್ ಗಮನ ಸೆಳೆದಿತ್ತು. ಈ ಟೈಟಲ್ ಹಾಡು ಸೂಪರ್ ಹಿಟ್ ಆಗಿತ್ತು. ಇದೇ ಟೋನ್ನಲ್ಲಿ ಹಿಂದಿ ಧಾರಾವಾಹಿಯ ಹಾಡು ಮೂಡಿ ಬಂದಿದೆ.

‘ಜೊತೆ ಜೊತೆಯಲಿ’ ಧಾರಾವಾಹಿ ಹಿಂದಿಗೆ ರಿಮೇಕ್; ಅದೇ ಹೆಸರಿಟ್ಟ ವಾಹಿನಿ
ಜೊತೆ ಜೊತೆಯಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 16, 2025 | 3:10 PM

Share

‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿಯು ಜೀ ಕನ್ನಡದಲ್ಲಿ ಪ್ರಸಾರ ಕಂಡು ಸೂಪರ್ ಹಿಟ್ ಆಯಿತು. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆಯಿತು. ಕೆಲವು ವಿವಾದಗಳಿಂದ ಕೊನೆಯಲ್ಲಿ ಧಾರಾವಾಹಿ ಟಿಆರ್​ಪಿ ಕಳೆದುಕೊಂಡಿತ್ತು ನಿಜ. ಆದರೆ, ಆರಂಭದಲ್ಲಿ ಧಾರಾವಾಹಿ ಟಾಪ್​ನಲ್ಲಿ ಇತ್ತು. ಎಲ್ಲರೂ ಅಚ್ಚರಿ ಪಡುವಂತೆ ಧಾರಾವಾಹಿ ಟಿಆರ್​ಪಿಯನ್ನು ತಂದುಕೊಟ್ಟಿದ್ದಂತೂ ನಿಜ. ಪ್ರತಿ ವಾರ ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಿತ್ತು. ಈಗ ಧಾರಾವಾಹಿ ಹಿಂದಿಗೆ ರಿಮೇಕ್ ಆಗುತ್ತಿದೆ.

2019ರಲ್ಲಿ ‘ಜೊತೆ ಜೊತೆಯಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಬರೋಬ್ಬರಿ 953 ಎಪಿಸೋಡ್​ಗಳು ಪ್ರಸಾರ ಕಂಡವು. 2019ರಿಂದ 2023ರವರೆಗೆ ಸೀರಿಯಲ್ ಪ್ರಸಾರ ಕಂಡಿತು. ಈ ಧಾರಾವಾಹಿಯಲ್ಲಿ ಅನಿರುದ್ಧ್ ಜತ್ಕರ್ ಹಾಗೂ ಮೇಘಾ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಧಾರಾವಾಹಿ ಮರಾಠಿಯ ‘ತುಲಾ ಪಹಾತೆ ರೇ’ಯ ರಿಮೇಕ್ ಆಗಿದೆ. ರಿಮೇಕ್ ಆದರೂ ಕನ್ನಡ ಜನರು ಇದನ್ನು ಮೆಚ್ಚಿಕೊಂಡರು.

ಇದನ್ನೂ ಓದಿ
Image
‘ಹೆಸರ ಜೊತೆ ಅಕ್ಕ ಸೇರಿದ್ರೆ ಅರ್ಥವೇ ಬೇರೆಯಾಗುತ್ತೆ’; ದೀಪಿಕಾ ಬೇಸರ
Image
ಸಲ್ಲು ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
Image
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ
View this post on Instagram

A post shared by Zee TV (@zeetv)

ಈಗ ಹಿಂದಿಯಲ್ಲಿ ‘ಜೊತೆ ಜೊತೆಯಲಿ’ ಧಾರಾವಾಹಿ ‘ತುಮ್ ಸೇ ತುಮ್ ತಕ್’ ಹೆಸರಿನಲ್ಲಿ ಪ್ರಸಾರ ಕಾಣಲಿದೆ. ವಿಶೇಷ ಎಂದರೆ ಕನ್ನಡ ಧಾರಾವಾಹಿಯಲ್ಲಿ ಕಥಾ ನಾಯಕನಿಗೆ ಆರ್ಯವರ್ಧನ್ ಹಾಗೂ ಕಥಾ ನಾಯಕಿಗೆ ಅನು ಸಿರಿಮನೆ ಎಂದು ಹೆಸರು ಇಡಲಾಗಿತ್ತು. ಈ ಪಾತ್ರದ ಹೆಸರನ್ನು ಹಿಂದಿ ಧಾರಾವಾಹಿಯಲ್ಲೂ ಮುಂದುವರಿಸಲಾಗಿದೆ.

ಇದನ್ನೂ ಓದಿ: ಚೈತ್ರಾ ಆಚಾರ್ ಧ್ವನಿಯಲ್ಲಿ ‘ಜೊತೆಯಲಿ ಜೊತೆ ಜೊತೆಯಲಿ..’ ಸಾಂಗ್

‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್ ಗಮನ ಸೆಳೆದಿತ್ತು. ಈ ಟೈಟಲ್​ ಹಾಡು ಸೂಪರ್ ಹಿಟ್ ಆಗಿತ್ತು. ಇದೇ ಟೋನ್​ನಲ್ಲಿ ಹಿಂದಿ ಧಾರಾವಾಹಿಯ ಹಾಡು ಮೂಡಿ ಬಂದಿದೆ. ಮ್ಯೂಸಿಕ್ ಹಾಗೆಯೇ ಇದ್ದು ಹಿಂದಿಯಲ್ಲಿ ಲಿರಿಕ್ಸ್ ಬರೆಯಲಾಗಿದೆ. ಅನೇಕರು ಇದನ್ನು ಕೇಳಿ ‘ಕನ್ನಡದ ಹಾಡನ್ನು ಮತ್ತೆ ಕೇಳಿದಂತೆ ಆಗುತ್ತದೆ’ ಎಂದು ಅನೇಕರು ಹೇಳಿದ್ದಾರೆ.

ಏನಿದು ಕತೆ?

ಆರ್ಯವರ್ಧನ್ ವಯಸ್ಸಾದ ಉದ್ಯಮಿ. ಆತನ ವಯಸ್ಸು 45ರ ಆಸುಪಾಸಿನಲ್ಲಿದೆ. ಕಥಾ ನಾಯಕಿ ಅನು ವಯಸ್ಸು 20. ಆಕೆ ಬಂದು ಆರ್ಯವರ್ಧನ್ ಕಂಪನಿಯಲ್ಲಿ ಕೆಲಸಕ್ಕೆ ಸೇರುತ್ತಾಳೆ. ಆರ್ಯವರ್ಧನ್ ಹೇಗೆ ಆ ಹಂತಕ್ಕೆ ಬಂದ? ಇಬ್ಬರ ಮಧ್ಯೆ ಪ್ರೀತಿ ಹೇಗೆ ಮೂಡುತ್ತದೆ ಎಂಬುದು ಧಾರಾವಾಹಿಯ ಕಥೆ. ಕನ್ನಡಕ್ಕೆ ತಕ್ಕಂತೆ ಈ ಧಾರಾವಾಹಿಯ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿತ್ತು. ಕನ್ನಡದಲ್ಲಿ ಅನಿರುದ್ಧ್ ಬದಲು ಹರೀಶ್ ರಾಜ್ ಅವರು ಬಂದಿದ್ದರು. ಈ ವೇಳೆ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿತ್ತು. ಆದರೆ, ಹಿಂದಿಯಲ್ಲಿ ಮರಾಠಿ ಧಾರಾವಾಹಿಯ ಕಥೆಯ ಕ್ಲೈಮ್ಯಾಕ್ಸ್​ನೇ ನೀಡೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ