AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿ ಹಿಂದಿಗೆ ರಿಮೇಕ್; ಅದೇ ಹೆಸರಿಟ್ಟ ವಾಹಿನಿ

ಜೊತೆ ಜೊತೆಯಲಿ ಧಾರಾವಾಹಿಯು ಜೀ ಕನ್ನಡದಲ್ಲಿ ಅಪಾರ ಜನಪ್ರಿಯತೆ ಗಳಿಸಿದೆ. ಈ ಧಾರಾವಾಹಿ ಈಗ ಹಿಂದಿಗೆ ರಿಮೇಕ್ ಆಗುತ್ತಿದೆ. ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್ ಗಮನ ಸೆಳೆದಿತ್ತು. ಈ ಟೈಟಲ್ ಹಾಡು ಸೂಪರ್ ಹಿಟ್ ಆಗಿತ್ತು. ಇದೇ ಟೋನ್ನಲ್ಲಿ ಹಿಂದಿ ಧಾರಾವಾಹಿಯ ಹಾಡು ಮೂಡಿ ಬಂದಿದೆ.

‘ಜೊತೆ ಜೊತೆಯಲಿ’ ಧಾರಾವಾಹಿ ಹಿಂದಿಗೆ ರಿಮೇಕ್; ಅದೇ ಹೆಸರಿಟ್ಟ ವಾಹಿನಿ
ಜೊತೆ ಜೊತೆಯಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 16, 2025 | 3:10 PM

Share

‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿಯು ಜೀ ಕನ್ನಡದಲ್ಲಿ ಪ್ರಸಾರ ಕಂಡು ಸೂಪರ್ ಹಿಟ್ ಆಯಿತು. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆಯಿತು. ಕೆಲವು ವಿವಾದಗಳಿಂದ ಕೊನೆಯಲ್ಲಿ ಧಾರಾವಾಹಿ ಟಿಆರ್​ಪಿ ಕಳೆದುಕೊಂಡಿತ್ತು ನಿಜ. ಆದರೆ, ಆರಂಭದಲ್ಲಿ ಧಾರಾವಾಹಿ ಟಾಪ್​ನಲ್ಲಿ ಇತ್ತು. ಎಲ್ಲರೂ ಅಚ್ಚರಿ ಪಡುವಂತೆ ಧಾರಾವಾಹಿ ಟಿಆರ್​ಪಿಯನ್ನು ತಂದುಕೊಟ್ಟಿದ್ದಂತೂ ನಿಜ. ಪ್ರತಿ ವಾರ ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಕಾಪಾಡಿಕೊಳ್ಳುತ್ತಿತ್ತು. ಈಗ ಧಾರಾವಾಹಿ ಹಿಂದಿಗೆ ರಿಮೇಕ್ ಆಗುತ್ತಿದೆ.

2019ರಲ್ಲಿ ‘ಜೊತೆ ಜೊತೆಯಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಬರೋಬ್ಬರಿ 953 ಎಪಿಸೋಡ್​ಗಳು ಪ್ರಸಾರ ಕಂಡವು. 2019ರಿಂದ 2023ರವರೆಗೆ ಸೀರಿಯಲ್ ಪ್ರಸಾರ ಕಂಡಿತು. ಈ ಧಾರಾವಾಹಿಯಲ್ಲಿ ಅನಿರುದ್ಧ್ ಜತ್ಕರ್ ಹಾಗೂ ಮೇಘಾ ಶೆಟ್ಟಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಈ ಧಾರಾವಾಹಿ ಮರಾಠಿಯ ‘ತುಲಾ ಪಹಾತೆ ರೇ’ಯ ರಿಮೇಕ್ ಆಗಿದೆ. ರಿಮೇಕ್ ಆದರೂ ಕನ್ನಡ ಜನರು ಇದನ್ನು ಮೆಚ್ಚಿಕೊಂಡರು.

ಇದನ್ನೂ ಓದಿ
Image
‘ಹೆಸರ ಜೊತೆ ಅಕ್ಕ ಸೇರಿದ್ರೆ ಅರ್ಥವೇ ಬೇರೆಯಾಗುತ್ತೆ’; ದೀಪಿಕಾ ಬೇಸರ
Image
ಸಲ್ಲು ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
Image
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ
Image
ನಿಶಾ ರವಿಕೃಷ್ಣನ್​ಗೆ ತೆಲುಗು ಕಿರುತೆರೆಯಲ್ಲಿ ಎದುರಾದ ಕಷ್ಟಗಳು ಒಂದೆರಡಲ್ಲ
View this post on Instagram

A post shared by Zee TV (@zeetv)

ಈಗ ಹಿಂದಿಯಲ್ಲಿ ‘ಜೊತೆ ಜೊತೆಯಲಿ’ ಧಾರಾವಾಹಿ ‘ತುಮ್ ಸೇ ತುಮ್ ತಕ್’ ಹೆಸರಿನಲ್ಲಿ ಪ್ರಸಾರ ಕಾಣಲಿದೆ. ವಿಶೇಷ ಎಂದರೆ ಕನ್ನಡ ಧಾರಾವಾಹಿಯಲ್ಲಿ ಕಥಾ ನಾಯಕನಿಗೆ ಆರ್ಯವರ್ಧನ್ ಹಾಗೂ ಕಥಾ ನಾಯಕಿಗೆ ಅನು ಸಿರಿಮನೆ ಎಂದು ಹೆಸರು ಇಡಲಾಗಿತ್ತು. ಈ ಪಾತ್ರದ ಹೆಸರನ್ನು ಹಿಂದಿ ಧಾರಾವಾಹಿಯಲ್ಲೂ ಮುಂದುವರಿಸಲಾಗಿದೆ.

ಇದನ್ನೂ ಓದಿ: ಚೈತ್ರಾ ಆಚಾರ್ ಧ್ವನಿಯಲ್ಲಿ ‘ಜೊತೆಯಲಿ ಜೊತೆ ಜೊತೆಯಲಿ..’ ಸಾಂಗ್

‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್ ಟ್ರ್ಯಾಕ್ ಗಮನ ಸೆಳೆದಿತ್ತು. ಈ ಟೈಟಲ್​ ಹಾಡು ಸೂಪರ್ ಹಿಟ್ ಆಗಿತ್ತು. ಇದೇ ಟೋನ್​ನಲ್ಲಿ ಹಿಂದಿ ಧಾರಾವಾಹಿಯ ಹಾಡು ಮೂಡಿ ಬಂದಿದೆ. ಮ್ಯೂಸಿಕ್ ಹಾಗೆಯೇ ಇದ್ದು ಹಿಂದಿಯಲ್ಲಿ ಲಿರಿಕ್ಸ್ ಬರೆಯಲಾಗಿದೆ. ಅನೇಕರು ಇದನ್ನು ಕೇಳಿ ‘ಕನ್ನಡದ ಹಾಡನ್ನು ಮತ್ತೆ ಕೇಳಿದಂತೆ ಆಗುತ್ತದೆ’ ಎಂದು ಅನೇಕರು ಹೇಳಿದ್ದಾರೆ.

ಏನಿದು ಕತೆ?

ಆರ್ಯವರ್ಧನ್ ವಯಸ್ಸಾದ ಉದ್ಯಮಿ. ಆತನ ವಯಸ್ಸು 45ರ ಆಸುಪಾಸಿನಲ್ಲಿದೆ. ಕಥಾ ನಾಯಕಿ ಅನು ವಯಸ್ಸು 20. ಆಕೆ ಬಂದು ಆರ್ಯವರ್ಧನ್ ಕಂಪನಿಯಲ್ಲಿ ಕೆಲಸಕ್ಕೆ ಸೇರುತ್ತಾಳೆ. ಆರ್ಯವರ್ಧನ್ ಹೇಗೆ ಆ ಹಂತಕ್ಕೆ ಬಂದ? ಇಬ್ಬರ ಮಧ್ಯೆ ಪ್ರೀತಿ ಹೇಗೆ ಮೂಡುತ್ತದೆ ಎಂಬುದು ಧಾರಾವಾಹಿಯ ಕಥೆ. ಕನ್ನಡಕ್ಕೆ ತಕ್ಕಂತೆ ಈ ಧಾರಾವಾಹಿಯ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿತ್ತು. ಕನ್ನಡದಲ್ಲಿ ಅನಿರುದ್ಧ್ ಬದಲು ಹರೀಶ್ ರಾಜ್ ಅವರು ಬಂದಿದ್ದರು. ಈ ವೇಳೆ ಕಥೆಯಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿತ್ತು. ಆದರೆ, ಹಿಂದಿಯಲ್ಲಿ ಮರಾಠಿ ಧಾರಾವಾಹಿಯ ಕಥೆಯ ಕ್ಲೈಮ್ಯಾಕ್ಸ್​ನೇ ನೀಡೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!