AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aniruddh Jatkar: ಅನಿರುದ್ಧ್​ ಪರ ನಿಂತ ಮಹಿಳಾ ಅಭಿಮಾನಿಗಳು; ‘ಜೊತೆ ಜೊತೆಯಲಿ’ ನಿರ್ಮಾಪಕರ ವಿರುದ್ಧ ಫ್ಯಾನ್ಸ್​ ಗರಂ

‘ಬಹಿಷ್ಕಾರ ಮಾಡಿದ್ದರಲ್ಲಿ ದುರುದ್ದೇಶ ಕಾಣುತ್ತಿದೆ. ಬೇರೆ ಕಲಾವಿದರು ಧ್ವನಿ ಎತ್ತಿದರೆ ಅವರಿಗೂ ಹೀಗೆಯೇ ಆಗಲಿದೆ ಎಂಬಂತಾಗಿದೆ’ ಎಂದು ಅನಿರುದ್ಧ್​ ಅವರ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Aniruddh Jatkar: ಅನಿರುದ್ಧ್​ ಪರ ನಿಂತ ಮಹಿಳಾ ಅಭಿಮಾನಿಗಳು; ‘ಜೊತೆ ಜೊತೆಯಲಿ’ ನಿರ್ಮಾಪಕರ ವಿರುದ್ಧ ಫ್ಯಾನ್ಸ್​ ಗರಂ
ಅನಿರುದ್ಧ್
TV9 Web
| Edited By: |

Updated on:Aug 23, 2022 | 2:04 PM

Share

ಜನಪ್ರಿಯ ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ (Aroor Jagadish)​ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ ನಡುವೆ ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಆರೂರು ಜಗದೀಶ್​ ವಿರುದ್ಧ ಗರಂ ಆಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಅಭಿಮಾನಿಗಳು ಧ್ವನಿ ಎತ್ತಿದ್ದಾರೆ. ‘ಧಾರಾವಾಹಿ ತಂಡದಲ್ಲಿ ಮನಸ್ತಾಪ ಆದಾಗ ಅದನ್ನು ಅವರೇ ಒಳಗೆ ಬಗೆಹರಿಸಿಕೊಳ್ಳಬೇಕು. ಅದರ ಬದಲು ಸಾರ್ವಜನಿಕವಾಗಿ ಮಾತನಾಡಬಾರದಿತ್ತು’ ಎಂದು ನಟ ಅನಿರುದ್ಧ್​ (Aniruddh Jatkar) ಅವರ ಮಹಿಳಾ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘20ನೇ ಸಂಚಿಕೆಯಲ್ಲಿ ಆದ ತೊಂದರೆಗಳನ್ನು 700 ಎಪಿಸೋಡ್​ ನಂತರ ಹೇಳಿದ್ದು ಎಷ್ಟು ಸರಿ? ಆರೂರು ಜಗದೀಶ್​ ಅವರಿಗೆ ಹೊಟ್ಟೆಕಿಚ್ಚು. ನಟರು ಮೊದಲೇ ಸೀನ್​ ಪೇಪರ್​ ಕೊಡಿ ಅಂತ ಕೇಳುವುದೇ ತಪ್ಪಾ? ಬಹಿಷ್ಕಾರ ಮಾಡಿದ್ದರಲ್ಲಿ ದುರುದ್ದೇಶ ಕಾಣುತ್ತಿದೆ. ಇದು ಬೇರೆ ಎಲ್ಲ ಕಲಾವಿದರಿಗೂ ಒಂದು ವಾರ್ನಿಂಗ್​ ರೀತಿ ಇದೆ. ಯಾವುದೇ ನಟ-ನಟಿಯರು ಧ್ವನಿ ಎತ್ತಿದರೆ ಅವರಿಗೂ ಹೀಗೆಯೇ ಆಗಲಿದೆ ಎಂಬಂತಾಗಿದೆ’ ಎಂದು ಅಭಿಮಾನಿಗಳು ಹೇಳಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿ ತಂತ್ರಜ್ಞರಿಗೆ ಅನಿರುದ್ಧ್​ ಅವರು ಸರಿಯಾಗಿ ಸಹಕಾರ ನೀಡಿಲ್ಲ ಎಂಬುದು ನಿರ್ಮಾಪಕ ಆರೂರು ಜಗದೀಶ್​ ಅವರ ಆರೋಪ. ಆ ಕಾರಣದಿಂದ ನಿರ್ಮಾಪಕರ ಸಂಘದವರು ಅನಿರುದ್ಧ್​ ಅವರನ್ನು ಎರಡು ವರ್ಷ ಕಿರುತರೆಯಿಂದ ಹೊರಗಿಡುವ ಬಗ್ಗೆ ನಿರ್ಧರಿಸಿರುವ ವಿಚಾರ ತಿಳಿದುಬಂದಿದೆ. ಇದನ್ನು ಅಭಿಮಾನಿಗಳು ವಿರೋಧಿಸಿದ್ದಾರೆ.

ಇದನ್ನೂ ಓದಿ
Image
Anirudh Jatkar: ‘ಜೊತೆ ಜೊತೆಯಲಿ’ ಧಾರಾವಾಹಿಯಿಂದ ಸಿಕ್ಕ ಸಂಬಳದ ಬಗ್ಗೆ ನೇರವಾಗಿ ಮಾತನಾಡಿದ ಅನಿರುದ್ಧ್​
Image
‘ಜೊತೆ ಜೊತೆಯಲಿ’ ತಂಡ ಮಾಡಿದ ಆರೋಪಗಳಿಗೆ ಸುದ್ದಿಗೋಷ್ಠಿಯಲ್ಲಿ ಅನಿರುದ್ಧ್​ ತಿರುಗೇಟು
Image
‘ಟಿಆರ್​ಪಿ ಕುಸಿಯಲು ಅನಿರುದ್ಧ್​ ಕಾರಣ, ಅವರು ಧಾರಾವಾಹಿಯಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಯಲ್ಲ’: ನಿರ್ಮಾಪಕ
Image
‘ಜೊತೆ ಜೊತೆಯಲಿ ಧಾರಾವಾಹಿ 2-3 ತಿಂಗಳಲ್ಲಿ ಮುಗಿಯಲಿದೆ’: ಅನಿರುದ್ಧ್​

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಧಾರಾವಾಹಿಗೆ ಅನಿರುದ್ಧ್​ ವಾಪಸ್​ ಬರಬೇಕು. ಆ ಮೂಲಕ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್​ ಒತ್ತಾಯಿಸಿದ್ದಾರೆ.

ಆರೂರು ಜಗದೀಶ್​ ಆಡಿಯೋ ವೈರಲ್​:

ದೂರವಾಣಿಯಲ್ಲಿ ಅಭಿಮಾನಿ ಜೊತೆ ಮಾತನಾಡಿರುವ ಆರೂರು ಜಗದೀಶ್​ ಅವರು, ‘ಯಾವತ್ತಿದ್ದರೂ ಅನಿರುದ್ಧ್​ ಹೀರೋ’ ಎಂದು ಹೇಳಿರುವ ಆಡಿಯೋ ವೈರಲ್​ ಆಗಿದೆ. ‘ಧಾರಾವಾಹಿಯನ್ನು ಕಥೆಯಾಗಿ ನೋಡಬೇಕು. ಒಂದೇ ಪಾತ್ರದ ಆಯಾಮದಿಂದ ನೋಡಿದಾಗ ಹೀಗೆ ಆಗತ್ತೆ. ಪಾತ್ರದಲ್ಲಿ ಭಿನ್ನತೆ ಇರಬೇಕು. ಫ್ಲ್ಯಾಶ್​ ಬ್ಯಾಕ್​ ಶೂಟಿಂಗ್​ ಆಗಿದೆ. ಈಗ ಅದರಲ್ಲಿ ಯಾವುದೇ ಬದಲಾವಣೆ ಸಾಧ್ಯವಿಲ್ಲ. ಟಿಆರ್​ಪಿ ಮುಖ್ಯವಲ್ಲ. ನಾವು ಒಳ್ಳೆಯ ಧಾರಾವಾಹಿ ಮಾಡುತ್ತಿದ್ದೇವೆ’ ಎಂದು ಹೇಳಿರುವುದು ವೈರಲ್​ ಆಡಿಯೋ ಕ್ಲಿಪ್​ನಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:21 pm, Tue, 23 August 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?