AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jothe Jotheyali: ‘ಜೊತೆ ಜೊತೆಯಲಿ’ ಧಾರಾವಾಹಿ ನೋಡೋ ವೀಕ್ಷಕರಿಗೆ ನಟ ಅನಿರುದ್ಧ ವಿಶೇಷ ಮನವಿ

ಈ ಮೊದಲು ಕೂಡ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳು ಬಂದಿದ್ದವು. ಈಗ ಸಿಕ್ಕಿರುವ ತಿರುವನ್ನು ಯಾರೂ ಊಹಿಸಿರಲಿಲ್ಲ. ಆರ್ಯವರ್ಧನ್​ ವಿಲನ್​ ಎಂಬುದನ್ನು ಯಾರಿಂದಲೂ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಈ ಬಗ್ಗೆ ಅನಿರುದ್ಧ ಮಾತನಾಡಿದ್ದಾರೆ.

Jothe Jotheyali: ‘ಜೊತೆ ಜೊತೆಯಲಿ’ ಧಾರಾವಾಹಿ ನೋಡೋ ವೀಕ್ಷಕರಿಗೆ ನಟ ಅನಿರುದ್ಧ ವಿಶೇಷ ಮನವಿ
ನಟ ಅನಿರುದ್ಧ
ರಾಜೇಶ್ ದುಗ್ಗುಮನೆ
|

Updated on:Jan 06, 2022 | 6:12 PM

Share

ತೆರೆ ಮೇಲೆ ಹೀರೋ ಆಗಿ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ (Jothe Jotheyali Serial) ಅದೇ ಆಗಿದೆ. ಈ ಧಾರಾವಾಹಿಯಲ್ಲಿ ವಿಷ್ಣುವರ್ಧನ್​ ಅಳಿಯ, ನಟ ಅನಿರುದ್ಧ​ ನಿರ್ವಹಿಸುತ್ತಿರುವ ಆರ್ಯವರ್ಧನ್ (Aryavardhan )​ ಪಾತ್ರ ನಿಧಾನವಾಗಿ ನೆಗೆಟಿವ್​ ಶೇಡ್​ಗೆ ತಿರುಗುತ್ತಿದೆ. ಇದು ಅಭಿಮಾನಿಗಳಿಗೆ ಬೇಸರ ತರಿಸಿದೆ. ‘ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ’ ಎಂದು ಒಂದು ವರ್ಗದವರು ಕಮೆಂಟ್​ ಮಾಡುತ್ತಿದ್ದಾರೆ. ಈ ಬಗ್ಗೆ ಅನಿರುದ್ಧ​​ ಅವರು ‘ಟಿವಿ9 ಕನ್ನಡ ಡಿಜಿಟಲ್​’ ಜತೆ ಮಾತನಾಡಿದ್ದಾರೆ. ‘ಓರ್ವ ಕಲಾವಿದನಾಗಿ ಈ ಪಾತ್ರವನ್ನು ತುಂಬಾನೇ ಎಂಜಾಯ್​ ಮಾಡುತ್ತಿದ್ದೇನೆ’ ಎಂದಿದ್ದಾರೆ ಅವರು.

ಈ ಮೊದಲು ಕೂಡ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​ಗಳು ಬಂದಿದ್ದವು. ಈಗ ಸಿಕ್ಕಿರುವ ತಿರುವನ್ನು ಯಾರೂ ಊಹಿಸಿರಲಿಲ್ಲ. ಆರ್ಯವರ್ಧನ್​ ವಿಲನ್​ ಎಂಬುದನ್ನು ಯಾರಿಂದಲೂ ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಈ ಬಗ್ಗೆ ಅನಿರುದ್ಧ ಮಾತನಾಡಿದ್ದಾರೆ. ‘ತಿರುವುಗಳು ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ. ನಾವು ಮೊದಲಿನಿಂದಲೂ ಟ್ವಿಸ್ಟ್​ಗಳನ್ನು ನೀಡುತ್ತಲೇ ಬಂದಿದ್ದೇವೆ. ಆರ್ಯವರ್ಧನ್​ ಪಾತ್ರಕ್ಕೆ ಸಾಕಷ್ಟು ಆಯಾಮಗಳಿವೆ. ಎಲ್ಲ ತರಹದ ಭಾವನೆಗಳನ್ನು ವ್ಯಕ್ತಪಡಿಸುವ ಅವಕಾಶ ನನಗೆ ಈ ಪಾತ್ರದ ಮೂಲಕ ಸಿಕ್ಕಿದೆ. ನನ್ನ ಪಾತ್ರ ನೆಗೆಟಿವ್​ ಶೇಡ್​ ಪಡೆದುಕೊಂಡಿದೆ. ಒಂದು ರೀತಿಯಲ್ಲಿ ವಿಲನ್​ ಎಂದೇ ಹೇಳಬಹುದು. ಕಥೆಯಲ್ಲಿ ಮುಂದೆ ಹೋಗುತ್ತಾ ಏನಾಗುತ್ತದೆ ಎಂಬುದು ನನಗೂ ಗೊತ್ತಿಲ್ಲ’ ಎಂದಿದ್ದಾರೆ ಅನಿರುದ್ಧ.

ಧಾರಾವಾಹಿಯಲ್ಲಿ ಈ ಕ್ಷಣ ಏನು ಸಾಗುತ್ತಿದೆಯೋ ಅದನ್ನು ಆನಂದಿಸಬೇಕು ಎಂಬುದು ಅನಿರುದ್ಧ ಮನವಿ. ‘ಗುರಿ ತಲುಪೋದು ಇದ್ದೇ ಇದೆ. ಪ್ರವಾಸದ ಪ್ರತಿ ಹಂತವನ್ನೂ ನಾವು ಆನಂದಿಸಬೇಕು. ಹೀರೋನೆ ವಿಲನ್​ ಆಗಿರೋದು ಕನ್ನಡ ಕಿರುತೆರೆ ಲೋಕದಲ್ಲಿ ಇದೇ ಮೊದಲು. ಈ ಹಂತವನ್ನೂ ಆನಂದಿಸೋಣ. ಈ ರೀತಿ ನಟಿಸೋಕೆ ಕಲಾವಿದನಾಗಿ ನನಗೆ ನಿಜಕ್ಕೂ ಖುಷಿ ಇದೆ. ಸಿನಿಮಾದಲ್ಲಿ ಈ ರೀತಿಯ ಪಾತ್ರ ಸಿಕ್ಕಿಲ್ಲ. ಆದರೆ, ಇಲ್ಲಿ ಸಿಗುತ್ತಿದೆ’ ಎಂದು ಸಂತಸ ವ್ಯಕ್ತಪಡಿಸುತ್ತಾರೆ ಅವರು.

‘ಇದು ಆರಂಭವಾದ್ದರಿಂದ ವೀಕ್ಷಕರಿಗೆ ಇದನ್ನು ಒಪ್ಪಿಕೊಳ್ಳೋಕೆ ಆಗುತ್ತಿಲ್ಲ. ಆದರೆ, ಮುಂದೆ ಹೋಗುತ್ತಾ ಗೊತ್ತಾಗುತ್ತದೆ. ಓರ್ವ ಕಲಾವಿದನಾಗಿ ಈ ಪಾತ್ರವನ್ನು ನಾನು ಹೇಗೆ ಎಂಜಾಯ್​ ಮಾಡುತ್ತಿದ್ದೇನೋ, ಅದೇ ರೀತಿ ವೀಕ್ಷಕರಾಗಿ ಅವರು ಈ ಪಾತ್ರವನ್ನು ನೋಡಿ ಸಂತೋಷ ಪಡಬೇಕು’ ಎಂದು ಅನಿರುದ್ಧ ವೀಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  ‘ಜೊತೆ ಜೊತೆಯಲಿ’ ನಿರ್ದೇಶಕರ ಹೊಸ ಸೀರಿಯಲ್​ ‘ಪುಟ್ಟಕ್ಕನ ಮಕ್ಕಳು’; ಇದರಲ್ಲಿದೆ ವಿಶೇಷ ಕಥೆ

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಬಿಗ್​ ಟ್ವಿಸ್ಟ್​; ಇದನ್ನು ನಾವು ಒಪ್ಪಲ್ಲ ಎಂದ ವೀಕ್ಷಕರು

Published On - 6:10 pm, Thu, 6 January 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?