AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?

Megha Shetty: ಖ್ಯಾತ ನಟಿ ಮೇಘಾ ಶೆಟ್ಟಿ ಅವರಿಗೆ ಹೊಸ ಸಿನಿಮಾ ಸಿಕ್ಕಿದೆ. ಈ ಚಿತ್ರ ಬಹುಭಾಷೆಯಲ್ಲಿ ಮೂಡಿಬರಲಿದೆ ಎಂಬುದು ವಿಶೇಷ. ಶೀಘ್ರವೇ ಇದರ ಶೀರ್ಷಿಕೆ ಅನಾವರಣ ಆಗಲಿದ್ದು, ನವೆಂಬರ್​ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ.

‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?
ಕವೀಶ್​ ಶೆಟ್ಟಿ, ಮೇಘಾ ಶೆಟ್ಟಿ
TV9 Web
| Edited By: |

Updated on: Oct 21, 2021 | 9:27 AM

Share

ಕನ್ನಡ ಕಿರುತೆರೆ ಲೋಕದ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’ ಮೂಲಕ ನಟಿ ಮೇಘಾ ಶೆಟ್ಟಿ ಅವರ ಖ್ಯಾತಿ ಹೆಚ್ಚಿದೆ. ಅನು ಸಿರಿಮನೆ ಎಂಬ ಪಾತ್ರದಿಂದ ಅವರು ಕರುನಾಡಿನಲ್ಲಿ ಮನೆಮಾತಾಗಿದ್ದಾರೆ. ಈ ನಡುವೆ ಅವರಿಗೆ ಸಿನಿಮಾ ಆಫರ್​ಗಳು ಕೂಡ ಹೆಚ್ಚುತ್ತಿವೆ. ‘ಗೋಲ್ಡನ್​ ಸ್ಟಾರ್​’ ಗಣೇಶ್​ ಜೊತೆ ಅವರು ‘ತ್ರಿಬಲ್​ ರೈಡಿಂಗ್​’ ಚಿತ್ರದಲ್ಲಿ ನಟಿಸುತ್ತಿರುವುದು ಗೊತ್ತೇ ಇದೆ. ಈಗ ಮೇಘಾ ಶೆಟ್ಟಿ ಪಾಲಿಗೆ ಮತ್ತೊಂದು ದೊಡ್ಡ ಆಫರ್​ ಸಿಕ್ಕಿದೆ. ಅವರು ನಟಿಸಲಿರುವ ಹೊಸ ಸಿನಿಮಾ ಕನ್ನಡದ ಜೊತೆಗೆ ಹಿಂದಿ, ಮರಾಠಿ, ತೆಲುಗು, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಮೂಡಿಬರಲಿದೆ ಎಂಬುದು ವಿಶೇಷ.

ಈ ಸಿನಿಮಾದಲ್ಲಿ ಹೊಸ ನಟ ಕವೀಶ್​ ಶೆಟ್ಟಿ ಅವರು ನಾಯಕನಾಗಿ ನಟಿಸಲಿದ್ದಾರೆ. ಅವರಿಗೆ ಜೋಡಿಯಾಗಿ ಮೇಘಾ ಶೆಟ್ಟಿ ಅಭಿನಯಿಸಲಿದ್ದಾರೆ. ಈ ಹಿಂದೆ ‘ಜಿಲ್ಕಾ’ ಸಿನಿಮಾದಲ್ಲಿ ನಟಿಸಿದ್ದ ಕವೀಶ್​ ಶೆಟ್ಟಿ ಅವರಿಗೆ ಇದು ಎರಡನೇ ಚಿತ್ರ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ಮೂಡಿಬರಲಿದೆ. ಹಲವು ಸಿನಿಮಾಗಳಿಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸಡಗರ ರಾಘವೇಂದ್ರ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಶೀಘ್ರವೇ ಈ ಸಿನಿಮಾದ ಶೀರ್ಷಿಕೆ ಅನಾವರಣ ಆಗಲಿದ್ದು, ನವೆಂಬರ್​ ತಿಂಗಳಲ್ಲಿ ಶೂಟಿಂಗ್​ ಆರಂಭ ಆಗಲಿದೆ.

ಉಡುಪಿ ಮೂಲದ ವಿಜಯ್ ಕುಮಾರ್ ಶೆಟ್ಟಿ ಮತ್ತು ರಮೇಶ್ ಕೊಠಾರಿ ತಮ್ಮ ಕ್ಲಾಸಿಕ್ ಸ್ಟುಡಿಯೋ ಅಂಗ ಸಂಸ್ಥೆಯ ಅಡಿಯಲ್ಲಿ ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಎನ್ನುವ ನಿರ್ಮಾಣ ಸಂಸ್ಥೆಯ ಮೂಲಕ ಈ ಚಿತ್ರವನ್ನು ಅದ್ದೂರಿಯಾಗಿ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಏಕಕಾಲಕ್ಕೆ ನಿರ್ಮಿಸುತ್ತಿದ್ದಾರೆ. ಇವರೊಂದಿಗೆ ಮರಾಠಿ ಚಿತ್ರರಂಗದ ಪ್ರತಿಷ್ಠಿತ ದೀಪಕ್ ರಾಣೆ ಫಿಲ್ಮ್ಸ್ ಕೂಡ ಕೈ ಜೋಡಿಸಿದೆ.

‘ನಮ್ಮ ಸಿನಿಮಾದಲ್ಲಿ ಅದ್ಭುತವಾದ ಒಂದು ಕಥೆ ಇರಲಿದೆ. ಮೇಕಿಂಗ್​ ಅದ್ದೂರಿಯಾಗಿರಲಿದೆ. ಕನ್ನಡ, ಮರಾಠಿ ಸೇರಿ ಹಲವು ಭಾಷೆಯ ಸ್ಟಾರ್​ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಾರೆ. ನುರಿತ ತಂತ್ರಜ್ಞರು ಕೆಲಸ ಮಾಡಲಿದ್ದಾರೆ’ ಎಂದಿದ್ದಾರೆ ನಿರ್ಮಾಪಕ ವಿಜಯ್​ ಕುಮಾರ್​ ಶೆಟ್ಟಿ.

ಇದನ್ನೂ ಓದಿ:

ದಿಲ್ ಪಸಂದ್ ಚಿತ್ರದ ಕತೆ ಕೇಳಿ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾಗಿ ಚಿತ್ರದ ನಾಯಕಿ ಮೇಘಾ ಶೆಟ್ಟಿ ಹೇಳುತ್ತಾರೆ

ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
140 ಕೆಜಿ ಬೆಳ್ಳಿ ದೋಚಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ