AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಬಿಗ್​ ಟ್ವಿಸ್ಟ್​; ಇದನ್ನು ನಾವು ಒಪ್ಪಲ್ಲ ಎಂದ ವೀಕ್ಷಕರು

ಸಾಮಾನ್ಯವಾಗಿ, ಹೀರೋ ಆಗಿ ತೆರೆ ಮೇಲೆ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ ಅದೇ ಆಗಿದೆ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಬಿಗ್​ ಟ್ವಿಸ್ಟ್​; ಇದನ್ನು ನಾವು ಒಪ್ಪಲ್ಲ ಎಂದ ವೀಕ್ಷಕರು
ಜೊತೆ ಜೊತೆಯಲಿ
TV9 Web
| Edited By: |

Updated on:Dec 31, 2021 | 4:49 PM

Share

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಆರ್ಯವರ್ಧನ್​ (ಅನಿರುದ್ಧ) ಹಾಗೂ ಅನು (ಮೇಘಾ ಶೆಟ್ಟಿ) ಇಬ್ಬರ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದಾರೆ. ಮದುವೆ ಆದ ನಂತರದಲ್ಲಿ ಈ ಕಥೆ ಯಾವ ರೀತಿ ಸಾಗಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಇತ್ತು. ಆದರೆ, ಯಾರೂ ಊಹಿಸದ ರೀತಿಯಲ್ಲಿ ಈ ಧಾರಾವಾಹಿ ತಿರುವೊಂದನ್ನು ಪಡೆದುಕೊಂಡಿದೆ. ಇದು ವೀಕ್ಷಕರಿಗೆ ಬೇಸರ ತರಿಸಿದೆ. ಅಲ್ಲದೆ, ಇದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎನ್ನುವ ಮಾತನ್ನು ಹೇಳಿದ್ದಾರೆ.

ಸಾಮಾನ್ಯವಾಗಿ, ಹೀರೋ ಆಗಿ ತೆರೆ ಮೇಲೆ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ ಅದೇ ಆಗಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಪಾತ್ರದಲ್ಲಿ ಆರ್ಯವರ್ಧನ್​ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಧಾರಾವಾಹಿಯಲ್ಲಿ ಬರುವ ಆರ್ಯವರ್ಧನ್​ ಪಾತ್ರವನ್ನು ಒಂದು ಬ್ರ್ಯಾಂಡ್​ ರೀತಿಯಲ್ಲಿ ವೀಕ್ಷಕರು ಕಂಡಿದ್ದರು. ಆತ ನಡೆದುಕೊಳ್ಳುತ್ತಿದ್ದ ರೀತಿ, ಆತ ತೋರುತ್ತಿದ್ದ ಕರುಣೆ, ಆತನ ಒಳ್ಳೆಯ ಗುಣಕ್ಕೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು. ಆದರೆ, ಈ ಪಾತ್ರ ನೆಗೆಟಿವ್​ ಶೇಡ್​ಗೆ ತಿರುಗುತ್ತಿದೆ.

View this post on Instagram

A post shared by Zee Kannada (@zeekannada)

ಆರ್ಯವರ್ಧನ್​ನ ಮೊದಲ ಪತ್ನಿ ರಾಜನಂದಿನಿ ಮೃತಪಟ್ಟಿದ್ದಾಳೆ. ಅವಳ ಆಸ್ತಿ ರಾಜನಂದಿನಿ ತಾಯಿ ಶಾರದಾ ದೇವಿ ಮತ್ತು ಹರ್ಷನ ಹೆಸರಿನಲ್ಲಿದೆ. ಇದನ್ನು ಕಬಳಿಸೋಕೆ ಆರ್ಯವರ್ಧನ್​ ಸಂಚು ರೂಪಿಸುತ್ತಿದ್ದಾನೆ. ಇದಕ್ಕೆ ಆತ ದಾಳವನ್ನಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಅನು ಅವಳನ್ನು. ಆರಂಭದಲ್ಲಿ ಈ ಧಾರಾವಾಹಿಯಲ್ಲಿ ಹೈಲೈಟ್​ ಆಗಿದ್ದು ಅನು ಹಾಗೂ ಆರ್ಯವರ್ಧನ್​ ಪ್ರೇಮ ವಿಚಾರ. ಆದರೆ, ಇದೆಲ್ಲವೂ ಸುಳ್ಳು ಎಂಬ ರೀತಿಯಲ್ಲಿ ತೋರುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.

‘ಜೊತೆ ಜೊತೆಯಲಿ’ ನೀಡಿದ ದೊಡ್ಡ ಟ್ವಿಸ್ಟ್​ ಬಗ್ಗೆ ವೀಕ್ಷಕರ ವಲಯ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದೆ. ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಒಂದು ವರ್ಗದವರು ಕಮೆಂಟ್​ ಮಾಡುತ್ತಿದ್ದಾರೆ. ಮೂಲ ಕಥೆಗೂ, ಕನ್ನಡದ ಕಥೆಗೂ ಬದಲಾವಣೆ ಮಾಡಿಕೊಳ್ಳಬೇಕಿತ್ತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಆರ್ಯವರ್ಧನ್​ ಪಾತ್ರ ಮತ್ತಷ್ಟು ನೆಗೆಟಿವ್​ ಶೇಡ್​ಗೆ ತಿರುಗಿದರೂ ಅಚ್ಚರಿ ಏನಿಲ್ಲ ಎನ್ನುವ ಮಾತು ವೀಕ್ಷಕರ ವಲಯದಿಂದ ಕೇಳಿ ಬಂದಿದೆ.

ಇದನ್ನೂ ಓದಿ: ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?

Published On - 4:10 pm, Fri, 31 December 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ