AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಬಿಗ್​ ಟ್ವಿಸ್ಟ್​; ಇದನ್ನು ನಾವು ಒಪ್ಪಲ್ಲ ಎಂದ ವೀಕ್ಷಕರು

ಸಾಮಾನ್ಯವಾಗಿ, ಹೀರೋ ಆಗಿ ತೆರೆ ಮೇಲೆ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ ಅದೇ ಆಗಿದೆ.

‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ಬಿಗ್​ ಟ್ವಿಸ್ಟ್​; ಇದನ್ನು ನಾವು ಒಪ್ಪಲ್ಲ ಎಂದ ವೀಕ್ಷಕರು
ಜೊತೆ ಜೊತೆಯಲಿ
TV9 Web
| Edited By: |

Updated on:Dec 31, 2021 | 4:49 PM

Share

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ವೀಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿದೆ. ಆರ್ಯವರ್ಧನ್​ (ಅನಿರುದ್ಧ) ಹಾಗೂ ಅನು (ಮೇಘಾ ಶೆಟ್ಟಿ) ಇಬ್ಬರ ವಿವಾಹ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇಬ್ಬರೂ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದಾರೆ. ಮದುವೆ ಆದ ನಂತರದಲ್ಲಿ ಈ ಕಥೆ ಯಾವ ರೀತಿ ಸಾಗಲಿದೆ ಎಂಬ ಕುತೂಹಲ ಪ್ರೇಕ್ಷಕರಲ್ಲಿ ಇತ್ತು. ಆದರೆ, ಯಾರೂ ಊಹಿಸದ ರೀತಿಯಲ್ಲಿ ಈ ಧಾರಾವಾಹಿ ತಿರುವೊಂದನ್ನು ಪಡೆದುಕೊಂಡಿದೆ. ಇದು ವೀಕ್ಷಕರಿಗೆ ಬೇಸರ ತರಿಸಿದೆ. ಅಲ್ಲದೆ, ಇದನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎನ್ನುವ ಮಾತನ್ನು ಹೇಳಿದ್ದಾರೆ.

ಸಾಮಾನ್ಯವಾಗಿ, ಹೀರೋ ಆಗಿ ತೆರೆ ಮೇಲೆ ನೋಡುತ್ತಿದ್ದವರನ್ನು ವಿಲನ್​ ಆಗಿ ನೋಡೋಕೆ ಯಾರೂ ಇಷ್ಟಪಡುವುದಿಲ್ಲ. ಅದಕ್ಕೆ ಬೇಗ ಒಗ್ಗಿಕೊಳ್ಳೋಕೆ ಅಭಿಮಾನಿಗಳಿಗೆ ಸಾಧ್ಯವಾಗುವುದಿಲ್ಲ. ಈಗ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲೂ ಅದೇ ಆಗಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಪಾತ್ರದಲ್ಲಿ ಆರ್ಯವರ್ಧನ್​ ಪಾತ್ರ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ. ಈ ಧಾರಾವಾಹಿಯಲ್ಲಿ ಬರುವ ಆರ್ಯವರ್ಧನ್​ ಪಾತ್ರವನ್ನು ಒಂದು ಬ್ರ್ಯಾಂಡ್​ ರೀತಿಯಲ್ಲಿ ವೀಕ್ಷಕರು ಕಂಡಿದ್ದರು. ಆತ ನಡೆದುಕೊಳ್ಳುತ್ತಿದ್ದ ರೀತಿ, ಆತ ತೋರುತ್ತಿದ್ದ ಕರುಣೆ, ಆತನ ಒಳ್ಳೆಯ ಗುಣಕ್ಕೆ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಂಡಿತ್ತು. ಆದರೆ, ಈ ಪಾತ್ರ ನೆಗೆಟಿವ್​ ಶೇಡ್​ಗೆ ತಿರುಗುತ್ತಿದೆ.

View this post on Instagram

A post shared by Zee Kannada (@zeekannada)

ಆರ್ಯವರ್ಧನ್​ನ ಮೊದಲ ಪತ್ನಿ ರಾಜನಂದಿನಿ ಮೃತಪಟ್ಟಿದ್ದಾಳೆ. ಅವಳ ಆಸ್ತಿ ರಾಜನಂದಿನಿ ತಾಯಿ ಶಾರದಾ ದೇವಿ ಮತ್ತು ಹರ್ಷನ ಹೆಸರಿನಲ್ಲಿದೆ. ಇದನ್ನು ಕಬಳಿಸೋಕೆ ಆರ್ಯವರ್ಧನ್​ ಸಂಚು ರೂಪಿಸುತ್ತಿದ್ದಾನೆ. ಇದಕ್ಕೆ ಆತ ದಾಳವನ್ನಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಅನು ಅವಳನ್ನು. ಆರಂಭದಲ್ಲಿ ಈ ಧಾರಾವಾಹಿಯಲ್ಲಿ ಹೈಲೈಟ್​ ಆಗಿದ್ದು ಅನು ಹಾಗೂ ಆರ್ಯವರ್ಧನ್​ ಪ್ರೇಮ ವಿಚಾರ. ಆದರೆ, ಇದೆಲ್ಲವೂ ಸುಳ್ಳು ಎಂಬ ರೀತಿಯಲ್ಲಿ ತೋರುತ್ತಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದಾರೆ.

‘ಜೊತೆ ಜೊತೆಯಲಿ’ ನೀಡಿದ ದೊಡ್ಡ ಟ್ವಿಸ್ಟ್​ ಬಗ್ಗೆ ವೀಕ್ಷಕರ ವಲಯ ಸೋಶಿಯಲ್​ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದೆ. ನಾವು ಇದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಒಂದು ವರ್ಗದವರು ಕಮೆಂಟ್​ ಮಾಡುತ್ತಿದ್ದಾರೆ. ಮೂಲ ಕಥೆಗೂ, ಕನ್ನಡದ ಕಥೆಗೂ ಬದಲಾವಣೆ ಮಾಡಿಕೊಳ್ಳಬೇಕಿತ್ತು ಎಂದು ಕೆಲವರು ಹೇಳಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಆರ್ಯವರ್ಧನ್​ ಪಾತ್ರ ಮತ್ತಷ್ಟು ನೆಗೆಟಿವ್​ ಶೇಡ್​ಗೆ ತಿರುಗಿದರೂ ಅಚ್ಚರಿ ಏನಿಲ್ಲ ಎನ್ನುವ ಮಾತು ವೀಕ್ಷಕರ ವಲಯದಿಂದ ಕೇಳಿ ಬಂದಿದೆ.

ಇದನ್ನೂ ಓದಿ: ಡಾರ್ಲಿಂಗ್​ ಕೃಷ್ಣ ಜೊತೆ ಮೇಘಾ ಶೆಟ್ಟಿ ‘ದಿಲ್​ ಪಸಂದ್’​; ‘ಜೊತೆ ಜೊತೆಯಲಿ’ ನಟಿಗೆ ಸಿಕ್ಕ ಪಾತ್ರ ಹೇಗಿದೆ?

‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?

Published On - 4:10 pm, Fri, 31 December 21

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​