AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು

Anu Sirimane | Aryavardhan: ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್​ ಟ್ರ್ಯಾಕ್​ ಸಖತ್​ ಜನಮೆಚ್ಚುಗೆ ಪಡೆದುಕೊಂಡಿದೆ. 3 ಕೋಟಿಗೂ ಹೆಚ್ಚು ಬಾರಿ ವೀಕ್ಷಣೆ ಕಂಡು ಮೈಲಿಗಲ್ಲು ಸಾಧಿಸಿದೆ.

Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು
ಮೇಘಾ ಶೆಟ್ಟಿ, ಅನಿರುದ್ಧ್
TV9 Web
| Updated By: ಮದನ್​ ಕುಮಾರ್​

Updated on:Jun 27, 2022 | 8:53 AM

Share

ನಟ ಅನಿರುದ್ಧ್ (Aniruddha Jatkar) ಅವರ ಬದುಕಿನಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಪ್ರಾರಂಭ ಆಗಲು ಕಾರಣ ಆಗಿದ್ದು ‘ಜೊತೆ ಜೊತೆಯಲಿ’ ಧಾರಾವಾಹಿ​. ಈ ಸೀರಿಯಲ್ ಮೂಲಕ ಅನೇಕರ ಬದುಕು ಬದಲಾಯಿತು ಎಂದರೆ ತಪ್ಪಿಲ್ಲ. ನಟಿ ಮೇಘಾ ಶೆಟ್ಟಿ ಅವರು ದೊಡ್ಡ ಮಟ್ಟದ ಯಶಸ್ಸು ಪಡೆದರು. ಈಗ ಅವರು ಅನೇಕ ಸಿನಿಮಾಗಳಿಗೂ ನಾಯಕಿ ಆಗಿ ಮಿಂಚುತ್ತಿದ್ದಾರೆ. ‘ಜೊತೆ ಜೊತೆಯಲಿ’ ಸೀರಿಯಲ್​ ಕಥೆಯ ರೀತಿಯೇ ಅದರ ಶೀರ್ಷಿಕೆ ಗೀತೆ (Jothe Jotheyali Serial Song) ಕೂಡ ಜನರ ಅಚ್ಚುಮೆಚ್ಚು. ಈ ಟೈಟಲ್​ ಟ್ರ್ಯಾಕ್​ ನೋಡಿ ವೀಕ್ಷಕರು ಫಿದಾ ಆಗಿದ್ದಾರೆ. ಒಂದು ಕಾಲದಲ್ಲಿ ಧಾರಾವಾಹಿಯ ಸಾಂಗ್​ಗಳು ಜನರ ಮನದಲ್ಲಿ ಶಾಶ್ವತ ಸ್ಥಾನ ಪಡೆದುಕೊಳ್ಳುತ್ತಿದ್ದವು. ಅಂಥ ಕಾಲ ಮತ್ತೆ ಮರಳುವಂತೆ ಮಾಡಿದ್ದೇ ‘ಜೀ ಕನ್ನಡ’ ವಾಹಿನಿಯ ‘ಜೊತೆ ಜೊತೆಯಲಿ’ (Jothe Jotheyali Serial) ಶೀರ್ಷಿಕೆ ಗೀತೆ. ಹೌದು, ಯೂಟ್ಯೂಬ್​ನಲ್ಲಿ ಈ ಹಾಡನ್ನು ಬರೋಬ್ಬರಿ 3 ಕೋಟಿ ಬಾರಿ ವೀಕ್ಷಣೆ ಮಾಡಲಾಗಿದೆ.

ಬೇರೆಲ್ಲ ಧಾರಾವಾಹಿಗಳಿಗಿಂತಲೂ ‘ಜೊತೆ ಜೊತೆಯಲಿ’ ಸೀರಿಯಲ್​ ಕಥೆ ಭಿನ್ನವಾಗಿದೆ. ವಯಸ್ಸಿನಲ್ಲಿ ಸಾಕಷ್ಟು ಅಂತರ ಇರುವ ಜೋಡಿಗಳ ನಡುವಿನ ಕಹಾನಿ ಈ ಧಾರಾವಾಹಿಯಲ್ಲಿ ಇದೆ. ಆರ್ಯವರ್ಧನ್​ ಮತ್ತು ಅನು ಸಿರಿಮನೆ ಎಂಬ ಆ ಪಾತ್ರಗಳಿಗೆ ಅನಿರುದ್ಧ್​ ಮತ್ತು ಮೇಘಾ ಶೆಟ್ಟಿ ಜೀವ ತುಂಬಿದ್ದಾರೆ. ಕಥೆಯ ಎಳೆಯನ್ನು ವಿವರಿಸುವ ರೀತಿಯಲ್ಲಿ ಮೂಡಿಬಂದ ಶೀರ್ಷಿಕೆ ಗೀತೆಯನ್ನು ಜನರು ಮೆಚ್ಚಿಕೊಂಡರು. ಧಾರಾವಾಹಿಯ ಗೆಲುವಿಗೆ ಇದು ಕೂಡ ಒಂದು ಕಾರಣ ಎಂದರೆ ತಪ್ಪಿಲ್ಲ.

2020ರ ಜನವರಿ 27ರಂದು ‘ಜೀ ಕನ್ನಡ’ ಯೂಟ್ಯೂಬ್​ ಚಾನೆಲ್​ನಲ್ಲಿ ‘ಜೊತೆ ಜೊತೆಯಲಿ’ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ಈವರೆಗೂ ಜನರು ಬರೋಬ್ಬರಿ 3 ಕೋಟಿಗಿಂತಲೂ ಅಧಿಕ ಬಾರಿ ಇದನ್ನು ವೀಕ್ಷಿಸಿದ್ದಾರೆ. ಇದು ಸಣ್ಣ ಸಾಧನೆ ಏನಲ್ಲ. ಈ ಹಾಡಿಗೆ ಹರ್ಷಪ್ರಿಯಾ ಸಾಹಿತ್ಯ ಬರೆದಿದ್ದಾರೆ. ಸುನಾಧ್​ ಗೌತಮ್​ ಸಂಗೀತ ನೀಡಿದ್ದಾರೆ. ನಿನಾದ್​ ನಾಯಕ್​, ನಿಹಾಲ್​ ತಾವ್ರೋ ಹಾಗೂ ರಜತ್​ ಹೆಗಡೆ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ
Image
‘ಟ್ವಿಸ್ಟ್​ ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ’; ಆರ್ಯವರ್ಧನ್ ಕ್ಯಾರೆಕ್ಟರ್ ಬದಲಾದ ಬಗ್ಗೆ ನಟ ಅನಿರುದ್ಧ ಮಾತು
Image
Jothe Jotheyali: ‘ಜೊತೆ ಜೊತೆಯಲಿ’ ಧಾರಾವಾಹಿ ನೋಡೋ ವೀಕ್ಷಕರಿಗೆ ನಟ ಅನಿರುದ್ಧ ವಿಶೇಷ ಮನವಿ
Image
‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?
Image
‘ಸಂಚಾರಿ ವಿಜಯ್ ರೀತಿ ನನಗೂ ಅವಮಾನ ಆಗಿದೆ‘; ‘ಜೊತೆ ಜೊತೆಯಲಿ’ ಅನಿರುದ್ಧ ಹೇಳಿದ ಕಹಿ ಸತ್ಯ

ಇಂದಿಗೂ ಈ ಹಾಡಿನ ಕ್ರೇಜ್​ ಕಡಿಮೆ ಆಗಿಲ್ಲ. ಇದರ ವೀವ್ಸ್​ ಹೆಚ್ಚುತ್ತಲೇ ಇದೆ. ಈವರೆಗೂ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 7 ಸಾವಿರಕ್ಕೂ ಅಧಿಕ ಕಮೆಂಟ್​ಗಳ ಮೂಲಕ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಪರಭಾಷೆ ಮಂದಿ ಕೂಡ ಈ ಗೀತೆಗೆ ತಲೆದೂಗಿದ್ದಾರೆ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಯ ಗೆಲುವಿನ ಸೂತ್ರವೇನು? ನಟಿ ಮೇಘಾ ಶೆಟ್ಟಿ ವಿವರಿಸಿದ್ದು ಹೀಗೆ

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿಗೆ ಬಂತು ಪ್ರ್ಯಾಂಕ್​ ಕಾಲ್​​; ನಟಿಯ ಉತ್ತರ ಹೇಗಿತ್ತು?

Published On - 8:53 am, Mon, 27 June 22

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು