AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು

Anu Sirimane | Aryavardhan: ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್​ ಟ್ರ್ಯಾಕ್​ ಸಖತ್​ ಜನಮೆಚ್ಚುಗೆ ಪಡೆದುಕೊಂಡಿದೆ. 3 ಕೋಟಿಗೂ ಹೆಚ್ಚು ಬಾರಿ ವೀಕ್ಷಣೆ ಕಂಡು ಮೈಲಿಗಲ್ಲು ಸಾಧಿಸಿದೆ.

Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು
ಮೇಘಾ ಶೆಟ್ಟಿ, ಅನಿರುದ್ಧ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 27, 2022 | 8:53 AM

ನಟ ಅನಿರುದ್ಧ್ (Aniruddha Jatkar) ಅವರ ಬದುಕಿನಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಪ್ರಾರಂಭ ಆಗಲು ಕಾರಣ ಆಗಿದ್ದು ‘ಜೊತೆ ಜೊತೆಯಲಿ’ ಧಾರಾವಾಹಿ​. ಈ ಸೀರಿಯಲ್ ಮೂಲಕ ಅನೇಕರ ಬದುಕು ಬದಲಾಯಿತು ಎಂದರೆ ತಪ್ಪಿಲ್ಲ. ನಟಿ ಮೇಘಾ ಶೆಟ್ಟಿ ಅವರು ದೊಡ್ಡ ಮಟ್ಟದ ಯಶಸ್ಸು ಪಡೆದರು. ಈಗ ಅವರು ಅನೇಕ ಸಿನಿಮಾಗಳಿಗೂ ನಾಯಕಿ ಆಗಿ ಮಿಂಚುತ್ತಿದ್ದಾರೆ. ‘ಜೊತೆ ಜೊತೆಯಲಿ’ ಸೀರಿಯಲ್​ ಕಥೆಯ ರೀತಿಯೇ ಅದರ ಶೀರ್ಷಿಕೆ ಗೀತೆ (Jothe Jotheyali Serial Song) ಕೂಡ ಜನರ ಅಚ್ಚುಮೆಚ್ಚು. ಈ ಟೈಟಲ್​ ಟ್ರ್ಯಾಕ್​ ನೋಡಿ ವೀಕ್ಷಕರು ಫಿದಾ ಆಗಿದ್ದಾರೆ. ಒಂದು ಕಾಲದಲ್ಲಿ ಧಾರಾವಾಹಿಯ ಸಾಂಗ್​ಗಳು ಜನರ ಮನದಲ್ಲಿ ಶಾಶ್ವತ ಸ್ಥಾನ ಪಡೆದುಕೊಳ್ಳುತ್ತಿದ್ದವು. ಅಂಥ ಕಾಲ ಮತ್ತೆ ಮರಳುವಂತೆ ಮಾಡಿದ್ದೇ ‘ಜೀ ಕನ್ನಡ’ ವಾಹಿನಿಯ ‘ಜೊತೆ ಜೊತೆಯಲಿ’ (Jothe Jotheyali Serial) ಶೀರ್ಷಿಕೆ ಗೀತೆ. ಹೌದು, ಯೂಟ್ಯೂಬ್​ನಲ್ಲಿ ಈ ಹಾಡನ್ನು ಬರೋಬ್ಬರಿ 3 ಕೋಟಿ ಬಾರಿ ವೀಕ್ಷಣೆ ಮಾಡಲಾಗಿದೆ.

ಬೇರೆಲ್ಲ ಧಾರಾವಾಹಿಗಳಿಗಿಂತಲೂ ‘ಜೊತೆ ಜೊತೆಯಲಿ’ ಸೀರಿಯಲ್​ ಕಥೆ ಭಿನ್ನವಾಗಿದೆ. ವಯಸ್ಸಿನಲ್ಲಿ ಸಾಕಷ್ಟು ಅಂತರ ಇರುವ ಜೋಡಿಗಳ ನಡುವಿನ ಕಹಾನಿ ಈ ಧಾರಾವಾಹಿಯಲ್ಲಿ ಇದೆ. ಆರ್ಯವರ್ಧನ್​ ಮತ್ತು ಅನು ಸಿರಿಮನೆ ಎಂಬ ಆ ಪಾತ್ರಗಳಿಗೆ ಅನಿರುದ್ಧ್​ ಮತ್ತು ಮೇಘಾ ಶೆಟ್ಟಿ ಜೀವ ತುಂಬಿದ್ದಾರೆ. ಕಥೆಯ ಎಳೆಯನ್ನು ವಿವರಿಸುವ ರೀತಿಯಲ್ಲಿ ಮೂಡಿಬಂದ ಶೀರ್ಷಿಕೆ ಗೀತೆಯನ್ನು ಜನರು ಮೆಚ್ಚಿಕೊಂಡರು. ಧಾರಾವಾಹಿಯ ಗೆಲುವಿಗೆ ಇದು ಕೂಡ ಒಂದು ಕಾರಣ ಎಂದರೆ ತಪ್ಪಿಲ್ಲ.

2020ರ ಜನವರಿ 27ರಂದು ‘ಜೀ ಕನ್ನಡ’ ಯೂಟ್ಯೂಬ್​ ಚಾನೆಲ್​ನಲ್ಲಿ ‘ಜೊತೆ ಜೊತೆಯಲಿ’ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ಈವರೆಗೂ ಜನರು ಬರೋಬ್ಬರಿ 3 ಕೋಟಿಗಿಂತಲೂ ಅಧಿಕ ಬಾರಿ ಇದನ್ನು ವೀಕ್ಷಿಸಿದ್ದಾರೆ. ಇದು ಸಣ್ಣ ಸಾಧನೆ ಏನಲ್ಲ. ಈ ಹಾಡಿಗೆ ಹರ್ಷಪ್ರಿಯಾ ಸಾಹಿತ್ಯ ಬರೆದಿದ್ದಾರೆ. ಸುನಾಧ್​ ಗೌತಮ್​ ಸಂಗೀತ ನೀಡಿದ್ದಾರೆ. ನಿನಾದ್​ ನಾಯಕ್​, ನಿಹಾಲ್​ ತಾವ್ರೋ ಹಾಗೂ ರಜತ್​ ಹೆಗಡೆ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ
Image
‘ಟ್ವಿಸ್ಟ್​ ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ’; ಆರ್ಯವರ್ಧನ್ ಕ್ಯಾರೆಕ್ಟರ್ ಬದಲಾದ ಬಗ್ಗೆ ನಟ ಅನಿರುದ್ಧ ಮಾತು
Image
Jothe Jotheyali: ‘ಜೊತೆ ಜೊತೆಯಲಿ’ ಧಾರಾವಾಹಿ ನೋಡೋ ವೀಕ್ಷಕರಿಗೆ ನಟ ಅನಿರುದ್ಧ ವಿಶೇಷ ಮನವಿ
Image
‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?
Image
‘ಸಂಚಾರಿ ವಿಜಯ್ ರೀತಿ ನನಗೂ ಅವಮಾನ ಆಗಿದೆ‘; ‘ಜೊತೆ ಜೊತೆಯಲಿ’ ಅನಿರುದ್ಧ ಹೇಳಿದ ಕಹಿ ಸತ್ಯ

ಇಂದಿಗೂ ಈ ಹಾಡಿನ ಕ್ರೇಜ್​ ಕಡಿಮೆ ಆಗಿಲ್ಲ. ಇದರ ವೀವ್ಸ್​ ಹೆಚ್ಚುತ್ತಲೇ ಇದೆ. ಈವರೆಗೂ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 7 ಸಾವಿರಕ್ಕೂ ಅಧಿಕ ಕಮೆಂಟ್​ಗಳ ಮೂಲಕ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಪರಭಾಷೆ ಮಂದಿ ಕೂಡ ಈ ಗೀತೆಗೆ ತಲೆದೂಗಿದ್ದಾರೆ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಯ ಗೆಲುವಿನ ಸೂತ್ರವೇನು? ನಟಿ ಮೇಘಾ ಶೆಟ್ಟಿ ವಿವರಿಸಿದ್ದು ಹೀಗೆ

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿಗೆ ಬಂತು ಪ್ರ್ಯಾಂಕ್​ ಕಾಲ್​​; ನಟಿಯ ಉತ್ತರ ಹೇಗಿತ್ತು?

Published On - 8:53 am, Mon, 27 June 22

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!