AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು

Anu Sirimane | Aryavardhan: ‘ಜೊತೆ ಜೊತೆಯಲಿ’ ಧಾರಾವಾಹಿಯ ಟೈಟಲ್​ ಟ್ರ್ಯಾಕ್​ ಸಖತ್​ ಜನಮೆಚ್ಚುಗೆ ಪಡೆದುಕೊಂಡಿದೆ. 3 ಕೋಟಿಗೂ ಹೆಚ್ಚು ಬಾರಿ ವೀಕ್ಷಣೆ ಕಂಡು ಮೈಲಿಗಲ್ಲು ಸಾಧಿಸಿದೆ.

Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು
ಮೇಘಾ ಶೆಟ್ಟಿ, ಅನಿರುದ್ಧ್
TV9 Web
| Edited By: |

Updated on:Jun 27, 2022 | 8:53 AM

Share

ನಟ ಅನಿರುದ್ಧ್ (Aniruddha Jatkar) ಅವರ ಬದುಕಿನಲ್ಲಿ ಸೆಕೆಂಡ್​ ಇನ್ನಿಂಗ್ಸ್​ ಪ್ರಾರಂಭ ಆಗಲು ಕಾರಣ ಆಗಿದ್ದು ‘ಜೊತೆ ಜೊತೆಯಲಿ’ ಧಾರಾವಾಹಿ​. ಈ ಸೀರಿಯಲ್ ಮೂಲಕ ಅನೇಕರ ಬದುಕು ಬದಲಾಯಿತು ಎಂದರೆ ತಪ್ಪಿಲ್ಲ. ನಟಿ ಮೇಘಾ ಶೆಟ್ಟಿ ಅವರು ದೊಡ್ಡ ಮಟ್ಟದ ಯಶಸ್ಸು ಪಡೆದರು. ಈಗ ಅವರು ಅನೇಕ ಸಿನಿಮಾಗಳಿಗೂ ನಾಯಕಿ ಆಗಿ ಮಿಂಚುತ್ತಿದ್ದಾರೆ. ‘ಜೊತೆ ಜೊತೆಯಲಿ’ ಸೀರಿಯಲ್​ ಕಥೆಯ ರೀತಿಯೇ ಅದರ ಶೀರ್ಷಿಕೆ ಗೀತೆ (Jothe Jotheyali Serial Song) ಕೂಡ ಜನರ ಅಚ್ಚುಮೆಚ್ಚು. ಈ ಟೈಟಲ್​ ಟ್ರ್ಯಾಕ್​ ನೋಡಿ ವೀಕ್ಷಕರು ಫಿದಾ ಆಗಿದ್ದಾರೆ. ಒಂದು ಕಾಲದಲ್ಲಿ ಧಾರಾವಾಹಿಯ ಸಾಂಗ್​ಗಳು ಜನರ ಮನದಲ್ಲಿ ಶಾಶ್ವತ ಸ್ಥಾನ ಪಡೆದುಕೊಳ್ಳುತ್ತಿದ್ದವು. ಅಂಥ ಕಾಲ ಮತ್ತೆ ಮರಳುವಂತೆ ಮಾಡಿದ್ದೇ ‘ಜೀ ಕನ್ನಡ’ ವಾಹಿನಿಯ ‘ಜೊತೆ ಜೊತೆಯಲಿ’ (Jothe Jotheyali Serial) ಶೀರ್ಷಿಕೆ ಗೀತೆ. ಹೌದು, ಯೂಟ್ಯೂಬ್​ನಲ್ಲಿ ಈ ಹಾಡನ್ನು ಬರೋಬ್ಬರಿ 3 ಕೋಟಿ ಬಾರಿ ವೀಕ್ಷಣೆ ಮಾಡಲಾಗಿದೆ.

ಬೇರೆಲ್ಲ ಧಾರಾವಾಹಿಗಳಿಗಿಂತಲೂ ‘ಜೊತೆ ಜೊತೆಯಲಿ’ ಸೀರಿಯಲ್​ ಕಥೆ ಭಿನ್ನವಾಗಿದೆ. ವಯಸ್ಸಿನಲ್ಲಿ ಸಾಕಷ್ಟು ಅಂತರ ಇರುವ ಜೋಡಿಗಳ ನಡುವಿನ ಕಹಾನಿ ಈ ಧಾರಾವಾಹಿಯಲ್ಲಿ ಇದೆ. ಆರ್ಯವರ್ಧನ್​ ಮತ್ತು ಅನು ಸಿರಿಮನೆ ಎಂಬ ಆ ಪಾತ್ರಗಳಿಗೆ ಅನಿರುದ್ಧ್​ ಮತ್ತು ಮೇಘಾ ಶೆಟ್ಟಿ ಜೀವ ತುಂಬಿದ್ದಾರೆ. ಕಥೆಯ ಎಳೆಯನ್ನು ವಿವರಿಸುವ ರೀತಿಯಲ್ಲಿ ಮೂಡಿಬಂದ ಶೀರ್ಷಿಕೆ ಗೀತೆಯನ್ನು ಜನರು ಮೆಚ್ಚಿಕೊಂಡರು. ಧಾರಾವಾಹಿಯ ಗೆಲುವಿಗೆ ಇದು ಕೂಡ ಒಂದು ಕಾರಣ ಎಂದರೆ ತಪ್ಪಿಲ್ಲ.

2020ರ ಜನವರಿ 27ರಂದು ‘ಜೀ ಕನ್ನಡ’ ಯೂಟ್ಯೂಬ್​ ಚಾನೆಲ್​ನಲ್ಲಿ ‘ಜೊತೆ ಜೊತೆಯಲಿ’ ಟೈಟಲ್​ ಟ್ರ್ಯಾಕ್​ ಬಿಡುಗಡೆ ಮಾಡಲಾಯಿತು. ಈವರೆಗೂ ಜನರು ಬರೋಬ್ಬರಿ 3 ಕೋಟಿಗಿಂತಲೂ ಅಧಿಕ ಬಾರಿ ಇದನ್ನು ವೀಕ್ಷಿಸಿದ್ದಾರೆ. ಇದು ಸಣ್ಣ ಸಾಧನೆ ಏನಲ್ಲ. ಈ ಹಾಡಿಗೆ ಹರ್ಷಪ್ರಿಯಾ ಸಾಹಿತ್ಯ ಬರೆದಿದ್ದಾರೆ. ಸುನಾಧ್​ ಗೌತಮ್​ ಸಂಗೀತ ನೀಡಿದ್ದಾರೆ. ನಿನಾದ್​ ನಾಯಕ್​, ನಿಹಾಲ್​ ತಾವ್ರೋ ಹಾಗೂ ರಜತ್​ ಹೆಗಡೆ ಅವರು ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಇದನ್ನೂ ಓದಿ
Image
‘ಟ್ವಿಸ್ಟ್​ ಇಲ್ಲದೆ ‘ಜೊತೆ ಜೊತೆಯಲಿ’ ಧಾರಾವಾಹಿ ಇಲ್ಲ’; ಆರ್ಯವರ್ಧನ್ ಕ್ಯಾರೆಕ್ಟರ್ ಬದಲಾದ ಬಗ್ಗೆ ನಟ ಅನಿರುದ್ಧ ಮಾತು
Image
Jothe Jotheyali: ‘ಜೊತೆ ಜೊತೆಯಲಿ’ ಧಾರಾವಾಹಿ ನೋಡೋ ವೀಕ್ಷಕರಿಗೆ ನಟ ಅನಿರುದ್ಧ ವಿಶೇಷ ಮನವಿ
Image
‘ಜೊತೆ ಜೊತೆಯಲಿ’ ಮೇಘಾ ಶೆಟ್ಟಿಗೆ ಬಹುಭಾಷಾ ಸಿನಿಮಾ ಆಫರ್​; ಈ ಚಿತ್ರಕ್ಕೆ ಹೀರೋ ಯಾರು?
Image
‘ಸಂಚಾರಿ ವಿಜಯ್ ರೀತಿ ನನಗೂ ಅವಮಾನ ಆಗಿದೆ‘; ‘ಜೊತೆ ಜೊತೆಯಲಿ’ ಅನಿರುದ್ಧ ಹೇಳಿದ ಕಹಿ ಸತ್ಯ

ಇಂದಿಗೂ ಈ ಹಾಡಿನ ಕ್ರೇಜ್​ ಕಡಿಮೆ ಆಗಿಲ್ಲ. ಇದರ ವೀವ್ಸ್​ ಹೆಚ್ಚುತ್ತಲೇ ಇದೆ. ಈವರೆಗೂ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಇದನ್ನು ಲೈಕ್​ ಮಾಡಿದ್ದಾರೆ. 7 ಸಾವಿರಕ್ಕೂ ಅಧಿಕ ಕಮೆಂಟ್​ಗಳ ಮೂಲಕ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಪರಭಾಷೆ ಮಂದಿ ಕೂಡ ಈ ಗೀತೆಗೆ ತಲೆದೂಗಿದ್ದಾರೆ.

ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿಯ ಗೆಲುವಿನ ಸೂತ್ರವೇನು? ನಟಿ ಮೇಘಾ ಶೆಟ್ಟಿ ವಿವರಿಸಿದ್ದು ಹೀಗೆ

‘ಜೊತೆ ಜೊತೆಯಲಿ’ ಧಾರಾವಾಹಿ ಮೇಘಾ ಶೆಟ್ಟಿಗೆ ಬಂತು ಪ್ರ್ಯಾಂಕ್​ ಕಾಲ್​​; ನಟಿಯ ಉತ್ತರ ಹೇಗಿತ್ತು?

Published On - 8:53 am, Mon, 27 June 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ