AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anirudh Jatkar: ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದಲ್ಲಿ ​ಕಿರಿಕ್​; ಧಾರಾವಾಹಿಯಿಂದ ಹೊರಹೋಗ್ತಾರಾ ಅನಿರುದ್ಧ್​?

Jothe Jotheyali Serial Aryavardhan: ಖ್ಯಾತ ನಟ ಅನಿರುದ್ಧ್​ ಮತ್ತು ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ನಡುವೆ ಮನಸ್ತಾಪ ಉಂಟಾಗಿದೆ. ಶೂಟಿಂಗ್​ ವೇಳೆ ಕಿರಿಕ್​ ಆಗಿದೆ.

Anirudh Jatkar: ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದಲ್ಲಿ ​ಕಿರಿಕ್​; ಧಾರಾವಾಹಿಯಿಂದ ಹೊರಹೋಗ್ತಾರಾ ಅನಿರುದ್ಧ್​?
ಅನಿರುದ್ಧ್
TV9 Web
| Edited By: |

Updated on:Aug 19, 2022 | 10:03 AM

Share

ಜನಮೆಚ್ಚಿದ ‘ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಆದರೆ ಈಗ ಈ ತಂಡದಲ್ಲಿ ಮನಸ್ತಾಪ ಸೃಷ್ಟಿ ಆಗಿದೆ. ನಟ ಅನಿರುದ್ಧ್​ ಅವರು ಆರ್ಯವರ್ಧನ್​ ಎಂಬ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದು, ಅವರ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದೆ. ಶೂಟಿಂಗ್​ ಸೆಟ್​ನಲ್ಲಿ ಕಿರಿಕ್​ ನಡೆದಿದೆ ಎಂಬ ಮಾಹಿತಿ ಕೇಳಿಬಂದಿದೆ. ಹಾಗಾಗಿ ಮುಂಬರುವ ದಿನಗಳಲ್ಲಿ ಅನಿರುದ್ಧ್ (Anirudh Jatkar)​ ಅವರು ‘ಜೊತೆ ಜೊತೆಯಲಿ’ ಸೀರಿಯಲ್​ನಲ್ಲಿ ನಟಿಸುತ್ತಾರೋ ಇಲ್ಲವೋ ಎಂಬ ಪ್ರಶ್ನೆ ಮೂಡಿದೆ. ಒಟ್ಟಾರೆ ಘಟನೆಗಳ ಬಗ್ಗೆ ಈವರೆಗೂ ಜೀ ಕನ್ನಡ (Zee Kannada) ವಾಹಿನಿ ಕಡೆಯಿಂದಾಗಲಿ, ನಿರ್ದೇಶಕ ಆರೂರು ಜಗದೀಶ್​ ಅವರ ಕಡೆಯಿಂದಾಗಲಿ ಅಥವಾ ನಟ ಅನಿರುದ್ಧ್​ ಅವರಿಂದ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಸದ್ಯದಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ಕರೆಯುವ ಸಾಧ್ಯತೆ ದಟ್ಟವಾಗಿದೆ.

ಮೂಲಗಳ ಪ್ರಕಾರ, ‘ಜೊತೆ ಜೊತೆಯಲಿ’ ಸೀರಿಯಲ್​ ಸೆಟ್​ನಲ್ಲಿ ಅನಿರುದ್ಧ್​ ಅವರು ಅಸಹಕಾರ ತೋರಿದ್ದಾರೆ. 150 ಸಂಚಿಕೆಗಳು ಪೂರ್ಣಗೊಂಡ ಬಳಿಕ ಈ ರೀತಿ ವರ್ತನೆ ಮರುಕಳಿಸಲು ಶುರುವಾಯಿತು. ಅದರ ನಡುವೆಯೂ ಸೀರಿಯಲ್​ ಕೆಲಸಗಳು ಮುಂದುವರಿಯುತ್ತಿದ್ದವು. ಆದರೆ ಈಗ ಎಲ್ಲವೂ ಮಿತಿ ಮೀರಿದ್ದರಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಮೂಲಗಳು ತಿಳಿಸಿವೆ.

ಅನಿರುದ್ಧ್​ ಅವರನ್ನು ಬ್ಯಾನ್​ ಮಾಡುವ ಬಗ್ಗೆ ಆಲೋಚನೆ ಮಾಡಲಾಗುತ್ತಿದೆ ಎಂದು ಕೆಲವೆಡೆ ಸುದ್ದಿ ಪ್ರಕಟ ಆಗಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಹಾಗೂ ಕಿರುತೆರೆ ನಿರ್ಮಾಪಕರ ಸಂಘ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ. ಸದ್ಯಕ್ಕೆ ಈ ಘಟನೆ ಕುರಿತು ಪ್ರತಿಕ್ರಿಯಿಸಲು ಅನಿರುದ್ಧ್​ ನಿರಾಕರಿಸಿದ್ದಾರೆ.

ಇದನ್ನೂ ಓದಿ
Image
Jothe Jotheyali Serial Song: 3 ಕೋಟಿ ಬಾರಿ ವೀಕ್ಷಣೆ ಕಂಡ ‘ಜೊತೆ ಜೊತೆಯಲಿ’ ಧಾರಾವಾಹಿ ಹಾಡು
Image
Jothe Jotheyali: ‘ಜೊತೆ ಜೊತೆಯಲಿ’ ಧಾರಾವಾಹಿ ನೋಡೋ ವೀಕ್ಷಕರಿಗೆ ನಟ ಅನಿರುದ್ಧ ವಿಶೇಷ ಮನವಿ
Image
ಮನೆಯಲ್ಲಿದ್ದರೂ ಸುಮ್ಮನೆ ಕೂತಿಲ್ಲ ‘ಜೊತೆ ಜೊತೆಯಲಿ’ ಅನಿರುದ್ಧ್​​; ಸಂಕಷ್ಟದ ಸಮಯದಲ್ಲಿ ಅಳಿಲು ಸೇವೆ
Image
ನಾವು ತುಂಬಾ ಕೆಟ್ಟ ಪರಿಸ್ಥಿತಿಯಲ್ಲಿದ್ದೇವೆ; ಕೊವಿಡ್​ನಿಂದ ಆಪ್ತನನ್ನು ಕಳೆದುಕೊಂಡು ಭಾವುಕರಾದ ನಟ ಅನಿರುದ್ಧ್​​

‘ನನಗೆ ವಾಹಿನಿ ಕಡೆಯಿಂದ ಅಥವಾ ನಿರ್ದೇಶಕರ ಕಡೆಯಿಂದ ಯಾವುದೇ ಮಾಹಿತಿ ಬಂದಿಲ್ಲ. ಅವರು ನೇರವಾಗಿ ಮಾತನಾಡಿದ ಬಳಿಕ ಸುದ್ದಿಗೋಷ್ಠಿ ಕರೆದು ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ’ ಎಂದು ಅನಿರುದ್ಧ್​ ಅವರು ‘ಟಿವಿ9 ಕನ್ನಡ’ ಡಿಜಿಟಲ್​ಗೆ ಪ್ರತಿಕ್ರಿಯೆ ನೀಡಿದ್ದಾರೆ. ಅನಿರುದ್ಧ್​ ಮಾಡುತ್ತಿರುವ ಆರ್ಯವರ್ಧನ್​ ಪಾತ್ರ ತುಂಬ ಫೇಮಸ್​ ಆಗಿದೆ. ಆ ಪಾತ್ರದಲ್ಲಿ ಬೇರೆ ನಟನನ್ನು ಕಲ್ಪಿಸಿಕೊಳ್ಳಲು ಪ್ರೇಕ್ಷಕರು ಸಿದ್ಧರಿಲ್ಲ. ಒಂದು ವೇಳೆ ಅನಿರುದ್ಧ್​ ಈ ಸೀರಿಯಲ್​ನಿಂದ ಹೊರನಡೆದರೆ ಮುಂದೇನು ಎಂಬ ಪ್ರಶ್ನೆ ಮೂಡಿದೆ.

ಡಿಫರೆಂಟ್​ ಆದ ಪ್ರೇಮಕಥೆಯನ್ನು ಒಳಗೊಂಡಿರುವ ‘ಜೊತೆ ಜೊತೆಯಲಿ’ ಸೀರಿಯಲ್​ನಲ್ಲಿ ಅನಿರುದ್ಧ್​ ಮತ್ತು ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಸದ್ಯಕ್ಕೆ ಒಂದಷ್ಟು ಎಪಿಸೋಡ್​ಗಳ ಚಿತ್ರೀಕರಣ ಆಗಿದೆ. ವಿವಾದ ಬಗೆಹರಿಯುವವರೆಗೆ ಆ ಸಂಚಿಕೆಗಳು ಪ್ರಸಾರ ಆಗುತ್ತವೆ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:58 am, Fri, 19 August 22

Follow Us
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ