AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಯೋತಿ ರೈಗೆ ‘ಬಿಗ್​ ಬಾಸ್​ ಕನ್ನಡ 11’ ಆಫರ್​; ನೇರವಾಗಿ ನಿರ್ಧಾರ ತಿಳಿಸಿದ ನಟಿ

ಒಂದಲ್ಲಾ ಒಂದು ಕಾರಣದಿಂದ ನಟಿ ಜ್ಯೋತಿ ರೈ ಅವರು ಸುದ್ದಿ ಆಗುತ್ತಿದ್ದಾರೆ. ಸೀರಿಯಲ್​ಗಳಲ್ಲಿ ಮಿಂಚಿರುವ ಅವರು ಸೋಶಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜ್ಯೋತಿ ರೈ ಅವರಿಗೆ ಆಫರ್​ ನೀಡಲಾಗಿದೆ. ಈ ಕುರಿತು ತಮ್ಮ ನಿರ್ಧಾರ ಏನೆಂಬುದನ್ನು ಅವರು ಬಹಿರಂಗಪಡಿಸಿದ್ದಾರೆ.

ಜ್ಯೋತಿ ರೈಗೆ ‘ಬಿಗ್​ ಬಾಸ್​ ಕನ್ನಡ 11’ ಆಫರ್​; ನೇರವಾಗಿ ನಿರ್ಧಾರ ತಿಳಿಸಿದ ನಟಿ
ಜ್ಯೋತಿ ರೈ
ಮದನ್​ ಕುಮಾರ್​
|

Updated on: Aug 08, 2024 | 4:13 PM

Share

ರಿಯಲ್​ ಲೈಫ್​ನಲ್ಲಿ ಏನಾದರೂ ವಿವಾದ ಮಾಡಿಕೊಂಡವರಿಗೆ ಬಿಗ್​ ಬಾಸ್​ ಶೋನಲ್ಲಿ ಆಫರ್​ ಸುಲಭವಾಗಿ ಸಿಗುತ್ತದೆ. ಈ ವರ್ಷ ಹೊಸ ಸೀಸನ್​ಗೆ ಸಿದ್ಧತೆ ನಡೆಯುತ್ತಿದೆ. ಈವರೆಗೂ ಕನ್ನಡದಲ್ಲಿ 10 ಸೀಸನ್​ಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. 11ನೇ ಸೀಸನ್​ನಲ್ಲಿ ಯಾರೆಲ್ಲ ಭಾಗವಹಿಸಲಿದ್ದಾರೆ ಎಂಬ ಬಗ್ಗೆ ಕೌತುಕ ಮನೆ ಮಾಡಿದೆ. ಖ್ಯಾತ ನಟಿ ಜ್ಯೋತಿ ರೈ ಅವರಿಗೆ ಈ ಬಾರಿ ಬಿಗ್​ ಬಾಸ್​ ಕಾರ್ಯಕ್ರಮದ ಆಫರ್​ ನೀಡಲಾಗಿದೆ. ಆದರೆ ಅವರು ಈ ಅವಕಾಶವನ್ನು ಒಪ್ಪಿಕೊಂಡಿಲ್ಲ! ಹೌದು, ಈ ವಿಚಾರವನ್ನು ಸ್ವತಃ ಜ್ಯೋತಿ ರೈ ಅವರು ಹಂಚಿಕೊಂಡಿದ್ದಾರೆ.

ಕಿರುತೆರೆಯ ಸೀರಿಯಲ್​ಗಳನ್ನು ನಟಿಸಿ ಜ್ಯೋತಿ ರೈ ಅವರು ಸಖತ್​ ಫೇಮಸ್​ ಆಗಿದ್ದಾರೆ. ಈ ಮೊದಲಿನ ಬಿಗ್​ ಬಾಸ್​ ಸೀಸನ್​ಗಳಲ್ಲಿ ಕಿರುತೆರೆಯ ಅನೇಕ ಸೆಲೆಬ್ರಿಟಿಗಳಿಗೆ ಅವಕಾಶ ಸಿಕ್ಕಿತ್ತು. ಈ ಬಾರಿಗೂ ಸಿನಿಮಾ, ಸೀರಿಯಲ್​, ಸೋಶಿಯಲ್​ ಮೀಡಿಯಾದಲ್ಲಿ ಜನಪ್ರಿಯತೆ ಇರುವವರಿಗೆ ಮಣೆ ಹಾಕಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ಜ್ಯೋತಿ ರೈ ಅವರಿಗೂ ಆಫರ್​ ನೀಡಲಾಗಿತ್ತು ಎಂಬ ಮಾಹಿತಿ ಈಗ ಬಹಿರಂಗ ಆಗಿದೆ.

ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ನಟಿ ಜ್ಯೋತಿ ರೈ ಅವರು ಈ ಬಗ್ಗೆ ಬರೆದುಕೊಂಡಿದ್ದಾರೆ. ‘ನಾನು ಕನ್ನಡ ಬಿಗ್​ ಬಾಸ್​ ಶೋನಲ್ಲಿ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಅನೇಕರು ವಿಚಾರಿಸುತ್ತಿದ್ದಾರೆ. ನನಗೆ ಬಿಗ್​ ಬಾಸ್​ ತಂಡದಿಂದ ಆಫರ್​ ಬಂದಾಗ ನಾನು ಅದನ್ನು ಗೌರವದಿಂದ ತಿರಸ್ಕರಿಸಿದೆ. ಈ ಮೊದಲೇ ಒಪ್ಪಿಕೊಂಡ ಕೆಲಸಗಳ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಂಡೆ. ಅವಕಾಶಕ್ಕಾಗಿ ಹಾಗೂ ನನ್ನ ಅಭಿಮಾನಿಗಳ ಬೆಂಬಲಕ್ಕೆ ನಾನು ಚಿರಋಣಿ’ ಎಂದು ಜ್ಯೋತಿ ರೈ ಅವರು ಬರೆದುಕೊಂಡಿದ್ದಾರೆ.

ಒಂದಷ್ಟು ದಿನಗಳ ಹಿಂದೆ ಜ್ಯೋತಿ ರೈ ಅವರದ್ದು ಎನ್ನಲಾದ ಕೆಲವು ವಿಡಿಯೋಗಳು ವೈರಲ್​ ಆಗಿದ್ದವು. ಆದರೆ ಅವು ತಮ್ಮ ವಿಡಿಯೋ ಅಲ್ಲ ಎಂದು ಜ್ಯೋತಿ ಅವರು ಸ್ಪಷ್ಟನೆ ನೀಡಿದರು ಹಾಗೂ ಮಾನಹಾನಿಗೆ ಯತ್ನಿಸಿದವರ ವಿರುದ್ಧ ಕ್ರಮ ಕೈಕೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದರು. ಸದ್ಯಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಜ್ಯೋತಿ ರೈ ಅವರು ತುಂಬ ಆ್ಯಕ್ಟೀವ್​ ಆಗಿದ್ದಾರೆ. ಅನೇಕ ಬಗೆಯ ಫೋಟೋಗಳನ್ನು ಹಂಚಿಕೊಂಡು ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ.

ಇದನ್ನೂ ಓದಿ: ರೆಡ್​ ಡ್ರೆಸ್​ನಲ್ಲಿ ನಟಿ ಜ್ಯೋತಿ ರೈ ಸೌಂದರ್ಯಕ್ಕೆ ಮನಸೋತ ಅಭಿಮಾನಿಗಳು

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಯಾವಾಗ ಪ್ರಾರಂಭ ಆಗಲಿದೆ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ನಿರೂಪಕರ ಬದಲಾವಣೆ ಆಗುವ ಸಾಧ್ಯತೆ ಇದೆ ಎಂಬ ಮಾತು ಕೂಡ ಆಗಾಗ ಕೇಳಿಬರುತ್ತಲೇ ಇದೆ. ವಾಹಿನಿ ಕಡೆಯಿಂದಲೇ ಈ ಬಗ್ಗೆ ಸ್ಪಷ್ಟನೆ ಸಿಗಲಿ ಎಂದು ವೀಕ್ಷಕರು ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!