‘ಕಾಟೇರ’ ಸಿನಿಮಾ ರಿಲೀಸ್ ಆಗಿ 100 ದಿನ; ಟಿವಿಯಲ್ಲಿ ಬರ್ತಿದೆ ದರ್ಶನ್ ಸಿನಿಮಾ

ಯುಗಾದಿ ವಾರದ ದಿನ ಬಂದಿದೆ. ಅಂದು ಎಂದಿನಂತೆ ಧಾರಾವಾಹಿಗಳು ಪ್ರಸಾರ ಕಾಣುತ್ತವೆ. ಹೀಗಾಗಿ ಎರಡು ದಿನ ಮೊದಲು ಅಂದರೆ ಭಾನುವಾರ (ಏಪ್ರಿಲ್ 7) ‘ಕಾಟೇರ’ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ.

‘ಕಾಟೇರ’ ಸಿನಿಮಾ ರಿಲೀಸ್ ಆಗಿ 100 ದಿನ; ಟಿವಿಯಲ್ಲಿ ಬರ್ತಿದೆ ದರ್ಶನ್ ಸಿನಿಮಾ
ದರ್ಶನ್
Follow us
|

Updated on: Apr 06, 2024 | 3:57 PM

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Katera Movie) ಡಿಸೆಂಬರ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಸಿನಿಮಾ ಹುಸಿ ಮಾಡಲೇ ಇಲ್ಲ. ‘ಕಾಟೇರ’ ಚಿತ್ರದ ಗೆಲುವನ್ನು ಫ್ಯಾನ್ಸ್ ಸಂಭ್ರಮಿಸಿದ್ದಾರೆ. ಕನ್ನಡ ಚಿತ್ರರಂಗ ಒಂದರಲ್ಲೇ ಈ ಚಿತ್ರ ಸುಮಾರು 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ಹೆಮ್ಮೆಯ ವಿಚಾರ. ಈ ಸಿನಿಮಾ ರಿಲೀಸ್ ಆಗಿ ಇಂದಿಗೆ (ಏಪ್ರಿಲ್ 6) 100 ದಿನ ಆಗಿದೆ. ಈಗ ದರ್ಶನ್ ಅವರ ಈ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ.

ಮಂಗಳವಾರ (ಏಪ್ರಿಲ್ 9) ಯುಗಾದಿ. ಹಿಂದೂಗಳ ಪಾಲಿಗೆ ಇದು ಹೊಸ ವರ್ಷ. ಈ ಸಂದರ್ಭದಲ್ಲಿ ಕಿರುತೆರೆಯಲ್ಲಿ ಹೊಸ ಸಿನಿಮಾಗಳನ್ನು ಪ್ರಸಾರ ಮಾಡೋದು ವಾಡಿಕೆ. ಯುಗಾದಿ ವಾರದ ದಿನ ಬಂದಿದೆ. ಅಂದು ಎಂದಿನಂತೆ ಧಾರಾವಾಹಿಗಳು ಪ್ರಸಾರ ಕಾಣುತ್ತವೆ. ಹೀಗಾಗಿ ಎರಡು ದಿನ ಮೊದಲು ಅಂದರೆ ಭಾನುವಾರ (ಏಪ್ರಿಲ್ 7) ‘ಕಾಟೇರ’ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ.

View this post on Instagram

A post shared by Zee Kannada (@zeekannada)

‘2023ರ ಮೆಗಾ ಬ್ಲಾಕ್ ಬಸ್ಟರ್, ಅದ್ದೂರಿ ಡೈಲಾಗ್‌ಗಳ ಜಬರ್ದಸ್ತ್ ಪಿಚ್ಚರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ’ ಸಿನಿಮಾ ಏಪ್ರಿಲ್ 7ರ ಸಂಜೆ 7:00ಕ್ಕೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ’ ಎಂದು ವಾಹಿನಿಯವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ: ಇದೇನಿದು ಅಚ್ಚರಿ, ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

‘ಕಾಟೇರ’ ಸಿನಿಮಾದಲ್ಲಿ ದರ್ಶನ್, ಆರಾಧನಾ ರಾಮ್, ಕುಮಾರ್ ಗೋವಿಂದ್, ವೈಜನಾಥ್ ಬೀರಾದಾರ್,  ಜಗಪತಿ ಬಾಬು ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ತರುಣ್ ಸುಧೀರ್ ಅವರು ನಿರ್ದೇಶನ ಮಾಡಿದ್ದಾರೆ. ರಾಕ್​ಲೈನ್ ವೆಂಕಟೇಶ್ ನಿರ್ಮಾಣದ ಈ ಸಿನಿಮಾ ಮೆಚ್ಚುಗೆ ಪಡೆದಿದೆ. ಬುಕ್ ಮೈ ಶೋನಲ್ಲಿ 60 ಸಾವಿರ ಜನ ರೇಟಿಂಗ್ ನೀಡಿದ್ದು, 9.2 ರೇಟಿಂಗ್ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ