AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಟೇರ’ ಸಿನಿಮಾ ರಿಲೀಸ್ ಆಗಿ 100 ದಿನ; ಟಿವಿಯಲ್ಲಿ ಬರ್ತಿದೆ ದರ್ಶನ್ ಸಿನಿಮಾ

ಯುಗಾದಿ ವಾರದ ದಿನ ಬಂದಿದೆ. ಅಂದು ಎಂದಿನಂತೆ ಧಾರಾವಾಹಿಗಳು ಪ್ರಸಾರ ಕಾಣುತ್ತವೆ. ಹೀಗಾಗಿ ಎರಡು ದಿನ ಮೊದಲು ಅಂದರೆ ಭಾನುವಾರ (ಏಪ್ರಿಲ್ 7) ‘ಕಾಟೇರ’ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ.

‘ಕಾಟೇರ’ ಸಿನಿಮಾ ರಿಲೀಸ್ ಆಗಿ 100 ದಿನ; ಟಿವಿಯಲ್ಲಿ ಬರ್ತಿದೆ ದರ್ಶನ್ ಸಿನಿಮಾ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: Apr 06, 2024 | 3:57 PM

Share

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ (Katera Movie) ಡಿಸೆಂಬರ್ 29ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಸಿನಿಮಾ ಹುಸಿ ಮಾಡಲೇ ಇಲ್ಲ. ‘ಕಾಟೇರ’ ಚಿತ್ರದ ಗೆಲುವನ್ನು ಫ್ಯಾನ್ಸ್ ಸಂಭ್ರಮಿಸಿದ್ದಾರೆ. ಕನ್ನಡ ಚಿತ್ರರಂಗ ಒಂದರಲ್ಲೇ ಈ ಚಿತ್ರ ಸುಮಾರು 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ಹೆಮ್ಮೆಯ ವಿಚಾರ. ಈ ಸಿನಿಮಾ ರಿಲೀಸ್ ಆಗಿ ಇಂದಿಗೆ (ಏಪ್ರಿಲ್ 6) 100 ದಿನ ಆಗಿದೆ. ಈಗ ದರ್ಶನ್ ಅವರ ಈ ಸಿನಿಮಾ ಟಿವಿಯಲ್ಲಿ ಪ್ರಸಾರ ಕಾಣೋಕೆ ರೆಡಿ ಆಗಿದೆ.

ಮಂಗಳವಾರ (ಏಪ್ರಿಲ್ 9) ಯುಗಾದಿ. ಹಿಂದೂಗಳ ಪಾಲಿಗೆ ಇದು ಹೊಸ ವರ್ಷ. ಈ ಸಂದರ್ಭದಲ್ಲಿ ಕಿರುತೆರೆಯಲ್ಲಿ ಹೊಸ ಸಿನಿಮಾಗಳನ್ನು ಪ್ರಸಾರ ಮಾಡೋದು ವಾಡಿಕೆ. ಯುಗಾದಿ ವಾರದ ದಿನ ಬಂದಿದೆ. ಅಂದು ಎಂದಿನಂತೆ ಧಾರಾವಾಹಿಗಳು ಪ್ರಸಾರ ಕಾಣುತ್ತವೆ. ಹೀಗಾಗಿ ಎರಡು ದಿನ ಮೊದಲು ಅಂದರೆ ಭಾನುವಾರ (ಏಪ್ರಿಲ್ 7) ‘ಕಾಟೇರ’ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣಲಿದೆ.

View this post on Instagram

A post shared by Zee Kannada (@zeekannada)

‘2023ರ ಮೆಗಾ ಬ್ಲಾಕ್ ಬಸ್ಟರ್, ಅದ್ದೂರಿ ಡೈಲಾಗ್‌ಗಳ ಜಬರ್ದಸ್ತ್ ಪಿಚ್ಚರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ’ ಸಿನಿಮಾ ಏಪ್ರಿಲ್ 7ರ ಸಂಜೆ 7:00ಕ್ಕೆ ನಿಮ್ಮ ಜೀ ಕನ್ನಡ ವಾಹಿನಿಯಲ್ಲಿ’ ಎಂದು ವಾಹಿನಿಯವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಸಖತ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ: ಇದೇನಿದು ಅಚ್ಚರಿ, ಕಿರುತೆರೆಗೆ ಕಾಲಿಟ್ಟ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್

‘ಕಾಟೇರ’ ಸಿನಿಮಾದಲ್ಲಿ ದರ್ಶನ್, ಆರಾಧನಾ ರಾಮ್, ಕುಮಾರ್ ಗೋವಿಂದ್, ವೈಜನಾಥ್ ಬೀರಾದಾರ್,  ಜಗಪತಿ ಬಾಬು ಮೊದಲಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ತರುಣ್ ಸುಧೀರ್ ಅವರು ನಿರ್ದೇಶನ ಮಾಡಿದ್ದಾರೆ. ರಾಕ್​ಲೈನ್ ವೆಂಕಟೇಶ್ ನಿರ್ಮಾಣದ ಈ ಸಿನಿಮಾ ಮೆಚ್ಚುಗೆ ಪಡೆದಿದೆ. ಬುಕ್ ಮೈ ಶೋನಲ್ಲಿ 60 ಸಾವಿರ ಜನ ರೇಟಿಂಗ್ ನೀಡಿದ್ದು, 9.2 ರೇಟಿಂಗ್ ಪಡೆದುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!