AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ನಿರೂಪಣೆ ಮಾಡಲ್ಲ’: ಗಟ್ಟಿ ನಿರ್ಧಾರ ತೆಗೆದುಕೊಂಡ ನಟ ಕಮಲ್​ ಹಾಸನ್​

ಬಿಗ್​ ಬಾಸ್​ ನಡೆಸಿಕೊಡುವ ವಾಹಿನಿಗೆ, ತಂತ್ರಜ್ಞರಿಗೆ, ಸ್ಪರ್ಧಿಗಳಿಗೆ ಹಾಗೂ ಪ್ರೇಕ್ಷಕರಿಗೆ ಧನ್ಯವಾದ ತಿಳಿಸುವ ಮೂಲಕ ನಟ ಕಮಲ್​ ಹಾಸನ್​ ಅವರು ನಿರೂಪಕನ ಸ್ಥಾನದಿಂದ ಕೆಳಗೆ ಇಳಿದಿದ್ದಾರೆ. ಅವರು ಈ ನಿರ್ಧಾರ ತೆಗೆದುಕೊಂಡಿದ್ದರಿಂದ ಅಭಿಮಾನಿಗಳಿಗೆ ಬೇಸರ ಆಗಿದೆ. ‘ಬಿಗ್​ ಬಾಸ್​ ತಮಿಳು’ ಹೊಸ ಸೀಸನ್​ನಲ್ಲಿ ಯಾರು ನಿರೂಪಣೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು.

‘ಬಿಗ್​ ಬಾಸ್​ ನಿರೂಪಣೆ ಮಾಡಲ್ಲ’: ಗಟ್ಟಿ ನಿರ್ಧಾರ ತೆಗೆದುಕೊಂಡ ನಟ ಕಮಲ್​ ಹಾಸನ್​
ಕಮಲ್​ ಹಾಸನ್​
ಮದನ್​ ಕುಮಾರ್​
|

Updated on: Aug 06, 2024 | 7:04 PM

Share

ನಟ ಕಮಲ್​ ಹಾಸನ್ ಅವರು ಕಳೆದ 7 ವರ್ಷಗಳಿಂದ ‘ಬಿಗ್​ ಬಾಸ್​ ತಮಿಳು’ ರಿಯಾಲಿಟಿ ಶೋ ನಿರೂಪಣೆ ಮಾಡುತ್ತಾ ಬಂದಿದ್ದರು. ಅವರ ನಿರೂಪಣೆಯ ಶೈಲಿಗೆ ಫ್ಯಾನ್ಸ್​ ಫಿದಾ ಆಗಿದ್ದರು. ಹೊಸ ಸೀಸನ್​ಗೂ ಅವರೇ ನಿರೂಪಣೆ ಮಾಡಲಿ ಎಂಬುದು ಅಭಿಮಾನಿಗಳ ಬಯಕೆ ಆಗಿತ್ತು. ಆದರೆ ಕಮಲ್​ ಹಾಸನ್​ ಅವರು ಈಗ ಒಂದು ಬ್ಯಾಡ್​ ನ್ಯೂಸ್​ ನೀಡಿದ್ದಾರೆ. ಈ ಬಾರಿ ತಾವು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡುವುದಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ತಮ್ಮ ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಕೂಡ ಕಮಲ್​ ಹಾಸನ್​ ವಿವರಿಸಿದ್ದಾರೆ.

ಬಿಗ್​ ಬಾಸ್​ ನಿರೂಪಕರ ಬದಲಾವಣೆ ಕುರಿತು ಅಂತೆ-ಕಂತೆಗಳು ಕೇಳಿಬರುವುದು ಸಹಜ. ಆದರೆ ಈಗ ಕಮಲ್​ ಹಾಸನ್​ ಬಗ್ಗೆ ಕೇಳಿಬಂದಿರುವ ವಿಷಯ ಗಾಸಿಪ್​ ಅಲ್ಲ. ಸ್ವತಃ ಕಮಲ್​ ಹಾಸನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡುವ ಮೂಲಕ ಈ ವಿಷಯ ತಿಳಿಸಿದ್ದಾರೆ. ಅಭಿಮಾನಿಗಳನ್ನು ಉದ್ದೇಶಿಸಿ ಅವರು ಪತ್ರ ಬರೆದಿದ್ದಾರೆ. ‘7 ವರ್ಷಗಳ ಹಿಂದೆ ಶುರುವಾದ ನಮ್ಮ ಬಿಗ್​ ಬಾಸ್​ ಪಯಣಕ್ಕೆ ಬ್ರೇಕ್​ ನೀಡಲು ನಿರ್ಧರಿಸಿದ್ದೇನೆ ಎಂದು ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇನೆ. ಈ ಮೊದಲೇ ಒಪ್ಪಿಕೊಂಡ ಸಿನಿಮಾಗಳ ಕೆಲಸದ ಕಾರಣದಿಂದ ನನಗೆ ಈ ಬಾರಿಯ ಬಿಗ್​ ಬಾಸ್​ ಶೋ ನಿರೂಪಣೆ ಮಾಡಲು ಸಾಧ್ಯವಾಗುತ್ತಿಲ್ಲ’ ಎಂದು ಕಮಲ್​ ಹಾಸನ್​ ಹೇಳಿದ್ದಾರೆ.

ಇದನ್ನೂ ಓದಿ: ‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ

‘ನಿಮ್ಮ ಮನೆಗಳನ್ನು ತಲುಪುವ ಅವಕಾಶ ನನಗೆ ಸಿಕ್ಕಿತ್ತು. ನೀವು ನನಗೆ ಪ್ರೀತಿ ನೀಡಿದ್ದೀರಿ. ಅದಕ್ಕಾಗಿ ನಾನು ಚಿರಋಣಿ. ನಿಮ್ಮ ಬೆಂಬಲದಿಂದಾಗಿ ಬಿಗ್​ ಬಾಸ್​ ತಮಿಳು ರಿಯಾಲಿಟಿ ಶೋ ನನ್ನ ಪಾಲಿನ ಬೆಸ್ಟ್​ ಶೋ ಆಯಿತು. ಕಲಿಕೆಯ ಅನುಭವ ನೀಡಿದ ಈ ಕಾರ್ಯಕ್ರಮಕ್ಕಾಗಿ ನಾನು ಋಣಿ ಆಗಿದ್ದೇನೆ. ನಿಮ್ಮೆಲ್ಲರಿಗೆ ಹಾಗೂ ಸ್ಪರ್ಧಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ’ ಎಂದು ಪತ್ರದಲ್ಲಿ ಬರೆದಿದ್ದಾರೆ ಕಮಲ್​ ಹಾಸನ್​. ಹೊಸ ಸೀಸನ್​ಗೆ ಯಾರು ನಿರೂಪಣೆ ಮಾಡುತ್ತಾರೆ ಎಂಬ ಮಾಹಿತಿಯನ್ನು ವಾಹಿನಿಯವರು ಇನ್ನಷ್ಟೇ ನೀಡಬೇಕಿದೆ.

View this post on Instagram

A post shared by Kamal Haasan (@ikamalhaasan)

ಕನ್ನಡದಲ್ಲಿ ಕಿಚ್ಚ ಸುದೀಪ್​ ಅವರು ಮೊದಲ ಸೀಸನ್​ನಿಂದ ಇಲ್ಲಿಯ ತನಕ ಎಲ್ಲ ಆವೃತ್ತಿಗಳನ್ನು ನಡೆಸಿಕೊಟ್ಟಿದ್ದಾರೆ. ಹಿಂದಿಯಲ್ಲಿ ಸಲ್ಮಾನ್​ ಖಾನ್​, ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ, ಮಲಯಾಳಂನಲ್ಲಿ ಮೋಹನ್​ಲಾಲ್​ ಅವರು ಬಿಗ್ ಬಾಸ್​ ಕಾರ್ಯಕ್ರಮ ನಡೆಸಿಕೊಡುವ ಮೂಲಕ ಜನರಿಗೆ ಹತ್ತಿರ ಆಗಿದ್ದಾರೆ. ಕರಣ್​ ಜೋಹರ್​ ಅವರು ಹಿಂದಿ ಬಿಗ್​ ಬಾಸ್​ ಒಟಿಟಿ ಶೋ ನಡೆಸಿಕೊಟ್ಟರು. ಈ ವರ್ಷ ಒಟಿಟಿ ಶೋಗೆ ನಿರೂಪಣೆ ಮಾಡಿದ್ದ ಅನಿಲ್​ ಕಪೂರ್​ ಅವರು ಸಿಕ್ಕಾಪಟ್ಟೆ ಟ್ರೋಲ್​ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ