AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Edited By: |

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ