AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Edited By: |

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ