AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Edited By: |

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ