AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Edited By: |

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?