AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Updated By: ಮದನ್​ ಕುಮಾರ್​|

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ