AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಯಾರೊಂದಿಗೂ ಓಡಿ ಹೋಗಿಲ್ಲ, ಶ್ರೀಧರ್ ನಾಯಕ್​ಗೆ ಏಡ್ಸ್ ಬಂದಿತ್ತು’; ಪತ್ನಿ ಜ್ಯೋತಿ ನೇರ ಮಾತು

ಶ್ರೀಧರ್ ನಾಯಕ್ ಅವರ ನಿಧನದ ಬಳಿಕ ಅವರ ಪತ್ನಿ ಜ್ಯೋತಿ ಅವರ ಹಳೆಯ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಅವರು ಶ್ರೀಧರ್ ಅವರಿಗೆ ಏಡ್ಸ್ ಮತ್ತು ಕ್ಯಾನ್ಸರ್ ಇತ್ತು ಎಂದು ಹೇಳಿದ್ದಾರೆ. ಅವರ ಮದುವೆಯ ಜೀವನದಲ್ಲಿನ ಸಮಸ್ಯೆಗಳು ಮತ್ತು ಶ್ರೀಧರ್ ಅವರ ವರ್ತನೆಯ ಬಗ್ಗೆಯೂ ಮಾತನಾಡಿದ್ದಾರೆ. ತಾವು ಯಾರೊಂದಿಗೂ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನು ಯಾರೊಂದಿಗೂ ಓಡಿ ಹೋಗಿಲ್ಲ, ಶ್ರೀಧರ್ ನಾಯಕ್​ಗೆ ಏಡ್ಸ್ ಬಂದಿತ್ತು’; ಪತ್ನಿ ಜ್ಯೋತಿ ನೇರ ಮಾತು
ಶ್ರೀಧರ್ ನಾಯಕ್
ರಾಜೇಶ್ ದುಗ್ಗುಮನೆ
|

Updated on:May 27, 2025 | 12:38 PM

Share

ಶ್ರೀಧರ್ ನಾಯಕ್ (Shridhar Naik) ಅವರು ನಿಧನ ಹೊಂದಿದ್ದಾರೆ. ಅವರ ಸಾವಿನ ವಿಚಾರ ಸಾಕಷ್ಟು ದುಃಖ ಮೂಡಿಸಿದೆ. ಅವರ ನಿಧನದಿಂದ ಕಿರುತೆರೆ ಲೋಕದಲ್ಲಿ ಸೂತಕದ ಛಾಯೆ ಮೂಡಿದೆ. ಕಲಾವಿದನಾಗಿ, ನಟನಾ ತರಬೇತುದಾರನಾಗಿ ಶ್ರೀಧರ್ ಇಷ್ಟ ಆಗಿದ್ದರು. ಆದರೆ, ಅವರ ಕುಟುಂಬದಲ್ಲಿ ಸಾಕಷ್ಟು ಒಡಕು ಇತ್ತು. ಈ ಬಗ್ಗೆ ಶ್ರೀಧರ್ ಪತ್ನಿಯದ್ದು ಎನ್ನಲಾದ ಹಳೆಯ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ಅವರು ಪತಿಗೆ ಏಡ್ಸ್ ಇತ್ತು ಎಂಬುದನ್ನು ರಿವೀಲ್ ಮಾಡಿದ್ದರು.

ಜ್ಯೋತಿ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಮೊದಲು ಶ್ರೀಧರ್ ಪತ್ನಿ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಜ್ಯೋತಿ ಈ ಆಡಿಯೋ ಹರಿಬಿಟ್ಟಿದ್ದರು ಎನ್ನಲಾಗಿದೆ. ‘ನಾನು ಸಿಂಗರ್ ಆಗಬೇಕು ಎಂದು ಬಂದವಳು. ನನಗೆ ಯಾರ ಮೇಲೂ ಅಟ್ರ್ಯಾಕ್ಷನ್ ಇರಲಿಲ್ಲ. ಈ ವೇಳೆ ಶ್ರೀಧರ್ ಪರಿಚಯ ಆಯ್ತು. ಆ ಬಳಿಕ ಗೆಳೆತನ ಮೂಡಿತು. ಆ ಬಳಿಕ ಪ್ರೀತಿ ಬೆಳೆಯಿತು. ಶ್ರೀಧರ್ ಪ್ರಪೋಸ್ ಮಾಡಿದ. ಮನೆಯಲ್ಲಿ ಬಂದು ಮಾತನಾಡಿದ. ಆದರೆ, ಜಾತಕ ಕೂಡಲಿಲ್ಲ. ಹೀಗಾಗಿ ಯಾರೂ ಮದುವೆಗೆ ಒಪ್ಪಲೇ ಇಲ್ಲ. ನಾನು ಇಷ್ಟಪಟ್ಟಿದ್ದೆ. ಹೀಗಾಗಿ ನಾವು ಮದುವೆ ಆದೆವು’ ಎಂದು ಮಾತು ಆರಂಭಿಸಿದ್ದಾರೆ.

‘ಒಂದೇ ತಿಂಗಳಿಗೆ ಶ್ರೀಧರ್ ಬದಲಾದ. ರಿಸ್ಟ್ರಿಕ್ಷನ್ ಹಾಕಲು ಆರಂಭಿಸಿದ. ಇದೆಲ್ಲವೂ ಅಬ್​ನಾರ್ಮಲ್ ಆಗಿತ್ತು. 11 ವರ್ಷಗಳ ಹಿಂದಿನ ಮಾತನ್ನು ಈಗ ಹೇಳಲು ಸಾಧ್ಯವಿಲ್ಲ. ಅವನು ನನ್ನನ್ನು ಪ್ರೀತಿಸುತ್ತಾನೆ ಎಂದುಕೊಂಡೆ. ಆದರೆ, ಪ್ರೀತಿಸಿಲ್ಲ. ಇದನ್ನು ಅವನೇ ಒಂದು ದಿನ ಹೇಳಿದ್ದ. ಹೀಗೆಲ್ಲ ಆಯ್ತಾ ಎಂದು ಹೇಳಿದರೆ ಯಾರೂ ನಂಬಲ್ಲ. ಅವನು ಸಾಕಷ್ಟು ಬಾರಿ ಹೊಡೆದಿದ್ದಾನೆ. ಆದರೆ, ನಾನು ಇದನ್ನು ಎಲ್ಲಿಯೂ ಹೇಳಿಕೊಂಡಿಲ್ಲ’ ಎಂದಿದ್ದಾರೆ ಜ್ಯೋತಿ.

ಇದನ್ನೂ ಓದಿ
Image
‘ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತೇನೆ’; ಅನುಶ್ರೀಗೆ ನೇರವಾಗಿ ಹೇಳಿದ ಮನೋಜ್
Image
ಸುರದ್ರೂಪಿ ಶ್ರೀಧರ್ ಕೊನೆಯ ದಿನಗಳು ಹೀಗಿದ್ದವು; ವೈರಿಗಳಿಗೂ ಹೀಗಾಗಬಾರದು
Image
‘ಪಾರು’ ಖ್ಯಾತಿಯ ನಟ ಶ್ರೀಧರ್ ನಾಯಕ್ ನಿಧನ; ಫಲಿಸಲಿಲ್ಲ ಪ್ರಾರ್ಥನೆ
Image
‘ದೃಶ್ಯಂ’ ರೀತಿಯ ಈ ಸಿನಿಮಾ ಒಟಿಟಿಯಲ್ಲಿ; ಕನ್ನಡದಲ್ಲೂ ವೀಕ್ಷಣೆ ಲಭ್ಯ

ಜ್ಯೋತಿ ಅವರದ್ದ ಎನ್ನಲಾದ ಆಡಿಯೋ

‘ನಾನು ಯಾರ ಜೊತೆಯೂ ಓಡಿ ಹೋಗಿಲ್ಲ. ನಾನು ಹಾಗೂ ಮಗ ಇಬ್ಬರೇ ಜೀವನ ಮಾಡುತ್ತಿದ್ದೇವೆ. ಒಬ್ಬರ ಜೀವನದಲ್ಲಿ ಇಷ್ಟು ದೊಡ್ಡ ಟ್ರ್ಯಾಜಿಡಿ ನಡೆಯುತ್ತದೆ ಎಂದು ನಾನು ಊಹಿಸಿರಲಿಲ್ಲ. ಆದರೆ, ನಡೆದಿದೆ. ನಾನು ಅವರ ಕ್ಯಾರೆಕ್ಟರ್ ಮೇಲೆ ಎಂದಿಗೂ ಅನುಮಾನ ಪಟ್ಟಿಲ್ಲ. ಅವನಿಗೆ ಎಚ್​ಐವಿ ಬಂದಿದೆ. ಅಲ್ಲದೆ, ಕ್ಯಾನ್ಸರ್ ಕೂಡ ಬಂದಿದೆ’ ಎಂಬ ಮಾತನ್ನು ಅವರು ಆಡಿಯೋದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಸುರದ್ರೂಪಿ ಶ್ರೀಧರ್ ಕೊನೆಯ ದಿನಗಳು ಹೇಗಿದ್ದವು ನೋಡಿ; ವೈರಿಗಳಿಗೂ ಹೀಗಾಗಬಾರದು

‘ತುಂಬಾ ವೈದ್ಯರ ಬಳಿ ಕೇಳಿದ್ದೆ. ಅದಕ್ಕೆ ಏನಾದರೂ ಔಷಧ ಇದೆಯೇ? ಕ್ಯೂರ್ ಮಾಡಬಹುದೇ ಎಂದು ಕೇಳಿದ್ದೆ. ಆಗಲ್ಲ ಎಂದರು. ಅವನಿಗೆ ಸಿಕ್ಕಾಪಟ್ಟೆ ಅಹಂಕಾರ ಇತ್ತು. ದೇವರು ಕೊಟ್ಟ ಎಲ್ಲವನ್ನೂ ಕಳೆದುಕೊಂಡ. ಇದಕ್ಕೆ ಅವನೇ ಕಾರಣ. ನನ್ನ ಕಾರಣಕ್ಕೆ ಏಡ್ಸ್ ಬಂದಿಲ್ಲ’ ಎಂದಿದ್ದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:17 pm, Tue, 27 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು