AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಆತ್ಮಹತ್ಯೆ; ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು

ಸವಿ ಮಾದಪ್ಪ ಕೊಡಗು ಜಿಲ್ಲೆಯ ಕುಶಾಲನಗರ ಮೂಲದವರು. ‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದರು. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಆತ್ಮಹತ್ಯೆ; ಡೆತ್​ನೋಟ್​ ಬರೆದಿಟ್ಟು ನೇಣಿಗೆ ಶರಣು
ಸವಿ ಮಾದಪ್ಪ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 30, 2021 | 1:38 PM

Share

ಇತ್ತೀಚೆಗೆ ಸೆಲೆಬ್ರಿಟಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣ ಹೆಚ್ಚುತ್ತಿದೆ. ಬಾಲಿವುಡ್​ ಖ್ಯಾತ ನಟ ಸುಶಾಂತ್​ ಸಿಂಗ್​ ಸೇರಿ ಸಾಕಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗ ಸ್ಯಾಂಡಲ್​ವುಡ್​ ನಟಿ ಸವಿ ಮಾದಪ್ಪ ಅವರು ಈಗ ನೇಣಿಗೆ ಶರಣಾಗಿದ್ದಾರೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬೆಲೆ ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಸವಿ ಮಾದಪ್ಪ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬಾಯ್‌ಫ್ರೆಂಡ್‌ ವಿವೇಕ್ ಜತೆ ವಾಸವಿದ್ದರು. ಸವಿ ಮಾದಪ್ಪ ಊಟ ತರುವಂತೆ ಬಾಯ್‌ಫ್ರೆಂಡ್‌ಗೆ ಹೇಳಿದ್ದರು. ವಿವೇಕ್ ಊಟ ತರೋಕೆ ಹೊರಗೆ ಹೋಗಿದ್ದರು. ಈ ವೇಳೆ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸವಿ ಮಾದಪ್ಪ ಕೊಡಗು ಜಿಲ್ಲೆಯ ಕುಶಾಲನಗರ ಮೂಲದವರು. ‘ಚೌಕಟ್ಟು’, ‘ಫನ್’ ಸಿನಿಮಾದಲ್ಲಿ ನಟಿಸಿದ್ದರು. ಇತ್ತೀಚೆಗೆ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಒಂದನ್ನು ಹಾಕಿಕೊಂಡಿದ್ದರು. ‘ನಿಮ್ಮ ಜೀವನದ ಬಗ್ಗೆ ಹಾಗೂ ಗುರಿ ಬಗ್ಗೆ ಹೆಚ್ಚು ಫೋಕಸ್​ ಮಾಡಿದರೆ ನೀವು ನಿಮ್ಮ ಜೀವನದಲ್ಲಿ ಸಾಕಷ್ಟು ಜನರನ್ನು ಕಳೆದುಕೊಳ್ಳಬೇಕಾಗುತ್ತದೆ’ ಎಂದು ಅವರು ಬರೆದುಕೊಂಡಿದ್ದರು. ಇದಾದ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

2019ರಲ್ಲಿ ಚೌಕಟ್ಟು ಸಿನಿಮಾ ಸೆಟ್ಟೇರಿತ್ತು. ಇದು ಅವರ ಮೊದಲ ಸಿನಿಮಾ. ಈ ಬಗ್ಗೆ ಮಾತನಾಡಿದ್ದ ಅವರು, ‘ನಟಿಯಾಗಿ ನನಗೆ ಹಲವು ಕನಸುಗಳಿವೆ. ಸಿಕ್ಕ ಪಾತ್ರಗಳನ್ನು ಮಾಡುವುದಕ್ಕಿಂತ ಸವಾಲಿನ ಪಾತ್ರಗಳಲ್ಲಿ ಕಾಣಿಸಿಕೊಳ್ಳುವುದು ಇಷ್ಟ. ಚೌಕಟ್ಟು ಸಿನಿಮಾದಲ್ಲಿನನಗೆ ಅಂಥದ್ದೊಂದು ಪಾತ್ರ ಸಿಕ್ಕಿದೆ. ಇಂತಹ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ  ನೀಡುತ್ತಿರುವುದು ಸಹಜವಾಗಿಯೇ ಖುಷಿ ಆಗಿದೆ. ನನಗೆ ಸಿನಿಮಾಟೋಗ್ರಾಫಿಯಲ್ಲೂ ಕಾಣಿಸಿಕೊಳ್ಳುವ ಕನಸಿದೆ’ ಎಂದಿದ್ದರು ಅವರು. ಆದರೆ, ಅದೆಲ್ಲವೂ ಈಗ ನಾಶವಾಗಿದೆ.

ಇದನ್ನೂ ಓದಿ: ಕಲರ್ಸ್​ ಕನ್ನಡ ವಾಹಿನಿಯಲ್ಲಿ ಬರುತ್ತಿದೆ ಹೊಸ ಧಾರಾವಾಹಿ; ಎಷ್ಟು ಗಂಟೆಗೆ?

 

Published On - 1:28 pm, Thu, 30 September 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ