AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಸಾವಿಗೀಡಾದ ಕಿರುತೆರೆ ನಟಿ ಪವಿತ್ರ ಜಯರಾಂ

ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಇಂದು (ಮೇ 11) ಸಾವನ್ನಪ್ಪಿದ್ದಾರೆ. ಮಂಡ್ಯದವರಾಗಿದ್ದ ಪವಿತ್ರಾ, ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ ತೆಲುಗು ಪ್ರೇಕ್ಷಕರಿಗೂ ಹತ್ತಿರವಾಗಿದ್ದರು.

ಅಪಘಾತದಲ್ಲಿ ಸಾವಿಗೀಡಾದ ಕಿರುತೆರೆ ನಟಿ ಪವಿತ್ರ ಜಯರಾಂ
ಮಂಜುನಾಥ ಸಿ.
|

Updated on: May 12, 2024 | 12:41 PM

Share

ಕರ್ನಾಟಕ ಮೂಲದ ನಟಿ ಪವಿತ್ರಾ ಜಯರಾಂ (Pavitra Jayaram) ಕಾರು ಅಪಘಾತದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಸುಮಾರು 35 ವರ್ಷ ವಯಸ್ಸಾಗಿತ್ತು. ಕನ್ನಡದ ‘ರೋಬೋ ಫ್ಯಾಮಿಲಿ’ ಹಾಸ್ಯ ಧಾರಾವಾಹಿ ಮೂಲಕ ನಟನೆಗೆ ಎಂಟ್ರಿ ಕೊಟ್ಟಿದ್ದ ಪವಿತ್ರಾ ಜಯರಾಂ ಅದಾದ ಬಳಿಕ ಹಲವು ಧಾರಾವಾಹಿಗಳಲ್ಲಿ (Serial) ನಟಿಸಿದ್ದರು. ತೆಲುಗಿನ ಜನಪ್ರಿಯ ಧಾರಾವಾಹಿಯಲ್ಲಿಯೂ ಸಹ ಪವಿತ್ರಾ ನಟಿಸುತ್ತಿದ್ದರು. ಪವಿತ್ರಾ ಜಯರಂ ಕನ್ನಡ ಪ್ರೇಕ್ಷಕರಿಗೆ ಮಾತ್ರವಲ್ಲದೆ ತೆಲುಗು ಪ್ರೇಕ್ಷಕರಿಗೂ ಸಹ ಬಹಳ ಹತ್ತಿರವಾಗಿದ್ದರು.

ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಿಗ್ಗೆ ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಅಪಘಾತಕ್ಕೆ ಈಡಾಗಿದೆ. ಭೀಕರ ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪವಿತ್ರಾ ಜಯರಾಂ ಜೊತೆಗೆ ಕಾರಿನಲ್ಲಿ ಅವರ ಕುಟುಂಬಕ್ಕೆ ಸಂಬಂಧಿಸಿದವರು ಇದ್ದರು ಎನ್ನಲಾಗುತ್ತಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಹೊರಬರಬೇಕಿದೆ.

ಇದನ್ನೂ ಓದಿ:ಪ್ರೀ-ವೆಡ್ಡಿಂಗ್ ಫೋಟೋ ಶೂಟ್​​ನಲ್ಲಿ ಮಿಂಚಿದ ಕನ್ನಡದ ಕಿರುತೆರೆ ನಟಿ

ಮೂಲತಃ ಕನ್ನಡಿಗರಾದ ಪವಿತ್ರ, ತೆಲುಗಿನ ತ್ರಿನಯನಿ ಧಾರವಾಹಿಯ ಮೂಲಕ ತೆಲುಗು ರಾಜ್ಯಗಳಲ್ಲಿ ಬಹಳ ಜನಪ್ರಿಯರಾಗಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ‘ರೋಬೋ ಫ್ಯಾಮಿಲಿ’, ‘ಜೋಕಾಲಿ’, ‘ನೀಲಿ’, ‘ರಾಧಾರಮಣ’ ಇನ್ನೂ ಕೆಲವು ಧಾರಾವಾಹಿಗಳಲ್ಲಿ ಪವಿತ್ರಾ ನಟಿಸಿ ಜನಪ್ರಿಯರಾಗಿದ್ದರು. ಈಗ ತೆಲುಗಿನ ಜನಪ್ರಿಯ ತ್ರಿನಯನಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ