AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣ ಪದಕ್ಕೆ ಕಳಂಕ; ಈ ಸಂಬಂಧವನ್ನು ಬೇಕಾಬಿಟ್ಟಿ ಬಳಸಿದ ಬಿಗ್ ಬಾಸ್ ಸ್ಪರ್ಧಿಗಳು

ಬಿಗ್ ಬಾಸ್ ಮನೆಯಲ್ಲಿ 'ಅಣ್ಣ' ಪದದ ದುರುಪಯೋಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಶಿಕಾ ಸೂರಜ್ ಅವರನ್ನು 'ಅಣ್ಣ' ಎನ್ನುವುದು ಮತ್ತು ಕಾವ್ಯಾ ಗಿಲ್ಲಿಯನ್ನು ಅಣಕಿಸಲು ಈ ಪದ ಬಳಸುತ್ತಿರುವುದು ಈ ಪವಿತ್ರ ಸಂಬಂಧದ ಮಹತ್ವವನ್ನು ಕಡಿಮೆ ಮಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ವೀಕ್ಷಕರು ಸ್ಪರ್ಧಿಗಳ ಇಂತಹ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದು, ಪದದ ಬಳಕೆಯಲ್ಲಿ ಎಚ್ಚರಿಕೆ ಅಗತ್ಯ ಎಂದು ಒತ್ತಾಯಿಸಿದ್ದಾರೆ.

ಅಣ್ಣ ಪದಕ್ಕೆ ಕಳಂಕ; ಈ ಸಂಬಂಧವನ್ನು ಬೇಕಾಬಿಟ್ಟಿ ಬಳಸಿದ ಬಿಗ್ ಬಾಸ್ ಸ್ಪರ್ಧಿಗಳು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 18, 2025 | 12:55 PM

Share

‘ಅಣ್ಣ’ ಎಂಬ ಪದ ತುಂಬಾನೇ ದೊಡ್ಡದು. ಈ ಪದ ಸಾಕಷ್ಟು ಭಾವನೆಗಳನ್ನು ಹೊತ್ತಿರುತ್ತದೆ. ಆದರೆ, ಬಿಗ್ ಬಾಸ್ ಮನೆಯಲ್ಲಿ ಈ ಪದವನ್ನು ಬೇಕಾಬಿಟ್ಟಿ ಬಳಕೆ ಆಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಇದನ್ನು ಖಂಡಿಸಿದ್ದಾರೆ. ರಾಶಿಕಾ ಅವರು ಸೂರಜ್ ಜೊತೆ ಇಷ್ಟು ದಿನ ಆಪ್ತವಾಗಿದ್ದರು. ಈಗ ಅವರು ಸೂರಜ್​​ನ ಅಣ್ಣ ಎಂದಿದ್ದಾರೆ. ಕಾವ್ಯಾ (Kavya) ಕೂಡ ಮನಸ್ಸಿಗೆ ಬಂದಾಗ ಗಿಲ್ಲಿಯನ್ನು ಅಣ್ಣ ಎನ್ನುತ್ತಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ.

ರಾಶಿಕಾ ಹಾಗೂ ಸೂರಜ್ ಮಾತುಕತೆ

ರಾಶಿಕಾ ಹಾಗೂ ಸೂರಜ್ ಮಧ್ಯೆ ಆಪ್ತತೆ ಬೆಳೆದಿದೆ. ‘ನಾವಿಬ್ಬರೂ ಲವರ್ಸ್ ಅಲ್ಲ’ ಎಂದು ಅವರು ಅನೇಕ ಬಾರಿ ಸ್ಪಷ್ಟನೆ ಕೊಟ್ಟಿದೆ. ಆದರೆ, ಒಂದು ಬಾಂಧವ್ಯ ಅಂತೂ ಇದ್ದೇ ಇದೆ. ಈಗ ರಾಶಿಕಾ ಅವರು ಸೂರಜ್​ಗೆ ಅಣ್ಣ ಪದ ಬಳಕೆ ಮಾಡಿದ್ದಾರೆ.

‘ಆಗಲ್ಲ ಬ್ರೋ’ ಎಂದು ಸೂರಜ್​ನ ಕರೆದರು. ‘ಸೂರಜ್​ ಎಂದು ಕರೆಯುವುದಕ್ಕಿಂತ ಬ್ರೋನೇ ಚೆನ್ನಾಗಿ ಕಾಣುತ್ತದೆ. ಸೂರಜ್ ಅಣ್ಣ. ಇನ್ಮೇಲೆ ನಾನು ಹೀಗೆ ಕರೆಯೋದು’ ಎಂದು ಸೂರಜ್ ಅವರಿಗೆ ರಾಶಿಕಾ ಹೇಳಿದರು. ‘ನನ್ನ ಬಳಿ ಮಾತನಾಡಬೇಡ’ ಎಂದು ಸೂರಜ್ ಹೇಳಿದರು. ‘ನೀನ್ಯಾಕೆ ಅಷ್ಟೊಂದು ಉರಿದುಕೊಳ್ತೀಯಾ’ ಎಂದು ಸೂರಜ್ ಬಳಿ ರಾಶಿಕಾ ಕೇಳಿದ್ದಾರೆ.

ಇದನ್ನೂ ಓದಿ: ದಡ್ಡತನದಿಂದ ಅಪರೂಪದ ಅವಕಾಶ ಕಳೆದುಕೊಂಡ ರಾಶಿಕಾ ಶೆಟ್ಟಿ

ಗಿಲ್ಲಿ ಹಾಗೂ ಕಾವ್ಯಾ

ಗಿಲ್ಲಿ ಹಾಗೂ ಕಾವ್ಯಾ ಮಧ್ಯೆ ಕೂಡ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಇತ್ತೀಚೆಗೆ ಅದು ಹಾಳಾಗುತ್ತಿದೆ. ಕಾವ್ಯಾ ಅವರು ಗಿಲ್ಲಿಗೆ ಉರಿಸಬೇಕು ಎಂಬ ನಿರ್ಧಾರಕ್ಕೆ ಬಂದಾಗಲೆಲ್ಲ ‘ಅಣ್ಣ’ ಪದ ಬಳಕೆ ಮಾಡುತ್ತಾರೆ. ಇದರಿಂದ ಗಿಲ್ಲಿ ಮತ್ತಷ್ಟು ಸಿಟ್ಟಿಗೆ ಒಳಗಾಗುತ್ತಾರೆ. ‘ಅಣ್ಣ’ ಪದವನ್ನು ಕಾವ್ಯಾ ಅವರು ಅಸ್ತ್ರವಾಗಿ ಬಳಕೆ ಮಾಡಿಕೊಂಡಂತೆ ಕಾಣಿಸುತ್ತಾ ಇದೆ. ನವೆಂಬರ್ 17ರ ಎಪಿಸೋಡ್​ನಲ್ಲೂ ಮೊದಲೇ ಉರಿದುಕೊಂಡಿದ್ದ ಗಿಲ್ಲಿಯನ್ನು, ಕಾವ್ಯಾ ಅವರು ‘ಅಣ್ಣ’ ಪದ ಬಳಿಕೆ ಮಾಡಿ ಉರಿಯುವ ಬೆಂಕಿಗೆ ತುಪ್ಪ ಸುರಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?