AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?

ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎನ್ನುವ ವಿಚಾರ ತಿಳಿದ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಟಾಸ್ಕ್​ಗಳು ಸಾಕಷ್ಟು ಟಫ್​ ಇರಲಿದೆ ಎನ್ನುವ ಅಭಿಪ್ರಾಯವನ್ನು ಸ್ಪರ್ಧಿಗಳು ಹೊರ ಹಾಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?
ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?
TV9 Web
| Edited By: |

Updated on: Aug 02, 2021 | 10:13 PM

Share

ಬಿಗ್​ ಬಾಸ್​ ಮನೆಯಲ್ಲಿ ಪಾಯಿಂಟ್ಸ್​ ಪಡೆಯೋಕೆ, ಲಕ್ಷುರಿ ಐಟಮ್​ ಪಡೆಯೋಕೆ ಟಾಸ್ಕ್​ಗಳನ್ನು ನೀಡಲಾಗುತ್ತದೆ. ಆದರೆ, ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನಲ್ಲಿ ಕೊನೆಯ ವಾರ ​ ಸ್ಪರ್ಧಿಗಳಿಗೆ ವಿಶೇಷ ಟಾಸ್ಕ್​ ನೀಡಲಾಗುತ್ತಿದೆ. ಈ ಟಾಸ್ಕ್​ ಗೆದ್ದ ಸ್ಪರ್ಧಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಈ ಜಾಕ್​ಪಾಟ್ ಪಡೆದುಕೊಳ್ಳೋಕೆ ಸ್ಪರ್ಧಿಗಳು ರೆಡಿ ಆಗುತ್ತಿದ್ದಾರೆ.

ಪ್ರತಿ ವಾರ ಸ್ಪರ್ಧಿಗಳಿಗೆ ಟಾಸ್ಕ್​ ನೀಡಲಾಗುತ್ತದೆ. ವಾರ ಪೂರ್ತಿ ಟಾಸ್ಕ್​ ಇರುತ್ತದೆ. ಈ ಟಾಸ್ಕ್​ನಲ್ಲಿ ಗೆಲ್ಲೋರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುತ್ತಾರೆ. ಕೊನೆಯಲ್ಲಿ ಟಾಸ್ಕ್​​ನಲ್ಲಿ ಗೆಲ್ಲೋರು ಕ್ಯಾಪ್ಟನ್​ ಆಗುತ್ತಾರೆ. ಆದರೆ, ಕೊನೆಯ ವಾರವಾದ್ದರಿಂದ ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್ ಇಲ್ಲ. ಆದರೆ, ಬಿಗ್​ ಬಾಸ್​ ಸರ್​ಪ್ರೈಸ್​ ನೀಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು 113 ದಿನಗಳ ಸುದೀರ್ಘ ಪಯಣದಲ್ಲಿ ಎಲ್ಲಾ ಭಾವಗಳನ್ನು ದಾಟಿ ಗುರಿಗೆ ಹತ್ತಿರವಾಗಿದ್ದಾರೆ. ಎರಡು ಲಕ್ಷ ಪಡೆದುಕೊಳ್ಳಲು ಬಿಗ್​ ಬಾಸ್​ ಟಾಸ್ಕ್​ ನೀಡುತ್ತಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಮೊದಲ ಸ್ಥಾನದಲ್ಲಿರುವ ಸ್ಪರ್ಧಿಗೆ 5 ಅಂಕ, ಎರಡನೇ ಸ್ಥಾನದಲ್ಲಿರುವ ಸ್ಪರ್ಧಿಗೆ ಅಂಕ 3 ಹಾಗೂ ಮೂರನೇ ಸ್ಥಾನಕ್ಕೆ 1 ಅಂಕ ಸಿಗುತ್ತದೆ. ವಾರದ ಕೊನೆಯಲ್ಲಿ ಯಾರ ಬಳಿ ಅಂಕ ಹೆಚ್ಚಿರುತ್ತದೆಯೋ ಅವರಿಗೆ ಎರಡು ಲಕ್ಷ ರೂಪಾಯಿ ಸಿಗಲಿದೆ’ ಎಂದು ಬಿಗ್​ ಬಾಸ್​ನಿಂದ ಸುತ್ತೋಲೆ ಬಂತು.

ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎನ್ನುವ ವಿಚಾರ ತಿಳಿದ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಟಾಸ್ಕ್​ಗಳು ಸಾಕಷ್ಟು ಟಫ್​ ಇರಲಿದೆ ಎನ್ನುವ ಅಭಿಪ್ರಾಯವನ್ನು ಸ್ಪರ್ಧಿಗಳು ಹೊರ ಹಾಕಿದ್ದಾರೆ.

ಕಳೆದ ವಾರ ಸ್ಪರ್ಧಿಗಳಿಗೆ ಯಾವುದೇ ಟಾಸ್ಕ್​ ಇರಲಿಲ್ಲ. ಈ ಕಾರಣಕ್ಕೆ ಎಲ್ಲಾ ಸ್ಪರ್ಧಿಗಳು ಡಲ್​ ಆಗಿದ್ದರು. ಮನೆಯಲ್ಲಿ ಕೆಲವರು ನಿದ್ದೆಗೆ ಶರಣಾಗುವ ಸ್ಥಿತಿಗೂ ಹೋಗಿದ್ದರು.  ಈ ವಾರ ಟಾಸ್ಕ್​ ಇದೆ ಎನ್ನುವ ವಿಚಾರ ಕೇಳಿ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಅಲ್ಲದೆ, ಈ ವಾರ ಯಾರು ಹೇಗೆ ಪರ್ಫಾರ್ಮೆನ್ಸ್​ ಕೊಡುತ್ತಾರೆ ಎನ್ನುವುದು ತುಂಬಾನೇ ಮುಖ್ಯವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್