AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?

ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎನ್ನುವ ವಿಚಾರ ತಿಳಿದ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಟಾಸ್ಕ್​ಗಳು ಸಾಕಷ್ಟು ಟಫ್​ ಇರಲಿದೆ ಎನ್ನುವ ಅಭಿಪ್ರಾಯವನ್ನು ಸ್ಪರ್ಧಿಗಳು ಹೊರ ಹಾಕಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?
ಬಿಗ್​ ಬಾಸ್​ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಜಾಕ್​ಪಾಟ್; ಗೆಲ್ಲೋರು ಯಾರು?
TV9 Web
| Edited By: |

Updated on: Aug 02, 2021 | 10:13 PM

Share

ಬಿಗ್​ ಬಾಸ್​ ಮನೆಯಲ್ಲಿ ಪಾಯಿಂಟ್ಸ್​ ಪಡೆಯೋಕೆ, ಲಕ್ಷುರಿ ಐಟಮ್​ ಪಡೆಯೋಕೆ ಟಾಸ್ಕ್​ಗಳನ್ನು ನೀಡಲಾಗುತ್ತದೆ. ಆದರೆ, ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಎರಡನೇ ಇನ್ನಿಂಗ್ಸ್​ನಲ್ಲಿ ಕೊನೆಯ ವಾರ ​ ಸ್ಪರ್ಧಿಗಳಿಗೆ ವಿಶೇಷ ಟಾಸ್ಕ್​ ನೀಡಲಾಗುತ್ತಿದೆ. ಈ ಟಾಸ್ಕ್​ ಗೆದ್ದ ಸ್ಪರ್ಧಿಗೆ ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಈ ಜಾಕ್​ಪಾಟ್ ಪಡೆದುಕೊಳ್ಳೋಕೆ ಸ್ಪರ್ಧಿಗಳು ರೆಡಿ ಆಗುತ್ತಿದ್ದಾರೆ.

ಪ್ರತಿ ವಾರ ಸ್ಪರ್ಧಿಗಳಿಗೆ ಟಾಸ್ಕ್​ ನೀಡಲಾಗುತ್ತದೆ. ವಾರ ಪೂರ್ತಿ ಟಾಸ್ಕ್​ ಇರುತ್ತದೆ. ಈ ಟಾಸ್ಕ್​ನಲ್ಲಿ ಗೆಲ್ಲೋರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗುತ್ತಾರೆ. ಕೊನೆಯಲ್ಲಿ ಟಾಸ್ಕ್​​ನಲ್ಲಿ ಗೆಲ್ಲೋರು ಕ್ಯಾಪ್ಟನ್​ ಆಗುತ್ತಾರೆ. ಆದರೆ, ಕೊನೆಯ ವಾರವಾದ್ದರಿಂದ ಈ ಬಾರಿ ಕ್ಯಾಪ್ಟನ್ಸಿ ಟಾಸ್ಕ್ ಇಲ್ಲ. ಆದರೆ, ಬಿಗ್​ ಬಾಸ್​ ಸರ್​ಪ್ರೈಸ್​ ನೀಡಿದ್ದಾರೆ.

‘ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳು 113 ದಿನಗಳ ಸುದೀರ್ಘ ಪಯಣದಲ್ಲಿ ಎಲ್ಲಾ ಭಾವಗಳನ್ನು ದಾಟಿ ಗುರಿಗೆ ಹತ್ತಿರವಾಗಿದ್ದಾರೆ. ಎರಡು ಲಕ್ಷ ಪಡೆದುಕೊಳ್ಳಲು ಬಿಗ್​ ಬಾಸ್​ ಟಾಸ್ಕ್​ ನೀಡುತ್ತಿದ್ದಾರೆ. ಪ್ರತಿ ಸ್ಪರ್ಧೆಯಲ್ಲಿ ಮೊದಲ ಸ್ಥಾನದಲ್ಲಿರುವ ಸ್ಪರ್ಧಿಗೆ 5 ಅಂಕ, ಎರಡನೇ ಸ್ಥಾನದಲ್ಲಿರುವ ಸ್ಪರ್ಧಿಗೆ ಅಂಕ 3 ಹಾಗೂ ಮೂರನೇ ಸ್ಥಾನಕ್ಕೆ 1 ಅಂಕ ಸಿಗುತ್ತದೆ. ವಾರದ ಕೊನೆಯಲ್ಲಿ ಯಾರ ಬಳಿ ಅಂಕ ಹೆಚ್ಚಿರುತ್ತದೆಯೋ ಅವರಿಗೆ ಎರಡು ಲಕ್ಷ ರೂಪಾಯಿ ಸಿಗಲಿದೆ’ ಎಂದು ಬಿಗ್​ ಬಾಸ್​ನಿಂದ ಸುತ್ತೋಲೆ ಬಂತು.

ಎರಡು ಲಕ್ಷ ರೂಪಾಯಿ ಬಹುಮಾನ ಸಿಗಲಿದೆ ಎನ್ನುವ ವಿಚಾರ ತಿಳಿದ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಟಾಸ್ಕ್​ಗಳು ಸಾಕಷ್ಟು ಟಫ್​ ಇರಲಿದೆ ಎನ್ನುವ ಅಭಿಪ್ರಾಯವನ್ನು ಸ್ಪರ್ಧಿಗಳು ಹೊರ ಹಾಕಿದ್ದಾರೆ.

ಕಳೆದ ವಾರ ಸ್ಪರ್ಧಿಗಳಿಗೆ ಯಾವುದೇ ಟಾಸ್ಕ್​ ಇರಲಿಲ್ಲ. ಈ ಕಾರಣಕ್ಕೆ ಎಲ್ಲಾ ಸ್ಪರ್ಧಿಗಳು ಡಲ್​ ಆಗಿದ್ದರು. ಮನೆಯಲ್ಲಿ ಕೆಲವರು ನಿದ್ದೆಗೆ ಶರಣಾಗುವ ಸ್ಥಿತಿಗೂ ಹೋಗಿದ್ದರು.  ಈ ವಾರ ಟಾಸ್ಕ್​ ಇದೆ ಎನ್ನುವ ವಿಚಾರ ಕೇಳಿ ಸ್ಪರ್ಧಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಅಲ್ಲದೆ, ಈ ವಾರ ಯಾರು ಹೇಗೆ ಪರ್ಫಾರ್ಮೆನ್ಸ್​ ಕೊಡುತ್ತಾರೆ ಎನ್ನುವುದು ತುಂಬಾನೇ ಮುಖ್ಯವಾಗಲಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಅತಿ ಹೆಚ್ಚು ವೋಟ್​ ಪಡೆದವರಲ್ಲಿ ವೈಷ್ಣವಿ ಟಾಪ್​; ಮೂರನೇ ಸ್ಥಾನಕ್ಕೆ ಕುಸಿದ ಅರವಿಂದ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ