AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನ್ನರ್​ಗೆ ಸಿಗೋದು 50 ಲಕ್ಷ ಅಲ್ಲ, 25 ಲಕ್ಷ ರೂಪಾಯಿ; ಶಿಕ್ಷೆ ಕೊಟ್ಟ ಬಿಗ್ ಬಾಸ್

Bigg Boss Winner Prize Money: ಪ್ರತಿ ಬಾರಿ ಬಿಗ್ ಬಾಸ್ ವಿನ್ನರ್​ಗೆ 50 ಲಕ್ಷ ರೂಪಾಯಿ ಸಿಗುತ್ತಿತ್ತು. ಆದರೆ, 50 ಲಕ್ಷ ರೂಪಾಯಿ ಇದ್ದ ಪ್ರೈಜ್ ಅಮೌಂಟ್ ಅನ್ನು 25 ಲಕ್ಷ ರೂಪಾಯಿಗೆ ಇಳಿಕೆ ಮಾಡಲಾಗಿದೆ. ಇದನ್ನು ಕೇಳಿ ಸ್ಪರ್ಧಿಗಳು ಶಾಕ್ ಆಗಿದ್ದಾರೆ.

ವಿನ್ನರ್​ಗೆ ಸಿಗೋದು 50 ಲಕ್ಷ ಅಲ್ಲ, 25 ಲಕ್ಷ ರೂಪಾಯಿ; ಶಿಕ್ಷೆ ಕೊಟ್ಟ ಬಿಗ್ ಬಾಸ್
ಬಿಗ್ ಬಾಸ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jan 02, 2024 | 9:22 AM

ಬಿಗ್ ಬಾಸ್​ನಲ್ಲಿ (Bigg Boss) ಈ ಬಾರಿ ಸಾಕಷ್ಟು ಟ್ವಿಸ್ಟ್​ಗಳನ್ನು ನೀಡಲಾಗುತ್ತಿದೆ. ಕಳೆದ ವಾರವಷ್ಟೇ ಕಿಚ್ಚ ಸುದೀಪ್ ಅವರು ಫಿನಾಲೆ ಬಗ್ಗೆ ಹೇಳಿದ್ದರು. ವಿನ್ನರ್​ಗೆ 50 ಲಕ್ಷ ರೂಪಾಯಿ ಜೊತೆ ಕಾರು ಹಾಗೂ ಎಲೆಕ್ಟ್ರಿಕ್ ಸ್ಕೂಟರ್ ಸಿಗಲಿದೆ ಎಂದು ಘೋಷಣೆ ಮಾಡಿದ್ದರು. ಈಗ ಬಿಗ್ ಬಾಸ್ ಒಂದು ಟ್ವಿಸ್ಟ್​ ನೀಡಿದ್ದಾರೆ. 50 ಲಕ್ಷ ರೂಪಾಯಿ ಇದ್ದ ಪ್ರೈಜ್ ಅಮೌಂಟ್ ಅನ್ನು 25 ಲಕ್ಷ ರೂಪಾಯಿಗೆ ಇಳಿಕೆ ಮಾಡಿದ್ದಾರೆ. ಇದನ್ನು ಕೇಳಿ ಸ್ಪರ್ಧಿಗಳು ಶಾಕ್ ಆಗಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಒಂದು ಆದೇಶ ಬಂತು. 25 ಸಾವಿರ ಪಾಯಿಂಟ್​​ನಿಂದ 20 ಲಕ್ಷ ಪಾಯಿಂಟ್ಸ್ ಮಧ್ಯೆ ಹಲವು ಬೋರ್ಡ್ಗಳಿದ್ದವು. ಇದನ್ನು ಒಬ್ಬೊಬ್ಬರು ಆಯ್ಕೆ ಮಾಡಿಕೊಳ್ಳಬೇಕು ಎಂದು ಬಿಗ್ ಬಾಸ್ ಹೇಳಿದರು. ಅಲ್ಲದೆ, ಎಲ್ಲವೂ ಸ್ವಂತ ಆಯ್ಕೆ ಆಗಿರಬೇಕು ಎಂದು ಬಿಗ್ ಬಾಸ್ ಹೇಳಿದ್ದರು. ಆದರೆ, ವೋಟಿಂಗ್ ಮೂಲಕ ಈ ಪ್ರಕ್ರಿಯೆ ನಡೆಸಲಾಯಿತು. ಕನಿಷ್ಠ ಸಂಖ್ಯೆ ಅಂದರೆ 25 ಸಾವಿರ ಪಾಯಿಂಟ್​ನ ಬೋರ್ಡ್​ಅನ್ನು ವರ್ತೂರು ಸಂತೋಷ್ ಪಡೆದರು. ಅತಿ ಹೆಚ್ಚು ಪಾಯಿಂಟ್ಸ್ ಬೋರ್ಡ್ ಅಂದರೆ 20 ಲಕ್ಷ ಪಾಯಿಂಟ್​​ ಬೋರ್ಡ್ ತುಕಾಲಿ ಸಂತೋಷ್​ಗೆ ಸಿಕ್ಕಿತು. ಈ ಬಗ್ಗೆ ಬಿಗ್ ಬಾಸ್ ಅಸಮಾಧಾನ ಹೊರಹಾಕಿದರು. ‘ಎಲ್ಲದಕ್ಕೂ ಬೆಲೆ ತೆರಲೇಬೇಕು’ ಎಂಬ ಆದೇಶ ಬಂತು.

ಈ ವಾರ ನಾಮಿನೇಷನ್ ಪ್ರಕ್ರಿಯೆ ಮುಗಿದ ಬಳಿಕ ಬಿಗ್ ಬಾಸ್ ಒಂದು ಟ್ವಿಸ್ಟ್ ಕೊಟ್ಟರು. ಈ ವಾರ ಯಾರ್ಯಾರು ನಾಮಿನೇಟ್ ಆಗಿದ್ದಾರೋ ಅವರ ಕುತ್ತಿಗೆಯಲ್ಲಿರುವ ಮೊತ್ತವನ್ನು ಪ್ರೈಜ್​ ಹಣದಲ್ಲಿ ಮೈನಸ್ ಮಾಡುವುದಾಗಿ ಬಿಗ್ ಬಾಸ್ ಘೋಷಿಸಿದರು. ಈ ವಾರ ಕಾರ್ತಿಕ್, ತುಕಾಲಿ ಸಂತೋಷ್, ಮೈಕಲ್, ವರ್ತೂರು ಸಂತೋಷ್, ಪ್ರತಾಪ್ ನಾಮಿನೇಟ್ ಆಗಿದ್ದಾರೆ. ಈ ಪೈಕಿ ತುಕಾಲಿ ಸಂತೋಷ್ ಅವರೇ 20 ಲಕ್ಷ ಪಾಯಿಂಟ್ಸ್ ಹೊಂದಿದ್ದರು. ನಾಮಿನೇಟ್ ಆದ ಸ್ಪರ್ಧಿಗಳ ಮೊತ್ತ ಸೇರಿದರೆ 25 ಲಕ್ಷ ಆಗುತ್ತದೆ. ಈ ಕಾರಣದಿಂದ ಬಿಗ್ ಬಾಸ್ 25 ಲಕ್ಷ ಕಳೆದು ಉಳಿದ 25 ಲಕ್ಷ ರೂಪಾಯಿ ಮಾತ್ರ ವಿಜೇತರಿಗೆ ಸಿಗಲಿದೆ ಎಂದರು.

ಇದನ್ನೂ ಓದಿ: ‘ಬಿಗ್ ಬಾಸ್ ವಾತಾವರಣ ಹಾಳುಮಾಡೋಣ’; ದುರಹಂಕಾರದಿಂದ ಪಣ ತೊಟ್ಟ ಮೈಕಲ್

ಇದನ್ನು ಕೇಳಿ ಸ್ಪರ್ಧಿಗಳು ಶಾಕ್ ಆದರು. ಇದರ ಜೊತೆಗೆ ಒಂದು ಟ್ವಿಸ್ಟ್ ನೀಡಲಾಯಿತು. ‘ಕಳೆದುಕೊಂಡಿದ್ದನ್ನು ಗಳಿಸಲು ಮತ್ತೆ ಅವಕಾಶ ಇದೆ. ಈ ವಾರದ ಟಾಸ್ಕ್​ನ ಅದೇ ರೀತಿ ರೂಪಿಸಲಾಗಿದೆ. ಪ್ರತಿ ಟಾಸ್ಕ್​ಗೆ ಒಂದು ಮೊತ್ತ ನಿಗದಿ ಮಾಡಲಾಗುತ್ತದೆ. ಟಾಸ್ಕ್​ ಗೆದ್ದರೆ ಆ ಮೊತ್ತ ಮರಳುತ್ತದೆ’ ಎಂದರು ಬಿಗ್ ಬಾಸ್. ಇದನ್ನು ಕೇಳಿ ಸ್ಪರ್ಧಿಗಳು ಸ್ವಲ್ಪ ನಿರಾಳ ಆದರು. ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:16 am, Tue, 2 January 24

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್