AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್ ಬಾಸ್​ ಕಿರೀಟ ಗೆದ್ದ ಕನ್ನಡದ ಹುಡುಗ ನಿಖಿಲ್; ಸೃಷ್ಟಿ ಆಯಿತು ದಾಖಲೆ

ತೆಲುಗು ಬಿಗ್ ಬಾಸ್ ಸೀಸನ್ 8ರಲ್ಲಿ ಕನ್ನಡದ ನಿಖಿಲ್ ವಿಜೇತರಾಗಿದ್ದಾರೆ. ನಟ ಮತ್ತು ಯೂಟ್ಯೂಬರ್ ಆಗಿರುವ ನಿಖಿಲ್, ತಮ್ಮ ಪ್ರತಿಭೆಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. 50 ಲಕ್ಷ ರೂಪಾಯಿ ಬಹುಮಾನ ಮತ್ತು ಕಾರು ಗೆದ್ದ ನಿಖಿಲ್ ಅವರಿಗೆ ರಾಮ್ ಚರಣ್ ಅವಾರ್ಡ್ ನೀಡಿದ್ದಾರೆ. ಇದು ಕನ್ನಡದ ಯುವ ಪ್ರತಿಭೆಗೆ ಸಿಕ್ಕ ದೊಡ್ಡ ಗೆಲುವಾಗಿದೆ.

ತೆಲುಗು ಬಿಗ್ ಬಾಸ್​ ಕಿರೀಟ ಗೆದ್ದ ಕನ್ನಡದ ಹುಡುಗ ನಿಖಿಲ್; ಸೃಷ್ಟಿ ಆಯಿತು ದಾಖಲೆ
ನಿಖಿಲ್
ರಾಜೇಶ್ ದುಗ್ಗುಮನೆ
|

Updated on: Dec 16, 2024 | 9:08 AM

Share

ಬಿಗ್ ಬಾಸ್​ನಲ್ಲಿ ಸ್ಪರ್ಧೆ ಮಾಡಬೇಕು ಎಂದರೆ ಸಾಕಷ್ಟು ಟ್ಯಾಲೆಂಟ್ ಬೇಕು. ಅದನ್ನು ವಿನ್ ಆಗಬೇಕು ಎಂದರೆ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿರಬೇಕು. ಈಗ ‘ತೆಲುಗು ಬಿಗ್ ಬಾಸ್ ಸೀಸನ್ 8’ರಲ್ಲಿ ಕನ್ನಡದ ಹುಡುಗ ನಿಖಿಲ್ ಮಳಿಯಕ್ಕಲ್ ಗೆದ್ದಿದ್ದಾರೆ. ಈ ಮೂಲಕ ಅವಾರ್ಡ್​ನ ಬಾಚಿಕೊಂಡಿಕೊಂಡಿದ್ದಾರೆ. ರಾಮ್ ಚರಣ್ ಅವರು ಚೆಕ್ ಹಾಗೂ ಅವಾರ್ಡ್​ನ ನಿಖಿಲ್​ಗೆ ನೀಡಿದ್ದಾರೆ. ಬೇರೆ ಭಾಷೆಗೆ ತೆರಳಿ ಕನ್ನಡದ ಹುಡುಗ ಗೆದ್ದಿರುವುದರಿಂದ ದಾಖಲೆ ಸೃಷ್ಟಿ ಆಗಿದೆ.

ನಿಖಿಲ್ ಅವರು ಮೂಲತಃ ಕರ್ನಾಟಕದವರು. ಅವರು ಹುಟ್ಟಿದ್ದು ಮೈಸೂರಿನಲ್ಲಿ. ಅವರಿಗೆ ತೆಲುಗು ಚಿತ್ರರಂಗದ ಜೊತೆ, ಅಲ್ಲಿನ ಕಿರುತೆರೆ ಜೊತೆ ಒಳ್ಳೆಯ ನಂಟು ಬೆಳೆದಿದೆ. ಅವರು ನಟ ಹಾಗೂ ಯೂಟ್ಯೂಬರ್. ನಿಖಿಲ್​ಗೆ ಇನ್ನೂ 27 ವರ್ಷ. ಅವರು 2016ರಲ್ಲಿ ‘ಊಟಿ’ ಹೆಸರಿನ ಕನ್ನಡ ಸಿನಿಮಾ ಮಾಡಿದರು. 1991ರಲ್ಲಿ ನಡೆದ ಕಾವೇರಿ ಧಂಗೆಯಲ್ಲಿ ಬೇರೆ ಆಗುವ ಜೋಡಿ 12 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಾರೆ. ಈ ರೀತಿಯ ಕಥೆಯನ್ನು ಸಿನಿಮಾ ಹೊಂದಿತ್ತು. 2019ರಲ್ಲಿ ಪ್ರಸಾರ ಆರಂಭಿಸಿದ ತೆಲುಗಿನ ‘ಗೋರಿಂಟಕು’ ಧಾರಾವಾಹಿ ಮೂಲಕ ಅವರು ತೆಲುಗು ರಂಗದಲ್ಲಿ ಫೇಮಸ್ ಆದರು.

ನಿಖಿಲ್ ಅವರು ಸೆಪ್ಟೆಂಬರ್ 1ರಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದರು. ಬಿಗ್ ಬಾಸ್​ನಲ್ಲಿ ಭರ್ಜರಿ ಮನರಂಜನೆ ನೀಡಿ ಗಮನ ಸೆಳೆದರು. ಈಗ ಬಿಗ್ ಬಾಸ್ ವಿನ್ ಆಗಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಅವಾರ್ಡ್​ ಹಣ ಸಿಕ್ಕಿದೆ. ಜೊತೆಗೆ ಸುಂದರವಾದ ಒಂದು ಕಪ್ ಸಿಕ್ಕಿದೆ. ಜೊತೆಗೆ ಒಂದು ಕಾರ್ ಕೂಡ ಗಿಫ್ಟ್ ಆಗಿ ಸಿಕ್ಕಿದೆ. ಫಿನಾಲೆಯಲ್ಲಿ ಇದ್ದ ಗೌತಮ್ ಕೃಷ್ಣ, ಅವಿನಾಶ್, ಪ್ರೇರಣಾ ಹಾಗೂ ನಬೀಲ್​ನ ಬೀಟ್ ಮಾಡಿದರು.

ಇದನ್ನೂ ಓದಿ: ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

ಫಿನಾಲೆಗೆ ರಾಮ್ ಚರಣ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ನಿಖಿಲ್​ಗೆ ಅವಾರ್ಡ್ ನೀಡಿದ್ದಾರೆ. ರಾಮ್ ಚರಣ್ ಅವರಿಂದ ಅವಾರ್ಡ್ ಪಡೆದು ನಿಖಿಲ್ ಖುಷಿಪಟ್ಟಿದ್ದಾರೆ. ಈಗ ಅವರು ಬಣ್ಣದ ಲೋಕದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ