Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬಿಗ್ ಬಾಸ್​ ಕಿರೀಟ ಗೆದ್ದ ಕನ್ನಡದ ಹುಡುಗ ನಿಖಿಲ್; ಸೃಷ್ಟಿ ಆಯಿತು ದಾಖಲೆ

ತೆಲುಗು ಬಿಗ್ ಬಾಸ್ ಸೀಸನ್ 8ರಲ್ಲಿ ಕನ್ನಡದ ನಿಖಿಲ್ ವಿಜೇತರಾಗಿದ್ದಾರೆ. ನಟ ಮತ್ತು ಯೂಟ್ಯೂಬರ್ ಆಗಿರುವ ನಿಖಿಲ್, ತಮ್ಮ ಪ್ರತಿಭೆಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. 50 ಲಕ್ಷ ರೂಪಾಯಿ ಬಹುಮಾನ ಮತ್ತು ಕಾರು ಗೆದ್ದ ನಿಖಿಲ್ ಅವರಿಗೆ ರಾಮ್ ಚರಣ್ ಅವಾರ್ಡ್ ನೀಡಿದ್ದಾರೆ. ಇದು ಕನ್ನಡದ ಯುವ ಪ್ರತಿಭೆಗೆ ಸಿಕ್ಕ ದೊಡ್ಡ ಗೆಲುವಾಗಿದೆ.

ತೆಲುಗು ಬಿಗ್ ಬಾಸ್​ ಕಿರೀಟ ಗೆದ್ದ ಕನ್ನಡದ ಹುಡುಗ ನಿಖಿಲ್; ಸೃಷ್ಟಿ ಆಯಿತು ದಾಖಲೆ
ನಿಖಿಲ್
Follow us
ರಾಜೇಶ್ ದುಗ್ಗುಮನೆ
|

Updated on: Dec 16, 2024 | 9:08 AM

ಬಿಗ್ ಬಾಸ್​ನಲ್ಲಿ ಸ್ಪರ್ಧೆ ಮಾಡಬೇಕು ಎಂದರೆ ಸಾಕಷ್ಟು ಟ್ಯಾಲೆಂಟ್ ಬೇಕು. ಅದನ್ನು ವಿನ್ ಆಗಬೇಕು ಎಂದರೆ ತಮ್ಮನ್ನು ತಾವು ಸಾಬೀತು ಮಾಡಿಕೊಂಡಿರಬೇಕು. ಈಗ ‘ತೆಲುಗು ಬಿಗ್ ಬಾಸ್ ಸೀಸನ್ 8’ರಲ್ಲಿ ಕನ್ನಡದ ಹುಡುಗ ನಿಖಿಲ್ ಮಳಿಯಕ್ಕಲ್ ಗೆದ್ದಿದ್ದಾರೆ. ಈ ಮೂಲಕ ಅವಾರ್ಡ್​ನ ಬಾಚಿಕೊಂಡಿಕೊಂಡಿದ್ದಾರೆ. ರಾಮ್ ಚರಣ್ ಅವರು ಚೆಕ್ ಹಾಗೂ ಅವಾರ್ಡ್​ನ ನಿಖಿಲ್​ಗೆ ನೀಡಿದ್ದಾರೆ. ಬೇರೆ ಭಾಷೆಗೆ ತೆರಳಿ ಕನ್ನಡದ ಹುಡುಗ ಗೆದ್ದಿರುವುದರಿಂದ ದಾಖಲೆ ಸೃಷ್ಟಿ ಆಗಿದೆ.

ನಿಖಿಲ್ ಅವರು ಮೂಲತಃ ಕರ್ನಾಟಕದವರು. ಅವರು ಹುಟ್ಟಿದ್ದು ಮೈಸೂರಿನಲ್ಲಿ. ಅವರಿಗೆ ತೆಲುಗು ಚಿತ್ರರಂಗದ ಜೊತೆ, ಅಲ್ಲಿನ ಕಿರುತೆರೆ ಜೊತೆ ಒಳ್ಳೆಯ ನಂಟು ಬೆಳೆದಿದೆ. ಅವರು ನಟ ಹಾಗೂ ಯೂಟ್ಯೂಬರ್. ನಿಖಿಲ್​ಗೆ ಇನ್ನೂ 27 ವರ್ಷ. ಅವರು 2016ರಲ್ಲಿ ‘ಊಟಿ’ ಹೆಸರಿನ ಕನ್ನಡ ಸಿನಿಮಾ ಮಾಡಿದರು. 1991ರಲ್ಲಿ ನಡೆದ ಕಾವೇರಿ ಧಂಗೆಯಲ್ಲಿ ಬೇರೆ ಆಗುವ ಜೋಡಿ 12 ವರ್ಷಗಳ ಬಳಿಕ ಮತ್ತೆ ಒಂದಾಗುತ್ತಾರೆ. ಈ ರೀತಿಯ ಕಥೆಯನ್ನು ಸಿನಿಮಾ ಹೊಂದಿತ್ತು. 2019ರಲ್ಲಿ ಪ್ರಸಾರ ಆರಂಭಿಸಿದ ತೆಲುಗಿನ ‘ಗೋರಿಂಟಕು’ ಧಾರಾವಾಹಿ ಮೂಲಕ ಅವರು ತೆಲುಗು ರಂಗದಲ್ಲಿ ಫೇಮಸ್ ಆದರು.

ನಿಖಿಲ್ ಅವರು ಸೆಪ್ಟೆಂಬರ್ 1ರಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಿದ್ದರು. ಬಿಗ್ ಬಾಸ್​ನಲ್ಲಿ ಭರ್ಜರಿ ಮನರಂಜನೆ ನೀಡಿ ಗಮನ ಸೆಳೆದರು. ಈಗ ಬಿಗ್ ಬಾಸ್ ವಿನ್ ಆಗಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಅವಾರ್ಡ್​ ಹಣ ಸಿಕ್ಕಿದೆ. ಜೊತೆಗೆ ಸುಂದರವಾದ ಒಂದು ಕಪ್ ಸಿಕ್ಕಿದೆ. ಜೊತೆಗೆ ಒಂದು ಕಾರ್ ಕೂಡ ಗಿಫ್ಟ್ ಆಗಿ ಸಿಕ್ಕಿದೆ. ಫಿನಾಲೆಯಲ್ಲಿ ಇದ್ದ ಗೌತಮ್ ಕೃಷ್ಣ, ಅವಿನಾಶ್, ಪ್ರೇರಣಾ ಹಾಗೂ ನಬೀಲ್​ನ ಬೀಟ್ ಮಾಡಿದರು.

ಇದನ್ನೂ ಓದಿ: ತಂದೆ ನಿಧನ ಹೊಂದಿದ್ದಕ್ಕೆ ಹೊರ ಹೋದ್ರಾ ಗೋಲ್ಡ್ ಸುರೇಶ್? ಇಲ್ಲಿದೆ ಅಸಲಿ ವಿಚಾರ

ಫಿನಾಲೆಗೆ ರಾಮ್ ಚರಣ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ನಿಖಿಲ್​ಗೆ ಅವಾರ್ಡ್ ನೀಡಿದ್ದಾರೆ. ರಾಮ್ ಚರಣ್ ಅವರಿಂದ ಅವಾರ್ಡ್ ಪಡೆದು ನಿಖಿಲ್ ಖುಷಿಪಟ್ಟಿದ್ದಾರೆ. ಈಗ ಅವರು ಬಣ್ಣದ ಲೋಕದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!