AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಯಾರೂ ಊಹಿಸದ ಸೀರಿಯಲ್​ಗೆ ನಂಬರ್ 1 ಸ್ಥಾನ

2025ನೇ ಸಾಲಿನ 24ನೇ ವಾರದ TRP ಪಟ್ಟಿಯಲ್ಲಿ ಯಾರೂ ಊಹಿಸದ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ‘ನಾ ನಿನ್ನ ಬಿಡಲಾರೆ’ ಎರಡನೇ ಸ್ಥಾನದಲ್ಲಿದ್ದರೆ, ‘ಅಣ್ಣಯ್ಯ’, ‘ಲಕ್ಷ್ಮೀ ನಿವಾಸ’, ಮತ್ತು ‘ಅಮೃತಧಾರೆ/ಬ್ರಹ್ಮಗಂಟು’ ಕ್ರಮವಾಗಿ ಮೂರನೇ, ನಾಲ್ಕನೇ ಮತ್ತು ಐದನೇ ಸ್ಥಾನಗಳನ್ನು ಪಡೆದುಕೊಂಡಿವೆ. ಈ ಫಲಿತಾಂಶಗಳು ಅನೇಕರನ್ನು ಆಶ್ಚರ್ಯಗೊಳಿಸಿವೆ.

ಟಿಆರ್​ಪಿಯಲ್ಲಿ ಯಾರೂ ಊಹಿಸದ ಸೀರಿಯಲ್​ಗೆ ನಂಬರ್ 1 ಸ್ಥಾನ
ಸೀರಿಯಲ್ ಸುದ್ದಿ
ರಾಜೇಶ್ ದುಗ್ಗುಮನೆ
|

Updated on: Jun 26, 2025 | 3:03 PM

Share

ಧಾರಾವಾಹಿಗಳ ಟಿಆರ್​ಪಿ ಪ್ರತಿ ಗುರುವಾರ ಲಭ್ಯವಾಗುತ್ತದೆ. ಪ್ರತಿ ವಾರ ಬೇರೆ ಬೇರೆ ಧಾರಾವಾಹಿಗಳು ಈ ಲಿಸ್ಟ್​ನಲ್ಲಿ ಸ್ಥಾನ ಪಡೆದುಕೊಳ್ಳುತ್ತವೆ. ಈಗ 2025ನೇ ಸಾಲಿನ 24ನೇ ವಾರದ ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ವಿಶೇಷ ಎಂದರೆ ಟಿಆರ್​ಪಿ (TRP) ರೇಸ್​ನಲ್ಲಿ ಯಾರೂ ಊಹಿಸದ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಹಾಗಾದರೆ ಯಾವುದು ಆ ಧಾರಾವಾಹಿ? ಆ ಬಗ್ಗೆ ಇಲ್ಲಿದೆ ವಿವರ.

ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಇಷ್ಟು ದಿನ ಟಾಪ್ ಐದರಲ್ಲಿ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ, ಕೆಲವೇ ಕೆಲವು ವಾರಗಳಲ್ಲಿ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿತ್ತು. ಈಗ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ. ಜನರು ಈ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ.

ಎರಡನೇ ಸ್ಥಾನದಲ್ಲಿ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಇದೆ. ಹಾರರ್ ಶೈಲಿಯಲ್ಲಿ ಈ ಧಾರಾವಾಹಿ ಮೂಡಿ ಬರುತ್ತಿದೆ. ಈ ಧಾರಾವಾಹಿಯಲ್ಲಿ ತಂತ್ರ, ಮಂತ್ರ, ಮಾಟದ ವಿಚಾರಗಳು ಕೂಡ ಇವೆ. ತಂದೆ-ಮಗಳ ಬಾಂಧವ್ಯದ ಕಥೆಯನ್ನೂ ಕೂಡ ಬೆಸೆಯಲಾಗಿದೆ. ಈ ಧಾರಾವಾಹಿಗೆ ಟಿಆರ್​ಪಿಯಲ್ಲಿ ಎರಡನೇ ಸ್ಥಾನ ಸಿಕ್ಕಿದೆ.

ಇದನ್ನೂ ಓದಿ
Image
ನಿಧನ ಹೊಂದುವ ಹಿಂದಿನ ದಿನ ಸಾಯುವ ದೃಶ್ಯವನ್ನೇ ಶೂಟ್ ಮಾಡಿದ್ದ ಶಂಕರ್ ನಾಗ್
Image
ಡ್ರಗ್ ಕೇಸ್​ನಲ್ಲಿ ಮತ್ತೋರ್ವ ಹೀರೋ ಅರೆಸ್ಟ್; ಬೆಳೆಯುತ್ತಲೇ ಇದೆ ಪಟ್ಟಿ
Image
ಪಾಕಿಸ್ತಾನದ ಈ ವ್ಯಕ್ತಿ ಅಪ್ಪು ಅಭಿಮಾನಿ; ಕ್ಯಾಬ್​ನಲ್ಲಿ ಪುನೀತ್ ಸಾಂಗ್
Image
‘ಆರ್ಯನ್ ಯಾವಾಗಲೂ ನಾನು ಮುಸ್ಲಿಂ ಎಂದೇ ಹೇಳುತ್ತಾನೆ’; ಗೌರಿ ಖಾನ್

ಮೂರನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ನಿಶಾ ರವಿಕೃಷ್ಣನ್ ಅವರು ಈ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿರೋ ಧಾರಾವಾಹಿ ಜನರಿಂದ ಹೆಚ್ಚು ಮೆಚ್ಚುಗೆ ಪಡೆದು ಮೂರನೇ ಸ್ಥಾನದಲ್ಲಿ ಇದೆ.

ನಾಲ್ಕನೇ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಹಲವು ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಈ ಧಾರಾವಾಹಿಯ ಲಕ್ಷ್ಮೀ ಪಾತ್ರಧಾರಿ ಹೊರ ನಡೆದಿದ್ದು, ಧಾರಾವಾಹಿ ಮೇಲೆ ಯಾವುದೇ ಪ್ರಭಾವ ಬೀರಿಲ್ಲ.

ಇದನ್ನೂ ಓದಿ: ‘ಅಮೃತಧಾರೆ’ ಧಾರಾವಾಹಿಯಿಂದ ಕಾಣೆಯೇ ಆದ ಸಾರಾ ಅಣ್ಣಯ್ಯ

ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಬ್ರಹ್ಮಗಂಟು’ ಧಾರಾವಾಹಿ ಇದೆ. ಸಾಕಷ್ಟು ವಾರಗಳಿಂದ ‘ಅಮೃತಧಾರೆ’  ಧಾರಾವಾಹಿ ಟಾಪ್ ಐದರಲ್ಲಿ ಸ್ಥಾನ ಪಡೆಯುತ್ತಿದೆ. ಈ ಮೊದಲು ಕೆಲವು ವಾರ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕ ಉದಾಹರಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ