AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​: ಮೊದಲ ಸ್ಥಾನದಲ್ಲಿ ‘ಪುಟ್ಟಕ್ಕ’; 10ನೇ ಸ್ಥಾನಕ್ಕಿಳಿದ ‘ಭಾಗ್ಯಲಕ್ಷ್ಮೀ’

Kannada Serials TRP: ಈ ವಾರದ ಟಾಪ್​ ಐದು ಧಾರಾವಾಹಿಗಳ ಪೈಕಿ ಜೀ ಕನ್ನಡದ ಧಾರಾವಾಹಿಗಳೇ ಇವೆ. ಹಾಗಾದರೆ ಉಳಿದ ಧಾರಾವಾಹಿಗಳ ಕಥೆ ಏನು? ಆ ಬಗ್ಗೆ ಇಲ್ಲಿದೆ ವಿವರ.

ಟಿಆರ್​ಪಿ ರೇಸ್​: ಮೊದಲ ಸ್ಥಾನದಲ್ಲಿ ‘ಪುಟ್ಟಕ್ಕ’; 10ನೇ ಸ್ಥಾನಕ್ಕಿಳಿದ ‘ಭಾಗ್ಯಲಕ್ಷ್ಮೀ’
ಸೀರಿಯಲ್ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Jul 20, 2023 | 1:00 PM

Share

ಟಿಆರ್​ಪಿ ವಿಚಾರದಲ್ಲಿ ಪ್ರತಿ ವಾರ ಸ್ಥಾನಗಳಲ್ಲಿ ಬದಲಾವಣೆ ಆಗುತ್ತಲೇ ಇರುತ್ತವೆ. ಒಂದು ಧಾರಾವಾಹಿ ಮೇಲೆ ಬಂದರೆ ಮತ್ತೊಂದು ಧಾರಾವಾಹಿ ಕೆಳಗೆ ಹೋಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಟಾಪ್​ 3 ಧಾರಾವಾಹಿಗಳಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ. ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ವಾರದ ಟಾಪ್​ ಐದು ಧಾರಾವಾಹಿಗಳ ಪೈಕಿ ಜೀ ಕನ್ನಡದ ಧಾರಾವಾಹಿಗಳೇ ಇವೆ. ಹಾಗಾದರೆ ಉಳಿದ ಧಾರಾವಾಹಿಗಳ ಕಥೆ ಏನು? ಆ ಬಗ್ಗೆ ಇಲ್ಲಿದೆ ವಿವರ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇತ್ತೀಚೆಗೆ ಪ್ರೇಕ್ಷಕರನ್ನು ಸಾಕಷ್ಟು ಸೆಳೆದುಕೊಳ್ಳುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ನಟನೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಕಳೆದ ಹಲವು ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ ಅನ್ನೋದು ವಿಶೇಷ. ಈ ಧಾರಾವಾಹಿ ಈಗಾಗಲೇ 400ಕ್ಕೂ ಅಧಿಕ ಎಪಿಸೋಡ್ ಪೂರ್ಣಗೊಳಿಸಿದೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿಯ ಟಿಆರ್​ಪಿ ಕೂಡ ಸಖತ್ ಆಗಿದೆ. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ಇದನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ. ಸಾವಿರಕ್ಕೂ ಅಧಿಕ ಎಪಿಸೋಡ್​ಗಳನ್ನು ಪೂರ್ಣಗೊಳಿಸಿರುವ ಧಾರಾವಾಹಿ ನಾಗಾಲೋಟ ಮುಂದುವರಿದೆ.

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಇತ್ತೀಚೆಗೆ ಆರಂಭಗೊಂಡಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ರಿಚ್ ಆಗಿ ಮೂಡಿ ಬರುತ್ತಿದೆ. ಈ ಕಾರಣಕ್ಕೂ ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನೇ ಕಾಯ್ದುಕೊಂಡು ಹೋಗುವ ಚಾಲೆಂಜ್ ಈ ಧಾರಾವಾಹಿಗೆ ಇದೆ.

ಶ್ರೀರಸ್ತು ಶುಭಮಸ್ತು

ಪತಿಯನ್ನು ಕಳೆದುಕೊಂಡ ಮಹಿಳೆ ಹಾಗೂ ಪತ್ನಿಯನ್ನು ಕಳೆದುಕೊಂಡ ಪುರುಷ. ಇವರಿಬ್ಬರಿಗೂ ಮಕ್ಕಳಿದ್ದಾರೆ. ಅವರು ದೊಡ್ಡವರಾಗಿದ್ದಾರೆ. ಹೀಗಿರುವಾಗ ಈ ಪುರುಷ ಹಾಗೂ ಮಹಿಳೆ ಮಧ್ಯೆ ಪ್ರಿತಿ ಮೂಡಿದರೆ ಏನಾಗುತ್ತದೆ? ಈ ಕಥೆಯನ್ನು ‘ಶ್ರೀರಸ್ತು ಶುಭಮಸ್ತು’ ಹೊಂದಿದೆ. ಈ ಧಾರಾವಾಹಿ ಟಿಆರ್​ಪಿ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ

ಉಳಿದ ಧಾರಾವಾಹಿ ಕಥೆ ಏನು?

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಎಲ್ಲರ ಗಮನ ಸೆಳೆಯುತ್ತಿದೆ. ಆರನೇ ಸ್ಥಾನದಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯೆಲ್ಲಮ್ಮ’, ಏಳನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’, ಎಂಟನೇ ಸ್ಥಾನದಲ್ಲಿ ನೀನಾದೆನಾ, ಒಂಭತ್ತನೇ ಸ್ಥಾನದಲ್ಲಿ ‘ನಮ್ಮ ಲಚ್ಚಿ’ ಹಾಗೂ ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ.

ರೇಸ್​ಗೆ ಎಂಟ್ರಿ ಆಗಲಿದೆ ಸೀತಾ ರಾಮ?

‘ಸೀತಾ ರಾಮ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ನಟಿಸಿದ್ದಾರೆ. ಈ ಧಾರಾವಾಹಿ ಮುಂದಿನ ವಾರ ಟಿಆರ್​ಪಿ ರೇಸ್​ಗೆ ಎಂಟ್ರಿ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Thu, 20 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More