AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​: ಮೊದಲ ಸ್ಥಾನದಲ್ಲಿ ‘ಪುಟ್ಟಕ್ಕ’; 10ನೇ ಸ್ಥಾನಕ್ಕಿಳಿದ ‘ಭಾಗ್ಯಲಕ್ಷ್ಮೀ’

Kannada Serials TRP: ಈ ವಾರದ ಟಾಪ್​ ಐದು ಧಾರಾವಾಹಿಗಳ ಪೈಕಿ ಜೀ ಕನ್ನಡದ ಧಾರಾವಾಹಿಗಳೇ ಇವೆ. ಹಾಗಾದರೆ ಉಳಿದ ಧಾರಾವಾಹಿಗಳ ಕಥೆ ಏನು? ಆ ಬಗ್ಗೆ ಇಲ್ಲಿದೆ ವಿವರ.

ಟಿಆರ್​ಪಿ ರೇಸ್​: ಮೊದಲ ಸ್ಥಾನದಲ್ಲಿ ‘ಪುಟ್ಟಕ್ಕ’; 10ನೇ ಸ್ಥಾನಕ್ಕಿಳಿದ ‘ಭಾಗ್ಯಲಕ್ಷ್ಮೀ’
ಸೀರಿಯಲ್ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Jul 20, 2023 | 1:00 PM

Share

ಟಿಆರ್​ಪಿ ವಿಚಾರದಲ್ಲಿ ಪ್ರತಿ ವಾರ ಸ್ಥಾನಗಳಲ್ಲಿ ಬದಲಾವಣೆ ಆಗುತ್ತಲೇ ಇರುತ್ತವೆ. ಒಂದು ಧಾರಾವಾಹಿ ಮೇಲೆ ಬಂದರೆ ಮತ್ತೊಂದು ಧಾರಾವಾಹಿ ಕೆಳಗೆ ಹೋಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಟಾಪ್​ 3 ಧಾರಾವಾಹಿಗಳಲ್ಲಿ ಯಾವುದೇ ಬದಲಾವಣೆ ಆಗುತ್ತಿಲ್ಲ. ‘ಪುಟ್ಟಕ್ಕನ ಮಕ್ಕಳು’ (Puttakkana Makkalu) ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಈ ವಾರದ ಟಾಪ್​ ಐದು ಧಾರಾವಾಹಿಗಳ ಪೈಕಿ ಜೀ ಕನ್ನಡದ ಧಾರಾವಾಹಿಗಳೇ ಇವೆ. ಹಾಗಾದರೆ ಉಳಿದ ಧಾರಾವಾಹಿಗಳ ಕಥೆ ಏನು? ಆ ಬಗ್ಗೆ ಇಲ್ಲಿದೆ ವಿವರ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇತ್ತೀಚೆಗೆ ಪ್ರೇಕ್ಷಕರನ್ನು ಸಾಕಷ್ಟು ಸೆಳೆದುಕೊಳ್ಳುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ಉಮಾಶ್ರೀ ನಟನೆ ಪ್ರೇಕ್ಷಕರಿಗೆ ಇಷ್ಟವಾಗುತ್ತಿದೆ. ಕಳೆದ ಹಲವು ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲೇ ಮುಂದುವರಿದಿದೆ ಅನ್ನೋದು ವಿಶೇಷ. ಈ ಧಾರಾವಾಹಿ ಈಗಾಗಲೇ 400ಕ್ಕೂ ಅಧಿಕ ಎಪಿಸೋಡ್ ಪೂರ್ಣಗೊಳಿಸಿದೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿಯ ಟಿಆರ್​ಪಿ ಕೂಡ ಸಖತ್ ಆಗಿದೆ. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿದೆ. ಇದನ್ನು ಜನರು ಹೆಚ್ಚು ಇಷ್ಟಪಡುತ್ತಿದ್ದಾರೆ. ಸಾವಿರಕ್ಕೂ ಅಧಿಕ ಎಪಿಸೋಡ್​ಗಳನ್ನು ಪೂರ್ಣಗೊಳಿಸಿರುವ ಧಾರಾವಾಹಿ ನಾಗಾಲೋಟ ಮುಂದುವರಿದೆ.

ಅಮೃತಧಾರೆ

ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಇತ್ತೀಚೆಗೆ ಆರಂಭಗೊಂಡಿದೆ. ಈ ಧಾರಾವಾಹಿ ಟಿಆರ್​ಪಿ ರೇಸ್​ನಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ರಿಚ್ ಆಗಿ ಮೂಡಿ ಬರುತ್ತಿದೆ. ಈ ಕಾರಣಕ್ಕೂ ಪ್ರೇಕ್ಷಕರಿಗೆ ಇಷ್ಟ ಆಗುತ್ತಿದೆ. ಮುಂದಿನ ದಿನಗಳಲ್ಲಿ ಇದನ್ನೇ ಕಾಯ್ದುಕೊಂಡು ಹೋಗುವ ಚಾಲೆಂಜ್ ಈ ಧಾರಾವಾಹಿಗೆ ಇದೆ.

ಶ್ರೀರಸ್ತು ಶುಭಮಸ್ತು

ಪತಿಯನ್ನು ಕಳೆದುಕೊಂಡ ಮಹಿಳೆ ಹಾಗೂ ಪತ್ನಿಯನ್ನು ಕಳೆದುಕೊಂಡ ಪುರುಷ. ಇವರಿಬ್ಬರಿಗೂ ಮಕ್ಕಳಿದ್ದಾರೆ. ಅವರು ದೊಡ್ಡವರಾಗಿದ್ದಾರೆ. ಹೀಗಿರುವಾಗ ಈ ಪುರುಷ ಹಾಗೂ ಮಹಿಳೆ ಮಧ್ಯೆ ಪ್ರಿತಿ ಮೂಡಿದರೆ ಏನಾಗುತ್ತದೆ? ಈ ಕಥೆಯನ್ನು ‘ಶ್ರೀರಸ್ತು ಶುಭಮಸ್ತು’ ಹೊಂದಿದೆ. ಈ ಧಾರಾವಾಹಿ ಟಿಆರ್​ಪಿ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ

ಉಳಿದ ಧಾರಾವಾಹಿ ಕಥೆ ಏನು?

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಸತ್ಯ’ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಎಲ್ಲರ ಗಮನ ಸೆಳೆಯುತ್ತಿದೆ. ಆರನೇ ಸ್ಥಾನದಲ್ಲಿ ‘ಉಧೋ ಉಧೋ ಶ್ರೀ ರೇಣುಕಾ ಯೆಲ್ಲಮ್ಮ’, ಏಳನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’, ಎಂಟನೇ ಸ್ಥಾನದಲ್ಲಿ ನೀನಾದೆನಾ, ಒಂಭತ್ತನೇ ಸ್ಥಾನದಲ್ಲಿ ‘ನಮ್ಮ ಲಚ್ಚಿ’ ಹಾಗೂ ಹತ್ತನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಇದೆ.

ರೇಸ್​ಗೆ ಎಂಟ್ರಿ ಆಗಲಿದೆ ಸೀತಾ ರಾಮ?

‘ಸೀತಾ ರಾಮ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ನಟಿಸಿದ್ದಾರೆ. ಈ ಧಾರಾವಾಹಿ ಮುಂದಿನ ವಾರ ಟಿಆರ್​ಪಿ ರೇಸ್​ಗೆ ಎಂಟ್ರಿ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:56 pm, Thu, 20 July 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ