AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಾಹಿ ಟಿಆರ್​ಪಿ: ‘ಭಾಗ್ಯಲಕ್ಷ್ಮಿ’ ಟಿಆರ್​ಪಿಯಲ್ಲಿ ಏರಿಕೆ; ಇಳಿಕೆ ಕಂಡ ‘ಪುಟ್ಟಕ್ಕನ ಮಕ್ಕಳು’ ಬೇಡಿಕೆ

ಭಾಗ್ಯಲಕ್ಷ್ಮಿ ಧಾರಾವಾಹಿ ಆರಂಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಳ್ಳುತ್ತಿತ್ತು. ಈಗ ಈ ಸೀರಿಯಲ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಂಬ್ಯಾಕ್ ಮಾಡಿದೆ. ಕಲರ್ಸ್ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್​ಪಿ ಪಡೆದ ಧಾರಾವಾಹಿ ಎನ್ನುವ ಜನಪ್ರಿಯತೆ ಈ ಧಾರಾವಾಹಿಗೆ ಸಿಕ್ಕಿದೆ. ಈ ವಾರ ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಧಾರಾವಾಹಿ ಟಿಆರ್​ಪಿ: ‘ಭಾಗ್ಯಲಕ್ಷ್ಮಿ’ ಟಿಆರ್​ಪಿಯಲ್ಲಿ ಏರಿಕೆ; ಇಳಿಕೆ ಕಂಡ ‘ಪುಟ್ಟಕ್ಕನ ಮಕ್ಕಳು’ ಬೇಡಿಕೆ
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Oct 07, 2023 | 10:11 AM

Share

39ನೇ ವಾರದ ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಕಳೆದ ವಾರಗಳಿಗೆ ಹೋಲಿಕೆ ಮಾಡಿಕೊಂಡರೆ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಕಂಬ್ಯಾಕ್ ಮಾಡಿದೆ. ಆರಂಭದಲ್ಲಿ ಭರ್ಜರಿ ಟಿಆರ್​ಪಿ (TRP) ಪಡೆದುಕೊಳ್ಳುತ್ತಿದ್ದ ಈ ಧಾರಾವಾಹಿ ಬಳಿಕ ಡಲ್ ಆಯಿತು. ಈಗ ಈ ಸೀರಿಯಲ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಂಬ್ಯಾಕ್ ಮಾಡಿದೆ. ಕಲರ್ಸ್ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್​ಪಿ ಪಡೆದ ಧಾರಾವಾಹಿ ಎನ್ನುವ ಜನಪ್ರಿಯತೆ ಈ ಧಾರಾವಾಹಿಗೆ ಸಿಕ್ಕಿದೆ. ಈ ವಾರ ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ಮೊದಲಾದವರು ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಇಷ್ಟು ದಿನ ಎರಡಂಕಿಯ ಟಿಆರ್​ಪಿ ಪಡೆದುಕೊಳ್ಳುತ್ತಿತ್ತು. ಆದರೆ, ಈಗ ಧಾರಾವಾಹಿಯ ಟಿಆರ್​ಪಿಯಲ್ಲಿ ಕೊಂಚ ಇಳಿಕೆ ಕಂಡಿದೆ. ಇದರ ಟಿಆರ್​ಪಿ ಎರಡಂಕಿಯಿಂದ ಒಂದಂಕಿಗೆ ಇಳಿದೆ. ಆದಾಗ್ಯೂ ಮೊದಲ ಸ್ಥಾನ ಮುಂದುವರಿಸಿಕೊಂಡು ಹೋಗುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಉಳಿದ ಧಾರಾವಾಹಿಗಳಿಗೆ ಕಠಿಣ ಪೈಪೋಟಿ ನೀಡುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್, ಮುಖ್ಯಮಂತ್ರಿ ಚಂದ್ರು ಸೇರಿ ಅನೇಕ ಕಲಾವಿದರಿದ್ದಾರೆ. ಈ ಧಾರಾವಾಹಿ ಎರಡನೇ ಸ್ಥಾನ ಕಾಯ್ದುಕೊಂಡಿದೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿಯನ್ನು ಇಷ್ಟಪಡುವ ಅನೇಕರಿದ್ದಾರೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಸಾವಿರಾರು ಎಪಿಸೋಡ್ ಪೂರ್ಣಗೊಳಿಸಿದರೂ ಬೇಡಿಕೆ ಕುಗ್ಗಿಸಿಕೊಳ್ಳದೇ ಮುನ್ನುಗ್ಗುತ್ತಿದೆ. ಈ ಧಾರಾವಾಹಿಯಲ್ಲಿ ರಕ್ಷ್ ಹಾಗೂ ನಿಶಾ ರವಿಕೃಷ್ಣನ್ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಶೀಘ್ರವೇ ಪೂರ್ಣಗೊಳ್ಳಲಿದೆ ಎನ್ನಲಾಗಿತ್ತು. ಆದರೆ, ಅದು ಸುಳ್ಳು ಸುದ್ದಿ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಸತ್ಯ

ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಾಗ್ಯಲಕ್ಷ್ಮೀ’; ಮೊದಲ ಸ್ಥಾನದಲ್ಲಿ ಯಾವ ಧಾರಾವಾಹಿ?

ಭಾಗ್ಯಲಕ್ಷ್ಮಿ-ಅಮೃತಧಾರೆ

ಭಾಗ್ಯಲಕ್ಷ್ಮಿ ಹಾಗೂ ಅಮೃತಧಾರೆ ಧಾರಾವಾಹಿಯ ಪ್ರಸಾರ ಸಮಯ ಒಂದೇ ಆಗಿದೆ. ಎರಡೂ ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಒಟ್ಟಿಗೇ ಇವೆ. ಎರಡೂ ಧಾರಾವಾಹಿಗಳಿಗೆ ಐದನೇ ಸ್ಥಾನ ಸಿಕ್ಕಿದೆ. ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ಸುದರ್ಶನ್, ಸುಷ್ಮಾ ರಾವ್ ಮೊದಲಾದವರು ನಟಿಸಿದ್ದಾರೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:48 am, Sat, 7 October 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!