AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾವಾಹಿ ಟಿಆರ್​ಪಿ: ‘ಭಾಗ್ಯಲಕ್ಷ್ಮಿ’ ಟಿಆರ್​ಪಿಯಲ್ಲಿ ಏರಿಕೆ; ಇಳಿಕೆ ಕಂಡ ‘ಪುಟ್ಟಕ್ಕನ ಮಕ್ಕಳು’ ಬೇಡಿಕೆ

ಭಾಗ್ಯಲಕ್ಷ್ಮಿ ಧಾರಾವಾಹಿ ಆರಂಭದಲ್ಲಿ ಭರ್ಜರಿ ಟಿಆರ್​ಪಿ ಪಡೆದುಕೊಳ್ಳುತ್ತಿತ್ತು. ಈಗ ಈ ಸೀರಿಯಲ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಂಬ್ಯಾಕ್ ಮಾಡಿದೆ. ಕಲರ್ಸ್ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್​ಪಿ ಪಡೆದ ಧಾರಾವಾಹಿ ಎನ್ನುವ ಜನಪ್ರಿಯತೆ ಈ ಧಾರಾವಾಹಿಗೆ ಸಿಕ್ಕಿದೆ. ಈ ವಾರ ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಧಾರಾವಾಹಿ ಟಿಆರ್​ಪಿ: ‘ಭಾಗ್ಯಲಕ್ಷ್ಮಿ’ ಟಿಆರ್​ಪಿಯಲ್ಲಿ ಏರಿಕೆ; ಇಳಿಕೆ ಕಂಡ ‘ಪುಟ್ಟಕ್ಕನ ಮಕ್ಕಳು’ ಬೇಡಿಕೆ
ಧಾರಾವಾಹಿ ಟಿಆರ್​ಪಿ
Follow us
ರಾಜೇಶ್ ದುಗ್ಗುಮನೆ
|

Updated on:Oct 07, 2023 | 10:11 AM

39ನೇ ವಾರದ ಟಿಆರ್​ಪಿ ಲಿಸ್ಟ್ ಹೊರಬಿದ್ದಿದೆ. ಕಳೆದ ವಾರಗಳಿಗೆ ಹೋಲಿಕೆ ಮಾಡಿಕೊಂಡರೆ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಕಂಬ್ಯಾಕ್ ಮಾಡಿದೆ. ಆರಂಭದಲ್ಲಿ ಭರ್ಜರಿ ಟಿಆರ್​ಪಿ (TRP) ಪಡೆದುಕೊಳ್ಳುತ್ತಿದ್ದ ಈ ಧಾರಾವಾಹಿ ಬಳಿಕ ಡಲ್ ಆಯಿತು. ಈಗ ಈ ಸೀರಿಯಲ್​ನಲ್ಲಿ ಒಳ್ಳೆಯ ರೀತಿಯಲ್ಲಿ ಕಂಬ್ಯಾಕ್ ಮಾಡಿದೆ. ಕಲರ್ಸ್ ಕನ್ನಡದಲ್ಲಿ ಅತಿ ಹೆಚ್ಚು ಟಿಆರ್​ಪಿ ಪಡೆದ ಧಾರಾವಾಹಿ ಎನ್ನುವ ಜನಪ್ರಿಯತೆ ಈ ಧಾರಾವಾಹಿಗೆ ಸಿಕ್ಕಿದೆ. ಈ ವಾರ ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ ಎನ್ನುವ ಬಗ್ಗೆ ಇಲ್ಲಿದೆ ವಿವರ.

ಪುಟ್ಟಕ್ಕನ ಮಕ್ಕಳು

ಉಮಾಶ್ರೀ ಮೊದಲಾದವರು ನಟಿಸುತ್ತಿರುವ ‘ಪುಟ್ಟಕ್ಕನ ಮಕ್ಕಳು’ ಇಷ್ಟು ದಿನ ಎರಡಂಕಿಯ ಟಿಆರ್​ಪಿ ಪಡೆದುಕೊಳ್ಳುತ್ತಿತ್ತು. ಆದರೆ, ಈಗ ಧಾರಾವಾಹಿಯ ಟಿಆರ್​ಪಿಯಲ್ಲಿ ಕೊಂಚ ಇಳಿಕೆ ಕಂಡಿದೆ. ಇದರ ಟಿಆರ್​ಪಿ ಎರಡಂಕಿಯಿಂದ ಒಂದಂಕಿಗೆ ಇಳಿದೆ. ಆದಾಗ್ಯೂ ಮೊದಲ ಸ್ಥಾನ ಮುಂದುವರಿಸಿಕೊಂಡು ಹೋಗುತ್ತಿದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಉಳಿದ ಧಾರಾವಾಹಿಗಳಿಗೆ ಕಠಿಣ ಪೈಪೋಟಿ ನೀಡುತ್ತಿದೆ. ‘ಸೀತಾ ರಾಮ’ ಧಾರಾವಾಹಿಯಲ್ಲಿ ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್, ಮುಖ್ಯಮಂತ್ರಿ ಚಂದ್ರು ಸೇರಿ ಅನೇಕ ಕಲಾವಿದರಿದ್ದಾರೆ. ಈ ಧಾರಾವಾಹಿ ಎರಡನೇ ಸ್ಥಾನ ಕಾಯ್ದುಕೊಂಡಿದೆ.

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿಯನ್ನು ಇಷ್ಟಪಡುವ ಅನೇಕರಿದ್ದಾರೆ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಸಾವಿರಾರು ಎಪಿಸೋಡ್ ಪೂರ್ಣಗೊಳಿಸಿದರೂ ಬೇಡಿಕೆ ಕುಗ್ಗಿಸಿಕೊಳ್ಳದೇ ಮುನ್ನುಗ್ಗುತ್ತಿದೆ. ಈ ಧಾರಾವಾಹಿಯಲ್ಲಿ ರಕ್ಷ್ ಹಾಗೂ ನಿಶಾ ರವಿಕೃಷ್ಣನ್ ಮೊದಲಾದವರು ನಟಿಸಿದ್ದಾರೆ. ಈ ಧಾರಾವಾಹಿ ಶೀಘ್ರವೇ ಪೂರ್ಣಗೊಳ್ಳಲಿದೆ ಎನ್ನಲಾಗಿತ್ತು. ಆದರೆ, ಅದು ಸುಳ್ಳು ಸುದ್ದಿ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಸತ್ಯ

ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಮತ್ತೆ ಟ್ರ್ಯಾಕ್​ಗೆ ಮರಳಿದ ‘ಭಾಗ್ಯಲಕ್ಷ್ಮೀ’; ಮೊದಲ ಸ್ಥಾನದಲ್ಲಿ ಯಾವ ಧಾರಾವಾಹಿ?

ಭಾಗ್ಯಲಕ್ಷ್ಮಿ-ಅಮೃತಧಾರೆ

ಭಾಗ್ಯಲಕ್ಷ್ಮಿ ಹಾಗೂ ಅಮೃತಧಾರೆ ಧಾರಾವಾಹಿಯ ಪ್ರಸಾರ ಸಮಯ ಒಂದೇ ಆಗಿದೆ. ಎರಡೂ ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಒಟ್ಟಿಗೇ ಇವೆ. ಎರಡೂ ಧಾರಾವಾಹಿಗಳಿಗೆ ಐದನೇ ಸ್ಥಾನ ಸಿಕ್ಕಿದೆ. ‘ಭಾಗ್ಯಲಕ್ಷ್ಮಿ’ ಧಾರಾವಾಹಿಯಲ್ಲಿ ಸುದರ್ಶನ್, ಸುಷ್ಮಾ ರಾವ್ ಮೊದಲಾದವರು ನಟಿಸಿದ್ದಾರೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ರಾಜೇಶ್ ನಟರಂಗ, ಛಾಯಾ ಸಿಂಗ್ ಮೊದಲಾದವರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:48 am, Sat, 7 October 23

ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕಮಲ್ ಹಾಸನ್ ಮೇಲೆ ಕನ್ನಡಿಗರ ಋಣ ಇದೆ, ಕ್ಷಮೆ ಕೇಳಬೇಕು: ಸಾಧುಕೋಕಿಲ
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಕರಾವಳಿ ಪ್ರಾಂತ್ಯದ ಅಲ್ಪಸಂಖ್ಯಾತರು ಆತಂಕದಲ್ಲಿದ್ದಾರೆ: ಡಿಕೆ ಶಿವಕುಮಾರ್
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಮಂಗಳೂರು: ಭಾರಿ ಮಳೆಗೆ ದ್ವೀಪದಂತಾದ ಜಪ್ಪಿನಮೊಗರು
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಕೋಮು ಗಲಭೆಗಳ ವಿಷಯದಲ್ಲಿ ಜಾಗರೂಕರಾಗಿರಲು ಅಧಿಕಾರಿಗಳಿಗೆ ಸಿಎಂ ಸೂಚನೆ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
Video: ಪ್ರಾಣ ಹೋದರೂ ಕೊಟ್ಟ ಮಾತು ತಪ್ಪೆನು: ಮೋದಿ
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸರ್ಕಾರ ಇನ್ನು ಸಹಿಸಲ್ಲ: ಪರಮೇಶ್ವರ್
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಲೂನ್​ಗೆ ನುಗ್ಗಿ ದಾಂದಲೆ: ಹಲ್ಲೆಗೊಳಗಾದ ವ್ಯಕ್ತಿ ಹೇಳಿದ್ದಿಷ್ಟು
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಸಿಕ್ಕಿಂ: ತೀಸ್ತಾ ನದಿಗೆ ಉರುಳಿದ ಬಸ್, ಇಬ್ಬರ ರಕ್ಷಣೆ, 9 ಮಂದಿ ನಾಪತ್ತೆ
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅಹ್ಮದಾಬಾದ್​​ನಲ್ಲಿ ಕನಡಿಗರ ಬಹುದಿನಗಳ ಆಸೆ ಈಡೇರಿಸುತ್ತಾ ಆರ್​ಸಿಬಿ? 
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!
ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!