AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿಗಳ ಮಧ್ಯೆ ಇದೆ ಭರ್ಜರಿ ಸ್ಪರ್ಧೆ; ಇಲ್ಲಿದೆ ಟಾಪ್​ ಐದು ಸೀರಿಯಲ್

ಕನ್ನಡ ಧಾರಾವಾಹಿಗಳ 10ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಬಾರಿಯೂ ‘ಲಕ್ಷ್ಮಿ ನಿವಾಸ’ (Lakshmi Nivasa) ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಲರ್ಸ್ ಕನ್ನಡದ ಯಾವ ಧಾರಾವಾಹಿಗಳೂ ಟಾಪ್ ಐದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಟಾಪ್ ಐದು ಧಾರಾವಾಹಿಗಳ ಬಗ್ಗೆ ಇಲ್ಲಿದೆ ವಿವರ.

ಟಿಆರ್​ಪಿ ರೇಸ್​ನಲ್ಲಿ ಈ ಧಾರಾವಾಹಿಗಳ ಮಧ್ಯೆ ಇದೆ ಭರ್ಜರಿ ಸ್ಪರ್ಧೆ; ಇಲ್ಲಿದೆ ಟಾಪ್​ ಐದು ಸೀರಿಯಲ್
ಸೀತಾ ರಾಮ-ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on: Mar 14, 2024 | 3:05 PM

Share

ಧಾರಾವಾಹಿಗಳ ಟಿಆರ್​ಪಿ ಬಗ್ಗೆ ವೀಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇರುತ್ತದೆ. ಯಾವ ಧಾರಾವಾಹಿ ಮೊದಲ ಸ್ಥಾನದಲ್ಲಿ ಇರುತ್ತದೆ, ಯಾವ ಧಾರಾವಾಹಿ ಟಾಪ್​ ಐದರಲ್ಲಿ ಇದೆ ಎಂಬಿತ್ಯಾದಿ ವಿಚಾರ ತಿಳಿದುಕೊಳ್ಳಲು ಫ್ಯಾನ್ಸ್ ಕಾತುರರಾಗಿರುತ್ತಾರೆ. ಈಗ ಕನ್ನಡ ಧಾರಾವಾಹಿಗಳ 10ನೇ ವಾರದ ಟಿಆರ್​ಪಿ ಲಿಸ್ಟ್ ಹೊರ ಬಿದ್ದಿದೆ. ಈ ಬಾರಿಯೂ ‘ಲಕ್ಷ್ಮಿ ನಿವಾಸ’ (Lakshmi Nivasa) ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಕಲರ್ಸ್ ಕನ್ನಡದ ಯಾವ ಧಾರಾವಾಹಿಗಳೂ ಟಾಪ್ ಐದರಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಟಾಪ್ ಐದು ಧಾರಾವಾಹಿಗಳ ಬಗ್ಗೆ ಇಲ್ಲಿದೆ ವಿವರ.

‘ಲಕ್ಷ್ಮಿ ನಿವಾಸ’

ಪಕ್ಕಾ ಮಧ್ಯಮ ವರ್ಗದವರ ಕಥೆಯನ್ನು ‘ಲಕ್ಷ್ಮಿ ನಿವಾಸ ಧಾರಾವಾಹಿ ಹೊಂದಿದೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ ತೋರಿಸಲಾಗಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜನ ಮೆಚ್ಚುಗೆ ಪಡೆದಿದೆ. ಹಲವು ಎಪಿಸೋಡ್​ಗಳನ್ನು ಪೂರ್ಣಗೊಳಿಸಿರುವ ಈ ಧಾರಾವಾಹಿ ಹಳ್ಳಿ ಸೊಗಡಿನಲ್ಲಿ ಮೂಡಿ ಬರುತ್ತಿದೆ. ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಉಮಾಶ್ರೀ ಮೊದಲಾದವರು ಮುಖ್ಯಭೂಮಿಕೆಯಲ್ಲಿ ಇದ್ದಾರೆ.

ಶ್ರೀರಸ್ತು ಶುಭಮಸ್ತು

‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಟಿಆರ್​ಪಿಯಲ್ಲಿ ‘ಪುಟ್ಟಕನ ಮಕ್ಕಳು’ ಜೊತೆ ಟಫ್ ಫೈಟ್ ನೀಡುತ್ತಿದೆ. ಮೂರನೇ ಸ್ಥಾನದಲ್ಲಿ ಇರುವ ಈ ಧಾರಾವಾಹಿ ಸಖತ್ ಕಾಂಪಿಟೇಷನ್ ನೀಡುತ್ತಿದೆ. ಈ ಧಾರಾವಾಹಿ ವೀಕ್ಷಕರಿಗೆ ಹೆಚ್ಚು ಇಷ್ಟ ಆಗಿದೆ.

ಸತ್ಯ

‘ಸತ್ಯ’ ಧಾರಾವಾಹಿ ಕಳೆದ ವಾರ ಐದನೇ ಸ್ಥಾನದಲ್ಲಿ ಇತ್ತು. ಈ ಬಾರಿ ಧಾರಾವಾಹಿ ನಾಲ್ಕನೇ ಸ್ಥಾನಕ್ಕೆ ಬಂದಿದೆ. ಈ ಧಾರಾವಾಹಿಯೂ ವೀಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿರೋ ಟಾಪ್​ ಐದು ಕನ್ನಡದ ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ

ಐದನೇ ಸ್ಥಾನ

ಐದನೇ ಸ್ಥಾನದಲ್ಲಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ನಟನೆಯ ‘ಅಮೃತಧಾರೆ’ ಹಾಗೂ ಗಗನ್ ಚಿನ್ನಪ್ಪ ಮತ್ತು ವೈಷ್ಣವಿ ಗೌಡ ನಟನೆಯ ‘ಸೀತಾ ರಾಮ’ ಇದೆ. ಎರಡೂ ಧಾರಾವಾಹಿಗಳ ಮಧ್ಯೆ ಸಮಬಲದ ಸ್ಪರ್ಧೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು