AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Serial TRP List 2023: ‘ಅಮೃತಧಾರೆ’ ಟಿಆರ್​ಪಿ ಏರಿಕೆ; ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ಇಲ್ಲಿದೆ ವಿವರ

Kannada Serial TRP: ‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಧಾರಾವಾಹಿಯಲ್ಲಿ ಬಾಲಕಿ ರೀತು ಸಿಂಗ್ ನಟನೆ ಗಮನ ಸೆಳೆಯುತ್ತಿದೆ. ಅಷ್ಟೇ ಅಲ್ಲ, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ಅಶೋಕ್, ಮುಖ್ಯಮಂತ್ರಿ ಚಂದ್ರು, ಪೂಜಾ ಲೋಕೇಶ್ ಮಾಗಿದ ನಟನೆ ತೋರುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Kannada Serial TRP List 2023: ‘ಅಮೃತಧಾರೆ’ ಟಿಆರ್​ಪಿ ಏರಿಕೆ; ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ಇಲ್ಲಿದೆ ವಿವರ
ಸೀತಾ ರಾಮ-ಅಮೃತಧಾರೆ
Follow us
ರಾಜೇಶ್ ದುಗ್ಗುಮನೆ
|

Updated on:Sep 14, 2023 | 1:11 PM

ಪ್ರತಿ ಗುರುವಾರ ಸಿರಿಯಲ್ ಟಿಆರ್​ಪಿ (Serial TRP) ಪಟ್ಟಿ ಬಿಡುಗಡೆ ಆಗುತ್ತದೆ. ಈ ವಾರ ಟಾಪ್​ನಲ್ಲಿದ್ದ ಧಾರಾವಾಹಿಗಳು ಮುಂದಿನ ವಾರವೂ ಟಾಪ್​ನಲ್ಲಿ ಬರುತ್ತವೆ ಎನ್ನುವ ಯಾವುದೇ ಗ್ಯಾರಂಟಿ ಇಲ್ಲ. ಪ್ರತಿ ವಾರ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಆದರೆ, ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳಿಂದ ಮೊದಲ ಸ್ಥಾನದಲ್ಲಿ ಮುಂದೆ ಸಾಗುತ್ತಿದೆ. ಹಾಗಾದರೆ, ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ‘ಅಮೃತಧಾರೆ’ ಧಾರಾವಾಹಿಯ ಮದುವೆ ಎಪಿಸೋಡ್ ಸಹಕಾರಿ ಆಯಿತೇ? ಆ ಬಗ್ಗೆ 36ನೇ ವಾರದ ಡೇಟಾದಲ್ಲಿದೆ ಮಾಹಿತಿ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮಂಡ್ಯ ಭಾಷೆಯ ಸೊಗಡಿನಲ್ಲಿ ಮೂಡಿ ಬರುತ್ತಿರುವ ಧಾರಾವಾಹಿ. ಈ ಧಾರಾವಾಹಿ ಹಳ್ಳಿಯ ಮಂದಿಯನ್ನು ಸಾಕಷ್ಟು ಆಕರ್ಷಿಸಿದೆ. ಉಮಾಶ್ರೀ ಅವರ ನಟನೆಗೆ ಎಲ್ಲರೂ ಭೇಷ್ ಎನ್ನುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಸಂಜನಾ, ಮಂಜು ಭಾಷಿಣಿ ಮೊದಲಾದವರು ನಟಿಸಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಧಾರಾವಾಹಿಯಲ್ಲಿ ಬಾಲಕಿ ರೀತು ಸಿಂಗ್ ನಟನೆ ಗಮನ ಸೆಳೆಯುತ್ತಿದೆ. ಅಷ್ಟೇ ಅಲ್ಲ, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ಅಶೋಕ್, ಮುಖ್ಯಮಂತ್ರಿ ಚಂದ್ರು, ಪೂಜಾ ಲೋಕೇಶ್ ಮಾಗಿದ ನಟನೆ ತೋರುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಅಮೃತಧಾರೆ

ಅಮೃತಧಾರೆ ಧಾರಾವಾಹಿ ಕಳೆದ ಬಾರಿ ಐದನೇ ಸ್ಥಾನಕ್ಕೆ ಹೋಗಿತ್ತು. ಆದರೆ, ಈ ಬಾರಿ ಟಿಆರ್​ಪಿಯಲ್ಲಿ ಏರಿಕೆ ಕಂಡಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ಮದುವೆ ಎಪಿಸೋಡ್​ ಹೈಲೈಟ್ ಆಗಿದೆ. ಈ ಕಾರಣಕ್ಕೆ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

ಇದನ್ನೂ ಓದಿ: ಹೊಸ ಸಿನಿಮಾ ಘೋಷಿಸಿದ ‘ಗಟ್ಟಿಮೇಳ’ ರಕ್ಷ್; ‘ಜೆಮ್ಸ್’ ಖ್ಯಾತಿಯ ಚೇತನ್ ನಿರ್ದೇಶನದಲ್ಲಿ ‘ಬರ್ಮ’  

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿಯ ಟಿಆರ್​ಪಿ ಕಡಿಮೆ ಆಗುತ್ತಿಲ್ಲ. ಈ ಧಾರಾವಾಹಿಯಲ್ಲಿ ಎಲ್ಲರೂ ಉತ್ತಮ ನಟನೆ ತೋರುತ್ತಿದ್ದಾರೆ. ಧಾರಾವಾಹಿ ಸಾವಿರಾರು ಎಪಿಸೋಡ್ ಪೂರ್ಣಗೊಳಿಸಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿ ಇದೆ.

ಸತ್ಯ

‘ಸತ್ಯ’ ಧಾರಾವಾಹಿ ಕೂಡ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಆರನೇ ಸ್ಥಾನದಲ್ಲಿರುವ ‘ಶ್ರೀರಸ್ತು ಶುಭಮಸ್ತು’  ಹಾಗೂ ‘ಸತ್ಯ’ ಧಾರಾವಾಹಿ ಮಧ್ಯೆ ಭರ್ಜರಿ ಸ್ಪರ್ಧೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:11 pm, Thu, 14 September 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ