AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Serial TRP List 2023: ‘ಅಮೃತಧಾರೆ’ ಟಿಆರ್​ಪಿ ಏರಿಕೆ; ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ಇಲ್ಲಿದೆ ವಿವರ

Kannada Serial TRP: ‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಧಾರಾವಾಹಿಯಲ್ಲಿ ಬಾಲಕಿ ರೀತು ಸಿಂಗ್ ನಟನೆ ಗಮನ ಸೆಳೆಯುತ್ತಿದೆ. ಅಷ್ಟೇ ಅಲ್ಲ, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ಅಶೋಕ್, ಮುಖ್ಯಮಂತ್ರಿ ಚಂದ್ರು, ಪೂಜಾ ಲೋಕೇಶ್ ಮಾಗಿದ ನಟನೆ ತೋರುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಎರಡನೇ ಸ್ಥಾನದಲ್ಲಿದೆ.

Kannada Serial TRP List 2023: ‘ಅಮೃತಧಾರೆ’ ಟಿಆರ್​ಪಿ ಏರಿಕೆ; ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ಇಲ್ಲಿದೆ ವಿವರ
ಸೀತಾ ರಾಮ-ಅಮೃತಧಾರೆ
ರಾಜೇಶ್ ದುಗ್ಗುಮನೆ
|

Updated on:Sep 14, 2023 | 1:11 PM

Share

ಪ್ರತಿ ಗುರುವಾರ ಸಿರಿಯಲ್ ಟಿಆರ್​ಪಿ (Serial TRP) ಪಟ್ಟಿ ಬಿಡುಗಡೆ ಆಗುತ್ತದೆ. ಈ ವಾರ ಟಾಪ್​ನಲ್ಲಿದ್ದ ಧಾರಾವಾಹಿಗಳು ಮುಂದಿನ ವಾರವೂ ಟಾಪ್​ನಲ್ಲಿ ಬರುತ್ತವೆ ಎನ್ನುವ ಯಾವುದೇ ಗ್ಯಾರಂಟಿ ಇಲ್ಲ. ಪ್ರತಿ ವಾರ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಆದರೆ, ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹಲವು ತಿಂಗಳಿಂದ ಮೊದಲ ಸ್ಥಾನದಲ್ಲಿ ಮುಂದೆ ಸಾಗುತ್ತಿದೆ. ಹಾಗಾದರೆ, ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ? ‘ಅಮೃತಧಾರೆ’ ಧಾರಾವಾಹಿಯ ಮದುವೆ ಎಪಿಸೋಡ್ ಸಹಕಾರಿ ಆಯಿತೇ? ಆ ಬಗ್ಗೆ 36ನೇ ವಾರದ ಡೇಟಾದಲ್ಲಿದೆ ಮಾಹಿತಿ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮಂಡ್ಯ ಭಾಷೆಯ ಸೊಗಡಿನಲ್ಲಿ ಮೂಡಿ ಬರುತ್ತಿರುವ ಧಾರಾವಾಹಿ. ಈ ಧಾರಾವಾಹಿ ಹಳ್ಳಿಯ ಮಂದಿಯನ್ನು ಸಾಕಷ್ಟು ಆಕರ್ಷಿಸಿದೆ. ಉಮಾಶ್ರೀ ಅವರ ನಟನೆಗೆ ಎಲ್ಲರೂ ಭೇಷ್ ಎನ್ನುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಸಂಜನಾ, ಮಂಜು ಭಾಷಿಣಿ ಮೊದಲಾದವರು ನಟಿಸಿದ್ದಾರೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಧಾರಾವಾಹಿಯಲ್ಲಿ ಬಾಲಕಿ ರೀತು ಸಿಂಗ್ ನಟನೆ ಗಮನ ಸೆಳೆಯುತ್ತಿದೆ. ಅಷ್ಟೇ ಅಲ್ಲ, ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ಅಶೋಕ್, ಮುಖ್ಯಮಂತ್ರಿ ಚಂದ್ರು, ಪೂಜಾ ಲೋಕೇಶ್ ಮಾಗಿದ ನಟನೆ ತೋರುತ್ತಿದ್ದಾರೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಅಮೃತಧಾರೆ

ಅಮೃತಧಾರೆ ಧಾರಾವಾಹಿ ಕಳೆದ ಬಾರಿ ಐದನೇ ಸ್ಥಾನಕ್ಕೆ ಹೋಗಿತ್ತು. ಆದರೆ, ಈ ಬಾರಿ ಟಿಆರ್​ಪಿಯಲ್ಲಿ ಏರಿಕೆ ಕಂಡಿದೆ. ‘ಅಮೃತಧಾರೆ’ ಧಾರಾವಾಹಿಯಲ್ಲಿ ಗೌತಮ್ ಹಾಗೂ ಭೂಮಿಕಾ ಮದುವೆ ಎಪಿಸೋಡ್​ ಹೈಲೈಟ್ ಆಗಿದೆ. ಈ ಕಾರಣಕ್ಕೆ ಧಾರಾವಾಹಿಯ ಟಿಆರ್​ಪಿ ಹೆಚ್ಚಿದೆ.

ಇದನ್ನೂ ಓದಿ: ಹೊಸ ಸಿನಿಮಾ ಘೋಷಿಸಿದ ‘ಗಟ್ಟಿಮೇಳ’ ರಕ್ಷ್; ‘ಜೆಮ್ಸ್’ ಖ್ಯಾತಿಯ ಚೇತನ್ ನಿರ್ದೇಶನದಲ್ಲಿ ‘ಬರ್ಮ’  

ಗಟ್ಟಿಮೇಳ

‘ಗಟ್ಟಿಮೇಳ’ ಧಾರಾವಾಹಿಯ ಟಿಆರ್​ಪಿ ಕಡಿಮೆ ಆಗುತ್ತಿಲ್ಲ. ಈ ಧಾರಾವಾಹಿಯಲ್ಲಿ ಎಲ್ಲರೂ ಉತ್ತಮ ನಟನೆ ತೋರುತ್ತಿದ್ದಾರೆ. ಧಾರಾವಾಹಿ ಸಾವಿರಾರು ಎಪಿಸೋಡ್ ಪೂರ್ಣಗೊಳಿಸಿದೆ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿ ಇದೆ.

ಸತ್ಯ

‘ಸತ್ಯ’ ಧಾರಾವಾಹಿ ಕೂಡ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಐದನೇ ಸ್ಥಾನದಲ್ಲಿದೆ. ಆರನೇ ಸ್ಥಾನದಲ್ಲಿರುವ ‘ಶ್ರೀರಸ್ತು ಶುಭಮಸ್ತು’  ಹಾಗೂ ‘ಸತ್ಯ’ ಧಾರಾವಾಹಿ ಮಧ್ಯೆ ಭರ್ಜರಿ ಸ್ಪರ್ಧೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:11 pm, Thu, 14 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ದಿಢೀರ್​​ ಜಮೀರ್​ ಅಹ್ಮದ್​​ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್