AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿ ರೇಸ್​ನಲ್ಲಿರೋ ಟಾಪ್​ ಐದು ಕನ್ನಡದ ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ

Kannada Serial TRP: ಮಧ್ಯಮ ವರ್ಗದ ಕುಟುಂಬದ ಕಥೆ ‘ಲಕ್ಷ್ಮೀ ನಿವಾಸ. ಎರಡು ಹೆಣ್ಣುಮಕ್ಕಳಿಗೆ ಮದುವೆ ಮಾಡಬೇಕು ಎನ್ನುವ ಪ್ರಯತ್ನದಲ್ಲಿರುವ ವ್ಯಕ್ತಿಯ ಕಥೆಯನ್ನು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಒಟ್ಟಾರೆಯಾಗಿ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ನಗರ ಹಾಗೂ ಗ್ರಾಮಗಳ ಭಾಗದ ಜನರಿಗೆ ಧಾರಾವಾಹಿ ಹೆಚ್ಚು ಇಷ್ಟ ಆಗಿದೆ.

ಟಿಆರ್​ಪಿ ರೇಸ್​ನಲ್ಲಿರೋ ಟಾಪ್​ ಐದು ಕನ್ನಡದ ಧಾರಾವಾಹಿಗಳ ಬಗ್ಗೆ ಇಲ್ಲಿದೆ ಮಾಹಿತಿ
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Mar 07, 2024 | 3:03 PM

Share

ಪ್ರತಿ ಗುರುವಾರ ಧಾರಾವಾಹಿಗಳ ಟಿಆರ್​ಪಿ (Kannada Serial TRP) ಹೊರ ಬರುತ್ತದೆ. ಪ್ರತಿ ವಾರವೂ ಟಿಆರ್​ಪಿಯಲ್ಲಿ ಸಾಕಷ್ಟು ಬದಲಾವಣೆ ಇದ್ದೇ ಇರುತ್ತದೆ. ಒಂದು ವಾರ ಟಾಪ್​ನಲ್ಲಿರೋ ಧಾರಾವಾಹಿಯ ಟಿಆರ್​ಪಿಯಲ್ಲಿ ಬದಲಾವಣೆ ಆಗಬಹುದು. ಆಯಾ ವಾರ ಯಾವ ರೀತಿಯಲ್ಲಿ ಕಥೆ ಮೂಡಿ ಬಂದಿದೆ ಎಂಬುದರ ಆಧಾರದ ಮೇಲೆ ಟಿಆರ್​ಪಿ ನಿಗದಿ ಆಗುತ್ತದೆ. ಈ ವಾರ ಟಾಪ್ ಐದು ಧಾರಾವಾಹಿಗಳ ಸಾಲಿನಲ್ಲಿ ಎಲ್ಲವೂ ಜೀ ಕನ್ನಡದ ಧಾರಾವಾಹಿಗಳೇ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ. ಆ ಬಗ್ಗೆ ಇಲ್ಲಿದೆ ವಿವರ.

ಲಕ್ಷ್ಮೀ ನಿವಾಸ

ಪಕ್ಕಾ ಮಧ್ಯಮ ವರ್ಗದ ಕುಟುಂಬದ ಕಥೆ ‘ಲಕ್ಷ್ಮೀ ನಿವಾಸ. ಎರಡು ಹೆಣ್ಣುಮಕ್ಕಳಿಗೆ ಮದುವೆ ಮಾಡಬೇಕು ಎನ್ನುವ ಪ್ರಯತ್ನದಲ್ಲಿರುವ ವ್ಯಕ್ತಿಯ ಕಥೆಯನ್ನು ‘ಲಕ್ಷ್ಮೀ ನಿವಾಸ’ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಒಟ್ಟಾರೆಯಾಗಿ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿದಿದೆ. ನಗರ ಹಾಗೂ ಗ್ರಾಮಗಳ ಭಾಗದ ಜನರಿಗೆ ಧಾರಾವಾಹಿ ಹೆಚ್ಚು ಇಷ್ಟ ಆಗಿದೆ.

ಪುಟ್ಟಕ್ಕನ ಮಕ್ಕಳು

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿಗೂ ಮೊದಲು ಟಿಆರ್​ಪಿಯಲ್ಲಿ ಈ ಧಾರಾವಾಹಿಗೆ ಮೊದಲ ಸ್ಥಾನ ಸಿಗುತ್ತಿತ್ತು. ಉಮಾಶ್ರೀ ಮೊದಲಾದವರು ನಟಿಸಿದ ಈ ಧಾರಾವಾಹಿ ಈಗ ಎರಡನೇ ಸ್ಥಾನದಲ್ಲಿ ಮುನ್ನಡೆಯುತ್ತಿದೆ.

ಅಮೃತಧಾರೆ

ಆಸ್ತಿ-ಅಂತಸ್ತಿನ ವಿಚಾರದಲ್ಲಿ ಅಜಗಜಾಂತರ ಇರುವ ಎರಡು ಕುಟುಂಬಗಳ ಮಧ್ಯೆ ಸಂಬಂಧ ಬೆಳೆಯುವ ಕಥೆ ‘ಅಮೃತಧಾರೆ’. ಇಲ್ಲಿ ಆಸ್ತಿ ಮಾತ್ರವಲ್ಲ ಕಥಾ ನಾಯಕ ಹಾಗೂ ಕಥಾ ನಾಯಕಿಗೆ ಮದುವೆ ವಯಸ್ಸು ಕೂಡ ಮೀರಿರುತ್ತದೆ. ಸದಾ ಕಿತ್ತಾಡುವ ಇವರ ಮಧ್ಯೆ ಈಗ ನಿಧಾನವಾಗಿ ಪ್ರೀತಿ ಮೂಡುತ್ತಿದೆ.

ಇದನ್ನೂ ಓದಿ: ಟ್ರೆಡಿಷನಲ್​ ಲುಕ್​ನಲ್ಲಿ ಗಮನ ಸೆಳೆದ ‘ಸೀತಾ ರಾಮ’ ಸುಂದರಿ ವೈಷ್ಣವಿ

ಸೀತಾ ರಾಮ

ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ಜೊತೆಯಾಗಿ ನಟಿಸಿರೋ ಧಾರಾವಾಹಿ ‘ಸೀತಾ ರಾಮ’. ಇಬ್ಬರ ಮಧ್ಯೆ ಪ್ರೀತಿ ಮೂಡುತ್ತಿದೆ. ಈ ಧಾರಾವಾಹಿ ಇತ್ತೀಚೆಗೆ ಮತ್ತೆ ಜನರ ಫೇವರಿಟ್ ಎನಿಸಿಕೊಂಡಿದೆ. ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ.

ಉಳಿದ ಧಾರಾವಾಹಿ

‘ಸತ್ಯ’ ಧಾರಾವಾಹಿ ಐದನೇ ಸ್ಥಾನದಲ್ಲಿ ಇದೆ. ಆರನೇ ಸ್ಥಾನದಲ್ಲಿ ಜೀ ಕನ್ನಡದ ‘ಶ್ರೀರಸ್ತು ಶುಭಮಸ್ತು’ ಹಾಗೂ ಕಲರ್ಸ್ ಕನ್ನಡದ ‘ರಾಮಾಚಾರಿ’ ಧಾರಾವಾಹಿಗಳು ಇವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?