AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ‘ಸೀತಾ ರಾಮ’ ಧಾರಾವಾಹಿಗೆ ಈ ಮೊದಲಿಗಿಂತಲೂ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?
ಸೀತಾ-ರಾಮ
ರಾಜೇಶ್ ದುಗ್ಗುಮನೆ
|

Updated on:Jul 11, 2024 | 2:52 PM

Share

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರುತ್ತಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಟಿಆರ್​ಪಿಯಲ್ಲಿ ಭರ್ಜರಿಯಾಗಿ ಏರಿಕೆ ಕಂಡಿದೆ. ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲೂ ಸಾಕಷ್ಟು ಏರಿಳಿತ ಕಾಣಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈಗ 27ನೇ ವಾರದ ಟಿಆರ್​ಪಿಯಲ್ಲಿ ‘ಪುಟ್ಟಕನ ಮಕ್ಕಳು’ ಹಾಗೂ ‘ಲಕ್ಷ್ಮಿ ನಿವಾಸ’ ಧಾರಾವಾಹಿ ಸರಿ ಸಮಾನವಾದ ಟಿಆರ್​ಪಿ ಪಡೆದುಕೊಂಡಿವೆ. ಈ ಮೂಲಕ ಎರಡೂ ಧಾರಾವಾಹಿಗೆ ಮೊದಲ ಸ್ಥಾಮ ಸಿಕ್ಕಿದೆ. ‘ಲಕ್ಷ್ಮಿ ನಿವಾಸ’ದಲ್ಲಿ ಕಥಾ ನಾಯಕಿ ಭಾವನಾಗೆ ಸಿದ್ದು ತಾಳಿ ಕಟ್ಟಿ ಹೋಗಿದ್ದಾನೆ. ಈ ಮೂಲಕ ಕಥೆ ಪ್ರಮುಖ ಟ್ವಿಸ್ಟ್ ಪಡೆದು ಸಾಗುತ್ತಿದೆ. ಇದರಿಂದ ಜನರು ಧಾರಾವಾಹಿಯನ್ನು ಹೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ: ಧಾರಾವಾಹಿಗಳ ಟಿಆರ್​ಪಿ; ಟಾಪ್​ 10 ಪಟ್ಟಿಯಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿ ಇದೆಯೇ ನೋಡಿ

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮದುವೆ ಬಳಿಕ ಗೌತಮ್ ಹಾಗೂ ಭೂಮಿಕಾ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯುತ್ತಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇದು ಧಾರಾವಾಹಿಯಲ್ಲಿ ಹೈಲೈಟ್ ಆಗುತ್ತಿದೆ. ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಹಾಗೂ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಗಳು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Thu, 11 July 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?