AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ‘ಸೀತಾ ರಾಮ’ ಧಾರಾವಾಹಿಗೆ ಈ ಮೊದಲಿಗಿಂತಲೂ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?
ಸೀತಾ-ರಾಮ
Follow us
ರಾಜೇಶ್ ದುಗ್ಗುಮನೆ
|

Updated on:Jul 11, 2024 | 2:52 PM

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರುತ್ತಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಟಿಆರ್​ಪಿಯಲ್ಲಿ ಭರ್ಜರಿಯಾಗಿ ಏರಿಕೆ ಕಂಡಿದೆ. ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲೂ ಸಾಕಷ್ಟು ಏರಿಳಿತ ಕಾಣಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈಗ 27ನೇ ವಾರದ ಟಿಆರ್​ಪಿಯಲ್ಲಿ ‘ಪುಟ್ಟಕನ ಮಕ್ಕಳು’ ಹಾಗೂ ‘ಲಕ್ಷ್ಮಿ ನಿವಾಸ’ ಧಾರಾವಾಹಿ ಸರಿ ಸಮಾನವಾದ ಟಿಆರ್​ಪಿ ಪಡೆದುಕೊಂಡಿವೆ. ಈ ಮೂಲಕ ಎರಡೂ ಧಾರಾವಾಹಿಗೆ ಮೊದಲ ಸ್ಥಾಮ ಸಿಕ್ಕಿದೆ. ‘ಲಕ್ಷ್ಮಿ ನಿವಾಸ’ದಲ್ಲಿ ಕಥಾ ನಾಯಕಿ ಭಾವನಾಗೆ ಸಿದ್ದು ತಾಳಿ ಕಟ್ಟಿ ಹೋಗಿದ್ದಾನೆ. ಈ ಮೂಲಕ ಕಥೆ ಪ್ರಮುಖ ಟ್ವಿಸ್ಟ್ ಪಡೆದು ಸಾಗುತ್ತಿದೆ. ಇದರಿಂದ ಜನರು ಧಾರಾವಾಹಿಯನ್ನು ಹೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ: ಧಾರಾವಾಹಿಗಳ ಟಿಆರ್​ಪಿ; ಟಾಪ್​ 10 ಪಟ್ಟಿಯಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿ ಇದೆಯೇ ನೋಡಿ

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮದುವೆ ಬಳಿಕ ಗೌತಮ್ ಹಾಗೂ ಭೂಮಿಕಾ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯುತ್ತಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇದು ಧಾರಾವಾಹಿಯಲ್ಲಿ ಹೈಲೈಟ್ ಆಗುತ್ತಿದೆ. ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಹಾಗೂ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಗಳು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Thu, 11 July 24

ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!