AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ‘ಸೀತಾ ರಾಮ’ ಧಾರಾವಾಹಿಗೆ ಈ ಮೊದಲಿಗಿಂತಲೂ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?
ಸೀತಾ-ರಾಮ
ರಾಜೇಶ್ ದುಗ್ಗುಮನೆ
|

Updated on:Jul 11, 2024 | 2:52 PM

Share

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರುತ್ತಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಟಿಆರ್​ಪಿಯಲ್ಲಿ ಭರ್ಜರಿಯಾಗಿ ಏರಿಕೆ ಕಂಡಿದೆ. ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲೂ ಸಾಕಷ್ಟು ಏರಿಳಿತ ಕಾಣಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈಗ 27ನೇ ವಾರದ ಟಿಆರ್​ಪಿಯಲ್ಲಿ ‘ಪುಟ್ಟಕನ ಮಕ್ಕಳು’ ಹಾಗೂ ‘ಲಕ್ಷ್ಮಿ ನಿವಾಸ’ ಧಾರಾವಾಹಿ ಸರಿ ಸಮಾನವಾದ ಟಿಆರ್​ಪಿ ಪಡೆದುಕೊಂಡಿವೆ. ಈ ಮೂಲಕ ಎರಡೂ ಧಾರಾವಾಹಿಗೆ ಮೊದಲ ಸ್ಥಾಮ ಸಿಕ್ಕಿದೆ. ‘ಲಕ್ಷ್ಮಿ ನಿವಾಸ’ದಲ್ಲಿ ಕಥಾ ನಾಯಕಿ ಭಾವನಾಗೆ ಸಿದ್ದು ತಾಳಿ ಕಟ್ಟಿ ಹೋಗಿದ್ದಾನೆ. ಈ ಮೂಲಕ ಕಥೆ ಪ್ರಮುಖ ಟ್ವಿಸ್ಟ್ ಪಡೆದು ಸಾಗುತ್ತಿದೆ. ಇದರಿಂದ ಜನರು ಧಾರಾವಾಹಿಯನ್ನು ಹೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ: ಧಾರಾವಾಹಿಗಳ ಟಿಆರ್​ಪಿ; ಟಾಪ್​ 10 ಪಟ್ಟಿಯಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿ ಇದೆಯೇ ನೋಡಿ

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮದುವೆ ಬಳಿಕ ಗೌತಮ್ ಹಾಗೂ ಭೂಮಿಕಾ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯುತ್ತಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇದು ಧಾರಾವಾಹಿಯಲ್ಲಿ ಹೈಲೈಟ್ ಆಗುತ್ತಿದೆ. ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಹಾಗೂ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಗಳು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Thu, 11 July 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​