AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?

‘ಸೀತಾ ರಾಮ’ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ‘ಸೀತಾ ರಾಮ’ ಧಾರಾವಾಹಿಗೆ ಈ ಮೊದಲಿಗಿಂತಲೂ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು.

‘ಸೀತಾ ರಾಮ’ ಟಿಆರ್​ಪಿಯಲ್ಲಿ ಭರ್ಜರಿ ಏರಿಕೆ; ಉಳಿದ ಧಾರಾವಾಹಿಗಳ ಕಥೆ ಏನು?
ಸೀತಾ-ರಾಮ
ರಾಜೇಶ್ ದುಗ್ಗುಮನೆ
|

Updated on:Jul 11, 2024 | 2:52 PM

Share

‘ಸೀತಾ ರಾಮ’ ಧಾರಾವಾಹಿ ಪ್ರಮುಖ ಘಟ್ಟ ತಲುಪಿದೆ. ಈ ಧಾರಾವಾಹಿಯ ಪ್ರಮುಖ ಪಾತ್ರಧಾರಿಗಳಾದ ಸೀತಾ ಹಾಗೂ ರಾಮ್​ ಮದುವೆ ನೆರವೇರುತ್ತಿದೆ. ಇದಕ್ಕಾಗಿ ಭರ್ಜರಿ ಸೆಟ್ ಹಾಕಲಾಗಿದೆ. ಅದ್ದೂರಿ ಮದುವೆ ಸಮಾರಂಭಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗುತ್ತಿದೆ. ಈ ಕಾರಣದಿಂದಲೇ ಧಾರಾವಾಹಿ ಟಿಆರ್​ಪಿಯಲ್ಲಿ ಭರ್ಜರಿಯಾಗಿ ಏರಿಕೆ ಕಂಡಿದೆ. ಉಳಿದ ಧಾರಾವಾಹಿಗಳ ಟಿಆರ್​ಪಿಯಲ್ಲೂ ಸಾಕಷ್ಟು ಏರಿಳಿತ ಕಾಣಿಸಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಳೆದ ಕೆಲ ವಾರಗಳಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಳ್ಳುತ್ತಾ ಬರುತ್ತಿತ್ತು. ಈಗ 27ನೇ ವಾರದ ಟಿಆರ್​ಪಿಯಲ್ಲಿ ‘ಪುಟ್ಟಕನ ಮಕ್ಕಳು’ ಹಾಗೂ ‘ಲಕ್ಷ್ಮಿ ನಿವಾಸ’ ಧಾರಾವಾಹಿ ಸರಿ ಸಮಾನವಾದ ಟಿಆರ್​ಪಿ ಪಡೆದುಕೊಂಡಿವೆ. ಈ ಮೂಲಕ ಎರಡೂ ಧಾರಾವಾಹಿಗೆ ಮೊದಲ ಸ್ಥಾಮ ಸಿಕ್ಕಿದೆ. ‘ಲಕ್ಷ್ಮಿ ನಿವಾಸ’ದಲ್ಲಿ ಕಥಾ ನಾಯಕಿ ಭಾವನಾಗೆ ಸಿದ್ದು ತಾಳಿ ಕಟ್ಟಿ ಹೋಗಿದ್ದಾನೆ. ಈ ಮೂಲಕ ಕಥೆ ಪ್ರಮುಖ ಟ್ವಿಸ್ಟ್ ಪಡೆದು ಸಾಗುತ್ತಿದೆ. ಇದರಿಂದ ಜನರು ಧಾರಾವಾಹಿಯನ್ನು ಹೆಚ್ಚು ವೀಕ್ಷಿಸುತ್ತಿದ್ದಾರೆ.

ಎರಡನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿ ಮದುವೆ ಕಾರಣಕ್ಕೆ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಮೊದಲಿಗಿಂತಲೂ ‘ಸೀತಾ ರಾಮ’ ಧಾರಾವಾಹಿಗೆ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ ಅನ್ನೋದು ವಿಶೇಷ. ಸೀತಾ ಹಾಗೂ ರಾಮನ ಮದುವೆ ಸಂಭ್ರಮವೇ ಇದಕ್ಕೆ ಕಾರಣ ಎಂದರೂ ತಪ್ಪಾಗಲಾರದು. ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ.

ಇದನ್ನೂ ಓದಿ: ಧಾರಾವಾಹಿಗಳ ಟಿಆರ್​ಪಿ; ಟಾಪ್​ 10 ಪಟ್ಟಿಯಲ್ಲಿ ನಿಮ್ಮ ನೆಚ್ಚಿನ ಧಾರಾವಾಹಿ ಇದೆಯೇ ನೋಡಿ

ನಾಲ್ಕನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಮದುವೆ ಬಳಿಕ ಗೌತಮ್ ಹಾಗೂ ಭೂಮಿಕಾ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆಯುತ್ತಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ಇದು ಧಾರಾವಾಹಿಯಲ್ಲಿ ಹೈಲೈಟ್ ಆಗುತ್ತಿದೆ. ಐದನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಹಾಗೂ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿಗಳು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:42 pm, Thu, 11 July 24

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ