AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಗ್ಗಿತು ‘ಪುಟ್ಟಕ್ಕನ ಮಕ್ಕಳು’ ಟಿಆರ್​ಪಿ; ಹೊಸ ಧಾರಾವಾಹಿಗಳ ಕಥೆ ಏನು?

ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಕಳೆದ ಬಾರಿ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇರುತ್ತಿತ್ತು. ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಕುಸಿತ ಕಂಡಿರುವುದರಿಂದ ಮೊದಲ ಸ್ಥಾನ ‘ಲಕ್ಷ್ಮೀ ನಿವಾಸ’ದ ಪಾಲಾಗಿದೆ. ಈ ಧಾರಾವಾಹಿ ಮುಂದಿನ ಕೆಲ ವಾರ ಮೊದಲ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಕುಗ್ಗಿತು ‘ಪುಟ್ಟಕ್ಕನ ಮಕ್ಕಳು’ ಟಿಆರ್​ಪಿ; ಹೊಸ ಧಾರಾವಾಹಿಗಳ ಕಥೆ ಏನು?
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Aug 30, 2024 | 2:10 PM

Share

ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಕಳೆದ ಒಂದು ವರ್ಷದಿಂದ ಬಹುತೇಕ ಸಂದರ್ಭಗಳಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಾ ಇತ್ತು. ಪ್ರೈಮ್​ ಟೈಮ್​ನಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಾ ಇತ್ತು. ಆದರೆ, ಈಗ ಹಾಗಿಲ್ಲ. ಧಾರಾವಾಹಿಯ ಟೈಮಿಂಗ್ ಬದಲಾಗಿದೆ. ಈ ಕಾರಣಕ್ಕೆ ಟಿಆರ್​ಪಿಯಲ್ಲಿ ತೀವ್ರ ಇಳಿಕೆ ಆಗಿದೆ. ‘ರಾಮಾಚಾರಿ’ ಟಿಆರ್​ಪಿ ಹೆಚ್ಚಾಗಿದೆ.

ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಎಲ್ಲಕ್ಕಿಂತ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಇತ್ತೀಚೆಗಷ್ಟೇ ಈ ಧಾರಾವಾಹಿ ಪ್ರಸಾರ ಕಾಣಲು ಆರಂಭಿಸಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಸಮಯವನ್ನು ಈ ಧಾರಾವಾಹಿಗೆ ನೀಡಲಾಗಿದೆ. ಈ ಕಾರಣದಿಂದಲೂ ಈ ಧಾರಾವಾಹಿಗೆ ಟಿಆರ್​ಪಿ ಸಿಗುತ್ತಿದೆ. ಈ ಧಾರಾವಾಹಿ ಜೊತೆ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಕೂಡ ಇದೆ.

ಮೂರನೇ ಸ್ಥಾನದಲ್ಲಿ ‘ರಾಮಾಚಾರಿ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ರಾಮಾಚಾರಿ ಹಾಗೂ ಚಾರು ಮದುವೆ ಕಾರಣಕ್ಕೆ ಧಾರಾವಾಹಿಯ ಟಿಆರ್​ಪಿ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಸೀತಾ ಹಾಗೂ ರಾಮನ ಮದುವೆ ನಡೆದಿದೆ. ಈ ಧಾರಾವಾಹಿಯಲ್ಲಿ ಫ್ಯಾಮಿಲಿ ಡ್ರಾಮಾ ನಡೆಯುತ್ತಿದೆ. ಹೀಗಾಗಿ, ಟಿಆರ್​ಪಿ ಹೆಚ್ಚಿದೆ. ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಿಂದ ‘ಪುಟ್ಟಕ್ಕ’ ಔಟ್; ಹೊಸ ಧಾರಾವಾಹಿ ‘ಅಣ್ಣಯ್ಯ’ಗೆ ಭರ್ಜರಿ ರೇಟಿಂಗ್

ಪ್ರತಿ ಬಾರಿ ಜೀ ಕನ್ನಡದ ಧಾರಾವಾಹಿಗಳು ಟಾಪ್​ ಐದರಲ್ಲಿ ಇರುತ್ತಿದ್ದವು. ಆದರೆ, ಈ ಬಾರಿ ಕಲರ್ಸ್ ಕನ್ನಡದ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ ಅನ್ನೋದು ವಿಶೇಷ. ಹೊಸ ಧಾರಾವಾಹಿಗಳಾದ ‘ನಿನಗಾಗಿ’, ‘ಶ್ರೀಗೌರಿ’ ಸಾಧಾರಣ ಟಿಆರ್​ಪಿ ಪಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ