AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಗ್ಗಿತು ‘ಪುಟ್ಟಕ್ಕನ ಮಕ್ಕಳು’ ಟಿಆರ್​ಪಿ; ಹೊಸ ಧಾರಾವಾಹಿಗಳ ಕಥೆ ಏನು?

ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಕಳೆದ ಬಾರಿ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇರುತ್ತಿತ್ತು. ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಕುಸಿತ ಕಂಡಿರುವುದರಿಂದ ಮೊದಲ ಸ್ಥಾನ ‘ಲಕ್ಷ್ಮೀ ನಿವಾಸ’ದ ಪಾಲಾಗಿದೆ. ಈ ಧಾರಾವಾಹಿ ಮುಂದಿನ ಕೆಲ ವಾರ ಮೊದಲ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

ಕುಗ್ಗಿತು ‘ಪುಟ್ಟಕ್ಕನ ಮಕ್ಕಳು’ ಟಿಆರ್​ಪಿ; ಹೊಸ ಧಾರಾವಾಹಿಗಳ ಕಥೆ ಏನು?
ಧಾರಾವಾಹಿ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on: Aug 30, 2024 | 2:10 PM

Share

ಧಾರಾವಾಹಿಗಳ ಟಿಆರ್​ಪಿ ರೇಸ್​ನಲ್ಲಿ ‘ಪುಟ್ಟಕ್ಕನ ಮಕ್ಕಳು’ ಕಳೆದ ಒಂದು ವರ್ಷದಿಂದ ಬಹುತೇಕ ಸಂದರ್ಭಗಳಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಾ ಇತ್ತು. ಪ್ರೈಮ್​ ಟೈಮ್​ನಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಾ ಇತ್ತು. ಆದರೆ, ಈಗ ಹಾಗಿಲ್ಲ. ಧಾರಾವಾಹಿಯ ಟೈಮಿಂಗ್ ಬದಲಾಗಿದೆ. ಈ ಕಾರಣಕ್ಕೆ ಟಿಆರ್​ಪಿಯಲ್ಲಿ ತೀವ್ರ ಇಳಿಕೆ ಆಗಿದೆ. ‘ರಾಮಾಚಾರಿ’ ಟಿಆರ್​ಪಿ ಹೆಚ್ಚಾಗಿದೆ.

ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಈ ಧಾರಾವಾಹಿ ಎಲ್ಲಕ್ಕಿಂತ ಹೆಚ್ಚಿನ ಟಿಆರ್​ಪಿ ಪಡೆದುಕೊಂಡಿದೆ. ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಎರಡನೇ ಸ್ಥಾನದಲ್ಲಿ ‘ಅಣ್ಣಯ್ಯ’ ಧಾರಾವಾಹಿ ಇದೆ. ಇತ್ತೀಚೆಗಷ್ಟೇ ಈ ಧಾರಾವಾಹಿ ಪ್ರಸಾರ ಕಾಣಲು ಆರಂಭಿಸಿದೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಸಮಯವನ್ನು ಈ ಧಾರಾವಾಹಿಗೆ ನೀಡಲಾಗಿದೆ. ಈ ಕಾರಣದಿಂದಲೂ ಈ ಧಾರಾವಾಹಿಗೆ ಟಿಆರ್​ಪಿ ಸಿಗುತ್ತಿದೆ. ಈ ಧಾರಾವಾಹಿ ಜೊತೆ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಕೂಡ ಇದೆ.

ಮೂರನೇ ಸ್ಥಾನದಲ್ಲಿ ‘ರಾಮಾಚಾರಿ’ ಧಾರಾವಾಹಿ ಇದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ರಾಮಾಚಾರಿ ಹಾಗೂ ಚಾರು ಮದುವೆ ಕಾರಣಕ್ಕೆ ಧಾರಾವಾಹಿಯ ಟಿಆರ್​ಪಿ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಸೀತಾ ಹಾಗೂ ರಾಮನ ಮದುವೆ ನಡೆದಿದೆ. ಈ ಧಾರಾವಾಹಿಯಲ್ಲಿ ಫ್ಯಾಮಿಲಿ ಡ್ರಾಮಾ ನಡೆಯುತ್ತಿದೆ. ಹೀಗಾಗಿ, ಟಿಆರ್​ಪಿ ಹೆಚ್ಚಿದೆ. ಐದನೇ ಸ್ಥಾನದಲ್ಲಿ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿ ಇದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಿಂದ ‘ಪುಟ್ಟಕ್ಕ’ ಔಟ್; ಹೊಸ ಧಾರಾವಾಹಿ ‘ಅಣ್ಣಯ್ಯ’ಗೆ ಭರ್ಜರಿ ರೇಟಿಂಗ್

ಪ್ರತಿ ಬಾರಿ ಜೀ ಕನ್ನಡದ ಧಾರಾವಾಹಿಗಳು ಟಾಪ್​ ಐದರಲ್ಲಿ ಇರುತ್ತಿದ್ದವು. ಆದರೆ, ಈ ಬಾರಿ ಕಲರ್ಸ್ ಕನ್ನಡದ ಎರಡು ಧಾರಾವಾಹಿಗಳು ಸ್ಥಾನ ಪಡೆದಿವೆ ಅನ್ನೋದು ವಿಶೇಷ. ಹೊಸ ಧಾರಾವಾಹಿಗಳಾದ ‘ನಿನಗಾಗಿ’, ‘ಶ್ರೀಗೌರಿ’ ಸಾಧಾರಣ ಟಿಆರ್​ಪಿ ಪಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!
ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!